• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪೊಲೀಸರು, ಭದ್ರತಾ ಸಿಬ್ಬಂದಿ ನೆನೆದ ಮೋದಿ

TNN Correspondent Posted On November 26, 2017


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ 38ನೇ ಸರಣಿಯಲ್ಲಿ ಮೋದಿ ಅವರು 2008ರ 26/11ರ ಉಗ್ರರ ದಾಳಿಯನ್ನು ಸ್ಮರಿಸಿದ್ದು, ಉಗ್ರರ ವಿರುದ್ಧ ಹೋರಾಡಿ ಮಡಿದ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಯನ್ನು ನೆನೆದಿದ್ದಾರೆ.

2008ರಲ್ಲಿ ಮುಂಬೈ ಮೇಲೆ ಉಗ್ರರು ಮಾಡಿದ ದಾಳಿಯನ್ನು ದೇಶದ ಜನ ಮರೆಯುವಂತಿಲ್ಲ. ದಾಳಿ ವೇಳೆ ಮಡಿದ ಪೊಲೀಸರು, ಶೂರ ನಾಗರಿಕರು, ಭದ್ರತಾ ಸಿಬ್ಬಂದಿ ತ್ಯಾಗ ಎಂದಿಗೂ ಸ್ಮರಣಾರ್ಹ.

ಭಾರತ 1971ರ ವೇಳೆಯಲ್ಲೇ ಭಯೋತ್ಪಾದನೆ ವಿರುದ್ಧ ಮಾತನಾಡಿತ್ತು. ಆದರೆ ಆಗ ವಿಶ್ವದ ಎಲ್ಲ ರಾಷ್ಟ್ರಗಳೂ ನಿರ್ಲಕ್ಷ್ಯ ವಹಿಸಿದವು. ಪ್ರಸ್ತುತ ಭಯೋತ್ಪಾದನೆಯ ವಿಶ್ವರೂಪ ಪ್ರದರ್ಶನವಾಗುತ್ತಿರುವ ಹಿನ್ನೆಲೆ ಎಲ್ಲ ರಾಷ್ಟ್ರಗಳೂ ಎಚ್ಚೆತ್ತುಕೊಂಡಿವೆ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಡಿ.4ರಂದು ನೌಕಾಪಡೆ ದಿನ ಆಚರಿಸುವ ಹಿನ್ನೆಲೆಯಲ್ಲಿ ಭಾರತೀಯ ನೌಕಾ ಪಡೆಯ ಕೊಡುಗೆ, ಅವರ ತ್ಯಾಗ, ಹೋರಾಟವನ್ನು ಸಹ ಮೋದಿ ಸ್ಮರಿಸಿದ್ದಾರೆ.

26/11 ಸಂವಿಧಾನ ಸ್ವೀಕಾರ ದಿನವಾದ್ದರಿಂದ ಪ್ರಧಾನಿ ಮೋದಿ ಅವರು ಸ್ಮರಿಸಿದ್ದು, ಅಂಬೇಡ್ಕರ್ ಅವರನ್ನು ನೆನಪಿಸಿದ್ದಾರೆ.

ಕಾಂಗ್ರೆಸ್ ನರೇಂದ್ರ ಮೋದಿ ಅವರು ಚಾಯ್ ವಾಲಾ ಎಂದು ಅಣಕಿಸಿದ ಕಾರಣ ಮೋದಿ ಈ ಬಾರಿಯ ರೇಡಿಯೋ ಕಾರ್ಯಕ್ರಮದ ಟ್ಯಾಗ್ ಲೈನ್ ಅನ್ನು “ಮನ್ ಕೀ ಬಾತ್, ಚಾಯ್ ಕೆ ಸಾಥ್” ಎಂದು ಬದಲಾಯಿಸಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ಟಾಂಗ್ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search