• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿವಾದಾತ್ಮಕ ಹೇಳಿಕೆ ಜಮೈತ್ ಉಲೆಮಾ ಈ ಹಿಂದ್ ಮುಖ್ಯಸ್ಥ ಮದನಿ ವಿರುದ್ಧ ದೂರು ದಾಖಲು

TNN Correspondent Posted On November 18, 2017
0


0
Shares
  • Share On Facebook
  • Tweet It

ಗುವಾಹಟಿ: ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕತ್ವ ನೋಂದಣಿಯನ್ನು ವಿರೋಧಿಸಿ ವಿವಾದಾತ್ಮಕ ಹೇಳಿಕೆ ನೀಡಿರುವ ಜಮೈತ ಉಲೆಮಾ ಈ ಹಿಂದ್ ಮುಖ್ಯಸ್ಥ ಮೌಲಾನಾ ಅರ್ಷದ್ ಮದನಿ ವಿರುದ್ಧ ಮೂರು ಎಫ್ಐಆರ್ ದಾಖಲಿಸಲಾಗಿದೆ.

ದೆಹಲಯಲ್ಲಿ ನಡೆದ ಉಪನ್ಯಾಸವೊಂದರಲ್ಲಿ ಮದನಿ ವಿವಾದಾತ್ಮಕ, ಪ್ರಚೋದನಾತ್ಮಕ ಮತ್ತು ರಾಷ್ಟ್ರ ವಿರೋಧಿ ಹೇಳಿಕೆ ನೀಡಿದ್ದ. ಪ್ರಚೋದನಕಾರಿ ಹೇಳಿಕೆ ಕುರಿತು ಪರಿಶೀಲಿಸಲಾಗುತ್ತಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಡಿಜಿಪಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ರಾಷ್ಟ್ರೀಯ ನಾಗರಿಕತ್ವ ನೋಂದಣಿ ಕಾರ್ಯದಿಂದ ಮುಸ್ಲಿಮರನ್ನು ಕೈಬಿಡದಿದ್ದರೇ ಅಸ್ಸಾಂ ಪರಿಸ್ಥಿತಿ ಹದಗೆಡಲಿದೆ. ಅಸ್ಸಾಂನಲ್ಲಿ ಶಾಂತಿ ನೆಲೆಸಬೇಕೆಂದರೆ ಕೂಡಲೇ ನೋಂದಣಿ ಕಾರ್ಯದಿಂದ ಮುಸ್ಲಿಂರನ್ನು ಕೈ ಬಿಡಬೇಕು ಎಂದು ಆಗ್ರಹಿಸಿದ್ದ. ಅಲ್ಲದೇ ಅಸ್ಸಾಂನಲ್ಲಿ 70 ಲಕ್ಷ ಮುಸ್ಲಿಮರಿದ್ದು ಅವರಿಗೆ ಇದರಿಂದ ಅನ್ಯಾಯವಾಗುತ್ತದೆ. ಕೈಬಿಡದಿದ್ದರೆ ಶಾಂತಿ ಕದಡಲಿದೆ. ಭಾರತೀಯ ಜನತಾ ಪಕ್ಷ ಮಯನ್ಮಾರನಲ್ಲಿ ನಿರ್ಮಾಣವಾಗಿರುವ ಸ್ಥಿತಿ ಅಸ್ಸಾಂನಲ್ಲೂ ನಿರ್ಮಿಸುತ್ತಿದೆ ಎಂದು ಹೇಳಿದ್ದ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಸರಕಾರ ರಾಷ್ಟ್ರೀಯ ನಾಗರಿಕ ನೋಂದಣಿ ಯೋಜನೆಯಿಂದ ಹಿಂದೆ ಸರಿಯುವುದಿಲ್ಲ. ವಿವಾದ ಸೃಷ್ಟಿಸಿ, ಶಾಂತಿ ಕದಡಲು ಪ್ರಯತ್ನಿಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search