• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರತಿಭಟನೆಗೆ ಬೆದರಿ ಪದ್ಮಾವತಿ ಬಿಡುಗಡೆ ಮುಂದೂಡಿಕೆ

TNN Correspondent Posted On November 20, 2017


  • Share On Facebook
  • Tweet It

ಮುಂಬೈ: ಇತಿಹಾಸವನ್ನು ತಿರುಚಿ ಮಹಾರಾಣಿ ಪದ್ಮಾವತಿಯನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂಬ ಆರೋಪವಿರುವ ಪದ್ಮಾವತಿ ಚಿತ್ರದ ಬಿಡುಗಡೆಯನ್ನು ಪ್ರತಿಭಟನೆಗೆ ಬೆದರಿ ಮುಂದೂಡಲಾಗಿದೆ. ನಿಗದಿಯಂತೆ ಡಿಸೆಂಬರ್ 1ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರ ಬಿಡುಗಡೆಗೆ ರಾಷ್ಟ್ರಾಧ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜನವರಿಯಲ್ಲಿ ಚಿತ್ರ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಇತ್ತೀಚೆಗೆ ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಸೇರಿ ರಾಷ್ಟ್ರಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಚಿತ್ರವನ್ನು ಸೆನ್ಸಾರ್ ಮಂಡಳಿ ಸರ್ಟಿಫಿಕೆಟ್  ನೀಡುವ ಮುನ್ನವೇ ಪ್ರದರ್ಶನ ಮಾಡಿದ್ದು, ಮಂಡಳಿ ಕೆಂಗಣ್ಣಿಗೆ ಗುರಿಯಾಗಿದೆ. ಸೂಕ್ತ ದಾಖಲೆ ನೀಡಿಲ್ಲ, ಪೂರ್ಣ ಮಾಹಿತಿ ನೀಡಿ ಎಂದು ವಿವರಣೆ ಕೇಳಿತ್ತು. ಹೀಗೆ ಸಾಲು ಸಾಲು ತೊಡಕುಗಳು ಎದುರಾಗಿದ್ದರಿಂದ ಪದ್ಮಾವತಿ ಚಿತ್ರವನ್ನು ಜನವರಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ವಿರುದ್ಧವಾದ ಚಿತ್ರವನ್ನು ರಚಿಸಲು ನಿರ್ದೇಶಕ ಬನ್ಸಾಲಿಗೆ ಸೌದಿ ಅರೇಬಿಯಾದಿಂದ ಹಣ ಬರುತ್ತಿದೆ ಎಂದು ಇತ್ತೀಚೆಗೆ ಬಿಜೆಪಿ ರಾಜ್ಯ ಸಭೆ ಸದಸ್ಯ ಸುಬ್ರಮಣ್ಯ ಸ್ವಾಮಿ ಆರೋಪಿಸಿದ್ದರು. ಇದೇ ರೀತಿ ಹಲವು ವಿರೋಧಗಳು, ಅಪವಾದಗಳು ಪದ್ಮಾವತಿ ಚಿತ್ರಕ್ಕೆ ಎದುರಾಗಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search