• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತವರು ರಾಜ್ಯದಲ್ಲಿ ಮೋದಿ ಪ್ರಚಾರ, ಜನಬೆಂಬಲದ ಅಬ್ಬರ

TNN Correspondent Posted On November 27, 2017
0


0
Shares
  • Share On Facebook
  • Tweet It

ಗಾಂಧಿನಗರ: 2019ರ ಲೋಕಸಭೆ ಚುನಾವಣೆಯ ಮುನ್ನುಡಿ ಎಂದೇ ಬಿಂಬಿಸಲಾಗಿರುವ ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಗುಜರಾತ್ ತಲುಪಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹಲ್ ಗಾಂಧಿ ಈಗಾಗಲೇ ಗುಜರಾತಿನಲ್ಲಿ ಸಭೆ ನಡೆಸಿದ್ದರೂ, ಹಿಮಾಚಲ ಪ್ರದೇಶ ಚುನಾವಣೆ, ಫಿಲಿಪ್ಪೈನ್ಸ್ ನಲ್ಲಿ ನಡೆದ ಆಸಿಯಾನ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗಿ ಸೇರಿ ಬಿಡುವಿಲ್ಲದ ವೇಳಾಪಟ್ಟಿ ಹಿನ್ನೆಲೆ ತವರು ರಾಜ್ಯಕ್ಕೇ ತೆರಳಿರಲಿಲ್ಲ.

ಈಗ ಗುಜರಾತ್ ತಲುಪಿರುವ ಪ್ರಧಾನಿ ಮೋದಿ ಸೋಮವಾರ ಒಂದೇ ದಿನ ಭುಜ್, ಕಚ್, ಜಸ್ಡನ್, ಕಮ್ರೇಜ್ ಹಾಗೂ ಧಾರಿ ಪ್ರದೇಶಳಲ್ಲಿ ನಡೆಯುವ ಸಾಲು ಸಾಲು ಸಭೆಗಳಲ್ಲಿ ಭಾಷಣ ಮಾಡಲಿದ್ದು, ಅಪಾರ ಜನ ಸೇರಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಮೋದಿ ಕಚ್ ನ ಆಶಾಪುರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಆವರಣದಲ್ಲಿ ಪ್ರಚಾರದ ಭಾಗವಾಗಿ ಸ್ಥಳೀಯರ ಜತೆ ಮಾತುಕತೆ ನಡೆಸಿದ್ದಾರೆ.

ಮುಂದಿನ 15 ದಿನಗಳಲ್ಲಿ ಮೋದಿ ಅವರು ಸುಮಾರು 20 ಸಮಾವೇಶಗಳಲ್ಲಿ ಭಾಗವಹಿಸಲಿದ್ದು, ಕಳೆದ 22 ವರ್ಷಗಳಲ್ಲಿ ಗುಜರಾತಿನಲ್ಲಿ ಕೈಗೊಂಡ ಅಭಿವೃದ್ಧಿ, ಕೇಂದ್ರ ಸರ್ಕಾರದ ಯೋಜನೆ, ಕಾಂಗ್ರೆಸ್ ವೈಫಲ್ಯವನ್ನು ಚುನಾವಣೆ ಅಸ್ತ್ರವನ್ನಾಗಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search