• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸಿಎಂ ಸಿದ್ದರಾಮಯ್ಯನವರೇ, ಖಾಸಗಿ ವೈದ್ಯರೇ, ನೀವು ರಾಜಿಯಾಗಲು 80 ಜನರ ಬಲಿ ಬೇಕಾಯಿತೆ?

-ವಿಶಾಲ್ ಗೌಡ, ಕುಶಾಲನಗರ Posted On November 18, 2017
0


0
Shares
  • Share On Facebook
  • Tweet It

ಬೀದರಿನ ಹುಮನಾಬಾದ್ ನಲ್ಲಿ ಹೃದಯಾಘಾತ ಬಳಿಕ ಚಿಕಿತ್ಸೆ ದೊರಕದೆ ಅನಿವಾಶ್ (35) ಸಾವು…

ಖಾಸಗಿ ವೈದ್ಯರ ಮುಷ್ಕರಕ್ಕೆ ಪುತ್ತೂರಿನಲ್ಲಿ ಬಾಲಕಿ ಬಲಿ…

ಚಿಂತಾಮಣಿಯಲ್ಲಿ ಶಿಡ್ಲಘಟ್ಟ, ಚಿಂತಾಮಣಿ, ಕೋಲಾರ ಸುತ್ತಿದರೂ ವೈದ್ಯರು ಸಿಗದೆ 5 ತಿಂಗಳ ಮಗು ಸಾವು…

ಹಲವು ದಿನಗಳಿಂದ ರಾಜ್ಯದಲ್ಲಿ ಖಾಸಗಿ ವೈದ್ಯರ ಮುಷ್ಕರ, 80ಕ್ಕೂ ಅಧಿಕ ಜನ ಸಾವು…

ಅಷ್ಟಾದರೂ ಕಡೆದು ಕಟ್ಟೆ ಹಾಕಿದ್ದೇನು?

ಚಿಕಿತ್ಸೆ ನೀಡುವಾಗ ತಪ್ಪೆಸಗಿದ ವೈದ್ಯರಿಗೆ ಜೈಲು ಶಿಕ್ಷೆ ಬದಲಿಗೆ ದಂಡ…

ಶವ ಇಟ್ಟುಕೊಂಡು ಹಣಕ್ಕಾಗಿ ಪೀಡನೆ ಮಾಡುವಂತಿಲ್ಲ…

ಕುಂದು ಕೊರತೆ ಸಮಿತಿ ದೋಷ ಕೈ ಬಿಡುವುದು…

ಹೀಗೆ, ಇಂಥ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಲು ಒಪ್ಪಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ ಅಂಗೀಕರಿಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ಖಾಸಗಿ ವೈದ್ಯರು ಸಹ ತಮಗೆ ಅನುಕೂಲವಾಯಿತು ಎಂದು ಸರ್ಕಾರದ ಜತೆ ರಾಜಿ ಮಾಡಿಕೊಂಡಿದ್ದಾರೆ. ಖಂಡಿತವಾಗಿಯೂ ವೈದ್ಯರು ಮುಷ್ಕರ ಕೈ ಬಿಟ್ಟಿದ್ದು ಸ್ವಾಗತಾರ್ಹವೇ ಆಗಿದೆ.

ಆದರೆ, ಐದು ದಿನಗಳಲ್ಲಿ ಮೃತಪಟ್ಟ 80 ಜೀವಗಳನ್ನು ಬದುಕಿಸಬಲ್ಲಿರೇ ಮುಖ್ಯಮಂತ್ರಿಯವರೇ? 80 ಜೀವಗಳ ಕುಟುಂಬಸ್ಥರನ್ನು ಯಾವ ಇಂಜೆಕ್ಷನ್ ಮೂಲಕ ಗುಣಪಡಿಸಬಲ್ಲಿರಿ ಖಾಸಗಿ ವೈದ್ಯರೇ?

ಇಂಥಾದ್ದೊಂದು ಮಸೂದೆ ಅಂಗೀಕರಿಸುವ ಮುನ್ನ ರಾಜ್ಯ ಸರ್ಕಾರ ಖಾಸಗಿ ವೈದ್ಯರ ಜತೆ ಚರ್ಚಿಸಬೇಕಿತ್ತು. ಖಾಸಗಿ ವೈದ್ಯರು ಸಹ ಆಸ್ಪತ್ರೆಗೆ ಬೀಗ ಜಡಿಯದೆಯೇ ಪ್ರತಿಭಟನೆ ಮಾಡಬಹುದಿತ್ತು. ಆದಾವುದೂ ಆಗಲಿಲ್ಲ. ರಾಜ್ಯ ಸರ್ಕಾರವೇನೋ ಮೊಂಡು ವಾದ ಹಿಡಿಯಿತು. ಇತ್ತ ವೈದ್ಯರೂ ಭಂಡತನಕ್ಕೆ ಬಿದ್ದರು, ಹಾಗಾಗಿ ಐದು ದಿನ ಖಾಸಗಿ ಆಸ್ಪತ್ರೆಗಳು ಬಂದ್ ಆದವು. ದಿನಕ್ಕಿಷ್ಟು ಜೀವಗಳು ತರೆಗೆಲೆಗಳಂತೆ ಉದುರಿದವು. ಅನಾರೋಗ್ಯಕ್ಕೀಡಾದ ಜನ ಬೀದಿ ಬೀದಿ, ಆಸ್ಪತ್ರೆ, ಆಸ್ಪತ್ರೆ ಅಲೆದಾಡಿದರು, ಬಸವಳಿದರು.

ಜನ ಹಿತಕ್ಕಾಗಿ ಜಾರಿ ಮಾಡಲು ಹೊರಟಿದ್ದೇವೆ ಎಂದ ಮುಖ್ಯಮಂತ್ರಿಯವರು ಖಾಸಗಿ ವೈದ್ಯರು ಪ್ರತಿಭಟನೆ ಮಾಡಲು ಶುರುಮಾಡಿದಾಗಲೇ ಅವರ ಜತೆ ರಾಜೀಮಾಡಿಕೊಳ್ಳಬಹುದಿತ್ತು. ಆದರೆ, ಕೇವಲ ಅರ್ಧತಾಸಿನ ಸಭೆ ಸೇರಲು, ಸಂಧಾನ ಮಾಡಿಕೊಳ್ಳಲು ಸಿದ್ದರಾಮಯ್ಯ ಅವರು 80 ಜೀವ ಹೋಗುವ ತನಕ ಕಾಯ್ದರು. ಅತ್ತ ವೈದ್ಯೋ ನಾರಾಯಣ ಹರಿ ಎಂಬ ಹಣೆಪಟ್ಟಿ ತೊಟ್ಟ ವೈದ್ಯರು, ಅಕ್ಷರಶಃ 80 ಜನರ ಪಾಲಿಗೆ ಯಮಧೂತರಾದರು. ಹೀಗೆ ಇವರಿಬ್ಬರು ಮಾಡಿದ ತಪ್ಪಿಗೆ ರಾಜ್ಯದ ಜನ ತೊಂದರೆ ಅನುಭವಿಸುವಂತಾಯಿತು. ಪ್ರಾಣ ಕಳೆದುಕೊಳ್ಳಬಹುದಾಯಿತು. ಒಟ್ಟಿನಲ್ಲಿ ಕರ್ನಾಟಕ ಖಾಸಗಿ ವೈದ್ಯ ಸಂಸ್ಥೆಗಳ ಮಸೂದೆ 80 ಜೀವಗಳನ್ನು ಪಡೆಯಿತು. ಈ 80 ಜನರ ಹಾಗೂ ಅವರ ಕುಟುಂಬದವರ ಶಾಪ ತಟ್ಟದೆ ಇರುತ್ತದೆಯೇ ಮುಖ್ಯಮಂತ್ರಿ ಹಾಗೂ ಖಾಸಗಿ ವೈದ್ಯರೇ? ನಿಮ್ಮ ಕುಟುಂಬಸ್ಥರಿಗೇ (ಹಾಗೆ ಆಗದಿರಲಿ) ಇಂಥ ಪರಿಸ್ಥಿತಿ ಬಂದಿದ್ದರೆ ಸುಮ್ಮನಿರುತ್ತಿದ್ರಾ? ಮನುಷ್ಯತ್ವ ಮರೆಯುವ ಮುನ್ನ ಒಮ್ಮೆಯಾದರೂ ಯೋಚಿಸಿ.

 

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
-ವಿಶಾಲ್ ಗೌಡ, ಕುಶಾಲನಗರ September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
-ವಿಶಾಲ್ ಗೌಡ, ಕುಶಾಲನಗರ September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search