• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದಲ್ಲಿ ಕಲ್ಲು ತೂರಾಟಗಾರರಿಂದ ಗಾಯಗೊಂಡವರಿಗೆ ನೌಕರಿ ನೀಡಲು ಮುಂದಾದ ರಾಜ್ಯ ಸರ್ಕಾರ!

TNN Correspondent Posted On November 20, 2017


  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗುತ್ತಿದೆ ಎಂದು ಭದ್ರತಾ ಸಿಬ್ಬಂದಿ ಹಿರಿಯ ಅಧಿಕಾರಿಗಳು ಹೇಳಿರುವ ಬೆನ್ನಲ್ಲೇ ರಾಜ್ಯ ಸರಕಾರ ದಿಟ್ಟ ನಿರ್ಧಾರವೊಂದು ಕೈಗೊಂಡಿದ್ದು, ಕಲ್ಲು ತೂರಾಟಗಾರರಿಂದ ಗಾಯಗೊಂಡವರಿಗೆ ಸರಕಾರಿ ನೌಕರಿ ನೀಡಲು ಮುಂದಾಗಿದೆ.

ರಾಜ್ಯ ಮಾನವ ಹಕ್ಕುಗಳ ಆಯೋಗದ ವರದಿ ಪ್ರಕಾರ, 2016ರ ಜುಲೈ 8ರಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವನಿ ಹತ್ಯೆಯಾದ ಬಳಿಕ ಕಲ್ಲು ತೂರಾಟಗಾರರ ಏಟಿಗೆ 2,524 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದರಲ್ಲಿ 59 ಮಹಿಳೆಯರು ಸೇರಿ 1,725 ಸಂತ್ರಸ್ತರ ಪಟ್ಟಿಯನ್ನು ಸರ್ಕಾರ ಪರಿಷ್ಕರಿಸಿ ಆಯೋಗಕ್ಕೆ ನೀಡಿದ್ದು, ಇವರಲ್ಲಿ ಕಣ್ಣು ಕಳೆದುಕೊಂಡವರು ಅಥವಾ ಭಾಗಶಃ ಅಂಗವಿಕಲರಾದವರಿಗೆ ಸರ್ಕಾರಿ ನೌಕರಿ ನೀಡುವುದಾಗಿ ತಿಳಿಸಿದೆ.

ಅಲ್ಲದೆ, ಇವರಲ್ಲಿ ಸಂಪೂರ್ಣವಾಗಿ ಕಣ್ಣು ಕಳೆದುಕೊಂಡ 12 ಸಂತ್ರಸ್ತರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ತೀವ್ರ ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಧನ ಸಹ ಸರಕಾರ ಘೋಷಣೆ ಮಾಡಿದೆ.

ಶೋಪಿಯಾನ್, ಕುಲ್ಗಾಮ್ ಸೇರಿ ಕಲ್ಲು ತೂರಾಟ ಪ್ರಕರಣ ಜಾಸ್ತಿ ನಡೆಯುವ ಕಾಶ್ಮೀರದ ಹತ್ತು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿ ಅಂಕಿ-ಅಂಶ ಕಲೆಹಾಕಲಾಗಿದೆ. ಬಂಡಿಪೋರಾ ಮತ್ತು ಬುದ್ಗಾಮ್ ಜಿಲ್ಲೆಗಳ ಅಂಕಿ-ಅಂಶ ಪಡೆಯುವುದು ಬಾಕಿ ಇದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ನಿವೃತ್ತ ನ್ಯಾಯಮೂರ್ತಿ ಬಿಲಾಲ್ ನಜ್ಕಿ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search