• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಂಗಾ ಶುದ್ಧೀಕರಣ ಆಯ್ತು, ಈಗ ಗೋದಾವರಿ-ಕಾವೇರಿ ನದಿ ಜೋಡಣೆಗೆ ಕೇಂದ್ರ ಸರ್ಕಾರ ನಿರ್ಧಾರ!

TNN Correspondent Posted On November 24, 2017
0


0
Shares
  • Share On Facebook
  • Tweet It

ಚೆನ್ನೈ: ಸುಮಾರು 20 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಗಂಗಾ ನದಿ ಶುದ್ಧೀಕರಣದಂಥ ಮಹತ್ತರ ಯೋಜನೆ ಘೋಷಿಸಿರುವ ಸರ್ಕಾರ, ಈಗ ಅಂಥಾದ್ದೇ ತೀರ್ಮಾನ ಪ್ರಕಟಿಸಿದ್ದು, ಗೋದಾವರಿ-ಕಾವೇರಿ ನದಿ ಜೋಡಣೆ ಮಾಡುವುದಾಗಿ ತಿಳಿಸಿದೆ.

ಗೋದಾವರಿ ನದಿಯ ಹೆಚ್ಚುವರಿ ನೀರು ಸಮುದ್ರ ಪಾಲಾಗುವ ಬದಲು ಕೊಳವೆ ಮಾರ್ಗದ ಮೂಲಕ ಕಾವೇರಿ ನದಿಗೆ ಜೋಡಣೆ ಮಾಡುವುದಾಗಿ ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಚೆನ್ನೈನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಜೇಟ್ಲಿ, ಕೇಂದ್ರ ಸರ್ಕಾರದ ಮಹತ್ತರ ನದಿ ಜೋಡಣೆ ಯೋಜನೆಯ ಭಾಗವಾಗಿ ಗೋದಾವರಿ-ಕಾವೇರಿ ನದಿ ಜೋಡಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಮುಂದಿನ ದಿನಗಳಲ್ಲಿ ಕಾವೇರಿ-ಗೋದಾವರಿ ನದಿ ಫಲಾನುಭವಿಗಳಾದ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ತೆಲಂಗಾಣ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಲಾಗುತ್ತದೆ. ಪ್ರಸ್ತುತ ಯೋಜನೆ ಪ್ರಾರಂಭಿಕ ಹಂತದಲ್ಲಿದ್ದು, ಯೋಜನೆಗೆ ಕೇಂದ್ರ ಸರ್ಕಾರ ಶೇ.90ರಷ್ಟು ಹಾಗೂ ಆಯಾ ರಾಜ್ಯ ಸರ್ಕಾರಗಳು ಶೇ.10ರಷ್ಟು ಹಣ ಭರಿಸಲಿವೆ ಎಂದು ವಿವರಿಸಿದ್ದಾರೆ.

ಗೋದಾವರಿ ನದಿಯ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಸಿ, ಅಲ್ಲಿಂದ ಉತ್ತರ ಪಿನಾಕಿನಿ ನದಿಯಿಂದ ಕಾವೇರಿ ನದಿಗೆ ಹರಿಸುವ ಈ ಮಹತ್ತರ ಯೋಜನೆಯಿಂದ ನೀರಾವರಿ ಕ್ಷೇತ್ರದ ಮಹತ್ತರ ಸುಧಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಎರಡು ಹಂತಗಳಲ್ಲಿ ಯೋಜನೆ
ಮೊದಲನೇ ಹಂತ

ಈ ಹಂತದಲ್ಲಿ ಗೋದಾವರಿ ನದಿಯ 300 ಟಿಎಂಸಿ ನೀರನ್ನು ಆಂಧ್ರಪ್ರದೇಶದ ನಾಗಾರ್ಜುನ ಸಾಗರ ಡ್ಯಾಂ ಮೂಲಕ ಕೃಷ್ಣಾ ನದಿಗೆ ಸೇರಿಸುವುದು. ಅಲ್ಲಿಂದ ಉತ್ತರ ಪಿನಾಕಿನಿಗೆ ಅಡ್ಡಲಾಗಿ ನಿರ್ಮಿಸಿರುವ ಸೋಮಸಿಲ ಅಣೆಕಟ್ಟಿಗೆ ತಂದು ಶೇಖರಸಿಲಾಗುತ್ತದೆ. ಬಳಿಕ ಗ್ರ್ಯಾಂಡ್ ಅನೈಕಟ್ ಡ್ಯಾಂನಿಂದ ಕಾವೇರಿ ನದಿಗೆ ಹರಿಸುವುದು ಕೇಂದ್ರ ಸರ್ಕಾರದ ಮೊದಲನೇ ಹಂತದ ಯೋಜನೆಯಾಗಿದೆ. ಇದರಿಂದ ಕಾವೇರಿ ನದಿಗೆ ಹೆಚ್ಚುವರಿಯಾಗಿ 100 ಟಿಎಂಸಿ ನೀರು ಸಿಗಲಿದ್ದು, ಕರ್ನಾಟಕ ಹಾಗೂ ತಮಿಳುನಾಡಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

ಎರಡನೇ ಯೋಜನೆಯಲ್ಲಿ ಗೋದಾವರಿ ಉಪನದಿ ಇಂದ್ರಾವತಿ ನದಿ ನೀರನ್ನು ನಾಗಾರ್ಜುನ ಡ್ಯಾಂಗೆ ಹರಿಸಿ, ಅಲ್ಲಿಂದ ಸೋಮಸಿಲ ಅಣೆಕಟ್ಟಿಗೆ ಹರಿಸಲಾಗುತ್ತದೆ. ಬಳಿಕ ಆ ನೀರನ್ನು ಕಾವೇರಿ ನದಿಗೆ ಜೋಡಿಸುವುದು ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾಗಿದೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ಯೋಜನೆಯಿಂದ ಸಮುದ್ರದ ಪಾಲಾಗುವ ಗೋದಾವರಿ ನದಿ ನೀರು ಕಾವೇರಿ ನದಿಗೆ ಸೇರಿ, ರೈತರಿಗೆ ಅನುಕೂಲವಾಗುವುದರಲ್ಲಿ ಎರಡು ಮಾತಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search