• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖಲಿಸ್ತಾನ ಹೋರಾಟಕ್ಕೆ ಮರುಜೀವ ನೀಡಲು ಪಾಕ್ ಐಎಸ್ಐ ಕುತಂತ್ರ

TNN Correspondent Posted On November 17, 2017
0


0
Shares
  • Share On Facebook
  • Tweet It

ಚಂಡಿಗಡ್: ಪಾಕ್ ಗುಪ್ತಚರ ಸಂಸ್ಥೆ ಐಎಸ್ಐ ಕೇವಲ ಪಾಕಿಸ್ತಾನದಲ್ಲಷ್ಟೇ ಅಲ್ಲ, ಭಾರತದ ನೆಮ್ಮದಿ ಹಾಳು ಮಾಡಲು ಪ್ರಯತ್ನಿಸುತ್ತಿದೆ. ಕೆನಡಾ, ಯುಕೆ ಮತ್ತು ಇಟಲಿ ಮೂಲಕ ತನ್ನ ಗುಪ್ತಚರ ಕಾರ್ಯವನ್ನು ಮಾಡುತ್ತಿದ್ದು,  ಭಾರತದಲ್ಲಿ ಖಲಿಸ್ತಾನದ ಹೋರಾಟಕ್ಕೆ ಮರುಜೀವ ನೀಡಲು ಸಂಚು ಹೂಡುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಖಲಿಸ್ತಾನ ಪ್ರತ್ಯೇಕ ಹೋರಾಟ ನಿಯಂತ್ರಣಕ್ಕೆ ಪಂಜಾಬ್ ಸರಕಾರ ಪಂಜಾಬ್ ಕಂಟ್ರೋಲ್ ಆಫ್ ಆರ್ಗನೈಸಡ್ ಕ್ರೈಮ್ ಆ್ಯಕ್ಟ್ ಜಾರಿಗೆ ತಂದಿದ್ದು, ಯಾವುದೇ ಕಾರಣಕ್ಕೂ ಪಾಕ್ ಕುತಂತ್ರಕ್ಕೆ ಬಲಿಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಖಲಿಸ್ತಾನ ಹೋರಾಟಗಾರರಿಗೆ ಬೆಂಬಲ ನೀಡುವುದು, ಪೂರಕ ಸಾಮಾಗ್ರಿ ಪೂರೈಸುವುದನ್ನು ನಾನಾ ಮೂಲಗಳಿಂದ ಮಾಡುತ್ತಿದೆ. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಳುಗೆಡವಲು ನಿರ್ಧರಿಸಿದೆ. ಅದಕ್ಕಾಗಿ ಸ್ಥಳೀಯ ರೌಡಿ ಗುಂಪುಗಳ ಮುಖಂಡರನ್ನು ಬಳಸಿಕೊಳ್ಳುತ್ತಿದೆ ಎಂಬ ಮಾಹಿತಿ ಇತ್ತೀಚೆಗೆ ಬಂಧಿಸಿದ ಆರೋಪಿಗಳಿಂದ ಹೊರ ಬಂದಿದೆ ಎಂದು ತಿಳಿಸಿದ್ದಾರೆ.

ಪಂಜಾಬ್ ನಲ್ಲಿ ಭಯೋತ್ಪಾದನೆ ಸೃಷ್ಟಿಸುವುದನ್ನು ತಡೆಯಲು ಪಂಜಾಬ್ ಗುಪ್ತಚರ ಸಂಸ್ಥೆಗಳು ಕೇಂದ್ರ ಸರಕಾರದ ತನಿಖಾ ಸಂಸ್ಥೆಗಳ ಸಹಕಾರದೊಂದಿಗೆ ಸೂಕ್ತ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪಂಜಾಬ್ ನಲ್ಲಿ ನಡೆದ ಹಿಂದೂ ಮುಖಂಡರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಆರು ಆರೋಪಿಗಳನ್ನು  ಪಂಜಾಬ್ ಪೊಲೀಸರು ಬಂಧಿಸಿದ್ದರು. ಆ ಆರೋಪಿಗಳು ಪಾಕ್ ಗುಪ್ತಚರ ಇಲಾಖೆ ಕೆನಡಾ, ಯುಕೆ, ಇಟಲಿ ಮೂಲಕ ಭಾರತದಲ್ಲಿ ಕೋಮು ಗಲಭೆ ಸೃಷ್ಟಿಸಲು ಸಂಚು ಹೂಡಿದೆ ಎಂಬ ಮಾಹಿತಿ ಹೊರ ಬಿದ್ದಿತ್ತು.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search