• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತಾಯಿಗಿಂತ ದೊಡ್ಡ ಸ್ಥಾನವಿಲ್ಲ ಎಂದ ಮಾನುಷಿಗೆ ವಿಶ್ವಸುಂದರಿ ಪಟ್ಟ

TNN Correspondent Posted On November 19, 2017


  • Share On Facebook
  • Tweet It

ಬೀಜಿಂಗ್: ‘ತಾಯಿ ಸ್ಥಾನವೇ ಅತಿ ದೊಡ್ಡದು. ಬರೀ ಹಣದಿಂದ ಏನನ್ನು ಅಳೆಯಲು ಆಗುವುದಿಲ್ಲ. ಪ್ರೀತಿ ಮತ್ತು ವಿಶ್ವಾಸಕ್ಕೆ ಸಾಟಿ ತಾಯಿ. ತಾಯಿಯೇ ನನ್ನ ಜೀವನಕ್ಕೆ ಸ್ಫೂರ್ತಿ. ತಾಯಿ ಸ್ಥಾನ ಅತ್ಯಂತ ಗೌರವಯುತವಾದದ್ದು ಎಂದು ಟಾಪ್ 5ರ ಸ್ಥಾನದಲ್ಲಿದ್ದಾಗ ವಿಶ್ವಸುಂದರಿ ಆಯ್ಕೆಗಾರರು ಕೇಳಿದ ಯಾವ ವೃತ್ತಿ ಶ್ರೇಷ್ಠ, ಯಾವ ವೃತ್ತಿಗೆ ಅತಿ ಹೆಚ್ಚು ಸಂಭಾವನೆ ದೊರೆಯುತ್ತದೆ ಎಂಬ ಪ್ರಶ್ನೆಗೆ ವಿಶ್ವಸುಂದರಿ ಮಾನುಷಿ ಚಿಲ್ಲರ್ ಉತ್ತರಿಸಿ ಪರಿ ಇದು.

ಈಗ ಅದೇ 20 ವರ್ಷದ ಸುಂದರಿ ಮಾನುಷಿಗೆ ವಿಶ್ವಸುಂದರಿ ಪಟ್ಟ ದೊರಕಿದೆ. 17 ವರ್ಷದ ನಂತರ ವಿಶ್ವಸುಂದರಿ ಪ್ರಶಸ್ತಿಯನ್ನು ಭಾರತದ ಮಾನುಷಿ ಚಿಲ್ಲರ್ ಮುಡಿಗೇರಿಸಿಕೊಂಡಿದ್ದಾರೆ. ಶನಿವಾರ ಚೀನಾದ ಸಾನ್ಯದಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 108 ಜನರಲ್ಲಿ ಮಾನುಷಿ ಪ್ರಥಮರಾಗಿ ಆಯ್ಕೆಯಾಗಿದ್ದಾರೆ.

ಭಾರತದಿಂದ 2000ರಲ್ಲಿ ಆಯ್ಕೆಯಾದ ನಟಿ ಪ್ರಿಯಾಂಕಾ ಚೋಪ್ರಾ ನಂತರ ಇದೀಗ ವಿಶ್ವಸುಂದರಿಯಾಗಿ ಮಾನುಷಿ ಚಿಲ್ಲರ್ ಹೊರ ಹೊಮ್ಮಿದ್ದಾರೆ. ವಿಶ್ವಸುಂದರಿ 2016ರ ಪಟ್ಟಹೊಂದಿದ್ದ ಪೋರ್ಟೋ ರಿಕೋ ಸ್ಟಿಪನಿಯಾ ಮಾನುಷಿಗೆ ವಿಶ್ವಸುಂದರಿ ಕಿರೀಟ ಧರಿಸಿದರು.  ಈ ಅದ್ಭುತ ಕ್ಷಣಕ್ಕೆ ಚಿಲ್ಲರ್ ಅವರ ತಂದೆ, ತಾಯಿ, ಸಹೋದರ, ಸಹೋದರಿ ಸಾಕ್ಷಿಯಾಗಿದ್ದರು.

ಹರ್ಯಾಣ ಮೂಲದ 20 ವಯಸ್ಸಿನ ಮಾನುಷಿ ಭಾರತದಲ್ಲಿ ನಡೆದ ಫೇಮಿನಾ ಮಿಸ್ ಇಂಡಿಯಾ ಪ್ರಶಸ್ತಿಯನ್ನು ಪಡೆದಿದ್ದರು. ವೈದ್ಯರ ಪುತ್ರಿಯಾಗಿರುವ ಮಾನುಷಿ ದೆಹಲಿಯಲ್ಲಿರುವ ಸೆಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, ಸೋನೆಪತ್ ನಲ್ಲಿ ಮಹಿಳೆಯರ ಸರಕಾರಿ ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ಅಧ್ಯಯನ ಮಾಡುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search