• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಹುಲ್ ಗಾಂಧಿ ಯಾರೋ ಗೊತ್ತಿಲ್ಲ, ಚುನಾವಣೆ ವೇಳೆ ಮಾತ್ರ ಕಾಣಿಸಿಕೊಳ್ಳುತ್ತಾರೆ: ಹೀಗೆ ಹೇಳಿದ್ದು ಯಾರು ಗೊತ್ತಾ?

TNN Correspondent Posted On November 23, 2017


  • Share On Facebook
  • Tweet It

ರಾಹುಲ್ ಗಾಂಧಿ…

ಹೀಗೆ ಹೇಳುತ್ತಲೇ ಕಾಂಗ್ರೆಸ್ಸಿಗರು ಎಚ್ಚೆತ್ತುಕೊಳ್ಳುತ್ತಾರೆ. ಅವರು ರಾಷ್ಟ್ರೀಯ ನಾಯಕ ಎನ್ನುತ್ತಾರೆ. ಯುವಜನತೆಯ ಮುಕುಟಮಣಿ ಎನ್ನುತ್ತಾರೆ. ರಾಹುಲ್ ಗಾಂಧಿಯೂ ಎಲ್ಲಿಯೇ ಜನ ಸೇರಲಿ, ಮೈಕ್ ಸಿಗಲಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಾರೆ ಹಾಗೂ ನಗೆಪಾಟಲಿಗೀಡಾಗುತ್ತಾರೆ.

ಇಂಥ ರಾಹುಲ್ ಗಾಂಧಿ ಅವರನ್ನೇ ಯಾರೋ ಗೊತ್ತಿಲ್ಲ ಎಂದಿದ್ದಾರೆ ಗುಜರಾತ್ ವಿದ್ಯಾರ್ಥಿಗಳು…

ಹೌದು, ದಿ ಪ್ರಿಂಟ್ ವೆಬ್ ಪೋರ್ಟಲ್ ಕಾಲೇಜು ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿಗಳ, ಅದರಲ್ಲೂ ಮೊದಲ ಬಾರಿಗೆ ವೋಟ್ ಮಾಡಲಿರುವ ವಿದ್ಯಾರ್ಥಿಗಳ ಸಂದರ್ಶನ ಮಾಡಿದೆ. ಅದರಲ್ಲಿ ವಿದ್ಯಾರ್ಥಿಗಳು ರಾಹುಲ್ ಗಾಂಧಿ ಯಾರು ಅಂತ ಗೊತ್ತಿಲ್ಲ ಎಂದಿದ್ದಾರೆ.

ರಾಜ್ ಕೋಟ್ ನ ಆತ್ಮೀಯ ಇನ್ಸ್ಟಿಟ್ಯೂಟ್ ಆಫ್ ಟೆಕ್ಲಾಲಜಿ ಆ್ಯಂಡ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳು ಗುಜರಾತಿನಲ್ಲಿ ಬಿಜೆಪಿ ಅಭಿವೃದ್ಧಿ ಮಾಡಿದ ವಿಷಯದ ಕುರಿತು ಮಾತನಾಡಿದರೆ, ಪಿ.ಡಿ.ಮಾಳವೀಯ ಕಾಲೇಜು ವಿದ್ಯಾರ್ಥಿಗಳಂತೂ ರಾಹುಲ್ ಯಾರು ಅಂತಲೇ ಗೊತ್ತಿಲ್ಲ ಎಂದಿದ್ದಾರೆ.

ಪಿ.ಡಿ.ಮಾಳವೀಯ ಕಾಲೇಜಿನ ಕಾಮರ್ಸ್ ವಿದ್ಯಾರ್ಥಿಗಳಾದ ಹಾರ್ದಿಲ್ ಸೋಲಂಕಿ ಹಾಗೂ ವೀರೇಂದ್ರ ಮೋರಿ ಎಂಬ ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಬಗ್ಗೆ ವೆಬ್ ಪೋರ್ಟಲ್ ಪ್ರಶ್ನೆ ಕೇಳಿದ್ದಕ್ಕೆ, “ರಾಹುಲ್ ಗಾಂಧಿ ಯಾರೋ ಗೊತ್ತಿಲ್ಲ, ಅವರು ಚುನಾವಣೆ ವೇಳೆ ಮಾತ್ರ ಕಾಣಿಸಿಕೊಳ್ಳುತ್ತಾರೆ” ಎಂದಿದ್ದಾರೆ.

ಮುಂದಿನ ತಿಂಗಳಲ್ಲಿ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ರಾಹುಲ್ ಗಾಂಧಿಯವರು ಕಾಂಗ್ರೆಸ್ ಗೆಲ್ಲಿಸುವ ಮೂಲಕ 2019ರ ಲೋಕಸಭೆ ಚುನಾವಣೆಯಲ್ಲಿ ಮುನ್ನಡೆ ಸಾಧಿಸುವ ತಂತ್ರ ರೂಪಿಸಿದ್ದಾರೆ. ಆದರೆ ಗುಜರಾತಿನಲ್ಲಿ ಮತ ಹಾಕುವ ವಿದ್ಯಾರ್ಥಿಗಳೇ ರಾಹುಲ್ ಯಾರು ಎಂದು ಕೇಳಿರುವುದು ರಾಹುಲ್ ಗಾಂಧಿ ಪ್ರಭಾವ, ನಾಯಕತ್ವವನ್ನೇ ಪ್ರಶ್ನಿಸುವಂತಿದೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search