• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಮಾನತೆಯ, ರಾಮರಾಜ್ಯದ ಸಂದೇಶ ಸಾರಿದ ವಿಶ್ವ ಹಿಂದೂ ಧರ್ಮ ಸಂಸದ್

TNN Correspondent Posted On November 27, 2017
0


0
Shares
  • Share On Facebook
  • Tweet It

ಉಡುಪಿ: ಹಿಂದೂ ಸಮಾಜಕ್ಕೆ ಕಂಟಕವಾಗಿರುವ ಅಸಮಾನತೆಯನ್ನು ಹೊಡೆದೊಡಿಸಬೇಕು. ಎಲ್ಲರೂ ಸೌಖ್ಯದಿಂದ ಬಾಳುವಂತ ರಾಮರಾಜ್ಯದ ಕನಸನ್ನು ಸಾಕಾರಗೊಳಿಸಬೇಕು ಎಂಬ ಮಹತ್ತರ ಸಂದೇಶವನ್ನು ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಧರ್ಮ ಸಂಸದ್ ಸಾರಿತು.

ಹಿಂದೂ ಸಂಘಟನೆಗಳೆಂದರೆ ದಲಿತ ವಿರೋಧಿಗಳು ಎಂಬ ಪಟ್ಟ ಕಳಚಲು ವೇದಿಕೆ ಮೇಲೆಯೇ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ ಭಾಯಿ ತೊಗಾಡಿಯಾ ಹೇಳಿದ ಮಾತುಗಳು ಗಮನಾರ್ಹ. ‘ಅಸಮಾನತೆ ತೊಲಗಿಸುವ ಕಾರ್ಯ ಇಲ್ಲಿಂದಲೇ ಆರಂಭವಾಗಬೇಕು. ಇಲ್ಲಿರುವ ಎಲ್ಲ ಸಾಧುಗಳು, ಸಂತರು ಪ್ರತ್ಯೇಕವಾಗಿ ಭೋಜನ ಮಾಡುವುದು ಬಿಟ್ಟು, ಉಳಿದ ಎಲ್ಲ ಸಾಧು, ಸಂತರೊಂದಿಗೆ ಭೋಜನ ಸ್ವೀಕರಿಸಬೇಕು ಎಂದು ಹೇಳಿದ್ದು ಮಹತ್ತ ಘಟನೆ.

ಅಲ್ಲದೇ ಸಂಸದ್ ನ ನಿರ್ಣಯಗಳಲ್ಲೂ ಹಿಂದೂ ಧರ್ಮಕ್ಕೆ ಕಾರ್ಕೋಟಕ ವಿಷದಂತೆ ಕಾಡುತ್ತಿರುವ ಅಸಮಾನತೆ ಹೊಡೆದೋಡಿಸಬೇಕು ಎಂದು ನಿರ್ಣಯ ಕೈಗೊಂಡಿದ್ದು ಶ್ಲಾಘನೀಯ. ಧರ್ಮ ಸಂಸದ್ ಕೇಂದ್ರ ಬಿಂದುವಾಗಿದ್ದ 97ರ ಹರೆಯದ ವಿಶ್ವೇಶ ತೀರ್ಥ ಶ್ರೀಗಳು ಕೈಗೊಂಡ ದಲಿತ ಕಾಲೋನಿಗಳ ಭೇಟಿಯ ಕ್ರಾಂತಿಕಾರಕ ನಡೆಯನ್ನು ವಿರಾಟ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಎಲ್ಲರೂ ಶ್ಲಾಘಿಸಿದ್ದು, ಅಸಮಾನತೆ ನಿರ್ನಾಮಕ್ಕೆ ಹೊಸ ಮುನ್ನುಡಿ ಬರೆದಂತಿತ್ತು.

ಹಿಂದೂ ಧರ್ಮದ ಎಲ್ಲ ಜಾತಿಯ ಜನರಿಗೆ ಎಲ್ಲ ದೇವಸ್ಥಾನಗಳಲ್ಲಿ, ಹಿಂದೂಗಳ ಮನೆಯಲ್ಲಿ ಮುಕ್ತ ಪ್ರವೇಶ ನೀಡಬೇಕು, ಜಾತಿಗೊಂದು ಸ್ಮಶಾನ ಮಾಡದೇ, ಇಡೀ ಗ್ರಾಮದ ಸಮಸ್ತ ಹಿಂದೂಗಳಿಗೆ ಒಂದೇ ಸ್ಮಶಾನ  ಆರಂಭಿಸಬೇಕು ಎಂಬ ಮಹತ್ತರ ನಿರ್ಣಯವನ್ನು ಮಂಡಿಸುವ ಮೂಲಕ ಧರ್ಮ ಸಂಸದ್ ಹೊಸ ಮುನ್ನುಡಿಯನ್ನು, ಇತಿಹಾಸವನ್ನು ಬರೆಯಿತು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search