• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಂಗಾ ಶುದ್ಧೀಕರಣ ಆಯ್ತು, ಈಗ ಗೋದಾವರಿ-ಕಾವೇರಿ ನದಿ ಜೋಡಣೆಗೆ ಕೇಂದ್ರ ಸರ್ಕಾರ ನಿರ್ಧಾರ!

TNN Correspondent Posted On November 24, 2017
0


0
Shares
  • Share On Facebook
  • Tweet It

ಚೆನ್ನೈ: ಸುಮಾರು 20 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಗಂಗಾ ನದಿ ಶುದ್ಧೀಕರಣದಂಥ ಮಹತ್ತರ ಯೋಜನೆ ಘೋಷಿಸಿರುವ ಸರ್ಕಾರ, ಈಗ ಅಂಥಾದ್ದೇ ತೀರ್ಮಾನ ಪ್ರಕಟಿಸಿದ್ದು, ಗೋದಾವರಿ-ಕಾವೇರಿ ನದಿ ಜೋಡಣೆ ಮಾಡುವುದಾಗಿ ತಿಳಿಸಿದೆ.

ಗೋದಾವರಿ ನದಿಯ ಹೆಚ್ಚುವರಿ ನೀರು ಸಮುದ್ರ ಪಾಲಾಗುವ ಬದಲು ಕೊಳವೆ ಮಾರ್ಗದ ಮೂಲಕ ಕಾವೇರಿ ನದಿಗೆ ಜೋಡಣೆ ಮಾಡುವುದಾಗಿ ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಚೆನ್ನೈನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಜೇಟ್ಲಿ, ಕೇಂದ್ರ ಸರ್ಕಾರದ ಮಹತ್ತರ ನದಿ ಜೋಡಣೆ ಯೋಜನೆಯ ಭಾಗವಾಗಿ ಗೋದಾವರಿ-ಕಾವೇರಿ ನದಿ ಜೋಡಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಮುಂದಿನ ದಿನಗಳಲ್ಲಿ ಕಾವೇರಿ-ಗೋದಾವರಿ ನದಿ ಫಲಾನುಭವಿಗಳಾದ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ತೆಲಂಗಾಣ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಲಾಗುತ್ತದೆ. ಪ್ರಸ್ತುತ ಯೋಜನೆ ಪ್ರಾರಂಭಿಕ ಹಂತದಲ್ಲಿದ್ದು, ಯೋಜನೆಗೆ ಕೇಂದ್ರ ಸರ್ಕಾರ ಶೇ.90ರಷ್ಟು ಹಾಗೂ ಆಯಾ ರಾಜ್ಯ ಸರ್ಕಾರಗಳು ಶೇ.10ರಷ್ಟು ಹಣ ಭರಿಸಲಿವೆ ಎಂದು ವಿವರಿಸಿದ್ದಾರೆ.

ಗೋದಾವರಿ ನದಿಯ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಸಿ, ಅಲ್ಲಿಂದ ಉತ್ತರ ಪಿನಾಕಿನಿ ನದಿಯಿಂದ ಕಾವೇರಿ ನದಿಗೆ ಹರಿಸುವ ಈ ಮಹತ್ತರ ಯೋಜನೆಯಿಂದ ನೀರಾವರಿ ಕ್ಷೇತ್ರದ ಮಹತ್ತರ ಸುಧಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಎರಡು ಹಂತಗಳಲ್ಲಿ ಯೋಜನೆ
ಮೊದಲನೇ ಹಂತ

ಈ ಹಂತದಲ್ಲಿ ಗೋದಾವರಿ ನದಿಯ 300 ಟಿಎಂಸಿ ನೀರನ್ನು ಆಂಧ್ರಪ್ರದೇಶದ ನಾಗಾರ್ಜುನ ಸಾಗರ ಡ್ಯಾಂ ಮೂಲಕ ಕೃಷ್ಣಾ ನದಿಗೆ ಸೇರಿಸುವುದು. ಅಲ್ಲಿಂದ ಉತ್ತರ ಪಿನಾಕಿನಿಗೆ ಅಡ್ಡಲಾಗಿ ನಿರ್ಮಿಸಿರುವ ಸೋಮಸಿಲ ಅಣೆಕಟ್ಟಿಗೆ ತಂದು ಶೇಖರಸಿಲಾಗುತ್ತದೆ. ಬಳಿಕ ಗ್ರ್ಯಾಂಡ್ ಅನೈಕಟ್ ಡ್ಯಾಂನಿಂದ ಕಾವೇರಿ ನದಿಗೆ ಹರಿಸುವುದು ಕೇಂದ್ರ ಸರ್ಕಾರದ ಮೊದಲನೇ ಹಂತದ ಯೋಜನೆಯಾಗಿದೆ. ಇದರಿಂದ ಕಾವೇರಿ ನದಿಗೆ ಹೆಚ್ಚುವರಿಯಾಗಿ 100 ಟಿಎಂಸಿ ನೀರು ಸಿಗಲಿದ್ದು, ಕರ್ನಾಟಕ ಹಾಗೂ ತಮಿಳುನಾಡಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

ಎರಡನೇ ಯೋಜನೆಯಲ್ಲಿ ಗೋದಾವರಿ ಉಪನದಿ ಇಂದ್ರಾವತಿ ನದಿ ನೀರನ್ನು ನಾಗಾರ್ಜುನ ಡ್ಯಾಂಗೆ ಹರಿಸಿ, ಅಲ್ಲಿಂದ ಸೋಮಸಿಲ ಅಣೆಕಟ್ಟಿಗೆ ಹರಿಸಲಾಗುತ್ತದೆ. ಬಳಿಕ ಆ ನೀರನ್ನು ಕಾವೇರಿ ನದಿಗೆ ಜೋಡಿಸುವುದು ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾಗಿದೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ಯೋಜನೆಯಿಂದ ಸಮುದ್ರದ ಪಾಲಾಗುವ ಗೋದಾವರಿ ನದಿ ನೀರು ಕಾವೇರಿ ನದಿಗೆ ಸೇರಿ, ರೈತರಿಗೆ ಅನುಕೂಲವಾಗುವುದರಲ್ಲಿ ಎರಡು ಮಾತಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search