• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತಿಂಗಳಿಗೊಂದು ರಾಕೆಟ್, ಆಕಾಶಕ್ಕೇ ಗುರಿ ಇಡುವ ಇಸ್ರೋ ಸಂಸ್ಥೆಯದು ಗ್ರೇಟ್!

TNN Correspondent Posted On November 30, 2017


  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರ, ವಿಜ್ಞಾನಿಗಳ ಪರಿಶ್ರಮದಿಂದ ಇಸ್ರೋ ಈಗಾಗಲೇ ಏಕಕಾಲದಲ್ಲಿ ನೂರಕ್ಕೂ ಅಧಿಕ ರಾಕೆಟ್ ಉಡಾಯಿಸಿ ದಾಖಲೆ ಬರೆದಿದ್ದು, ಈಗ ಮತ್ತೊಂದು ದಾಖಲೆಗೆ ಮುಂದಾಗಿದೆ.

ಹೌದು, 2018ರಲ್ಲಿ ಇಸ್ರೋ ತಿಂಗಳಿಗೆ ಒಂದು ರಾಕೆಟ್ ಉಡಾವಣೆ ಮಾಡುವುದಾಗಿ ತಿಳಿಸಿದ್ದು, ಪ್ರತಿ ತಿಂಗಳು ದೇಶದ ರಾಕೆಟ್ ಒಂದು ನಭಕ್ಕೆ ಹಾರಲಿದೆ.

ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, “ಮುಂದಿನ ವರ್ಷ ಪ್ರತಿ ತಿಂಗಳು ಒಂದು ರಾಕೆಟ್ ಉಡಾವಣೆ ಮಾಡಲು ನಿರ್ಧರಿಸಲಾಗಿದೆ. ಆ ಮೂಲಕ ರಾಕೆಟ್ ಗಳನ್ನು ಕಕ್ಷೆ ಸೇರಿಸಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತಷ್ಟು ಏಳಿಗೆ ಸಾಧಿಸುವುದು ಗುರಿಯಾಗಿದೆ” ಎಂದು ತಿಳಿಸಿದ್ದಾರೆ.

2018-19, 2019-20ರ ವಿತ್ತೀಯ ವರ್ಷ ಇಸ್ರೋಗೆ ಮಹತ್ತರವಾಗಿ ಪರಿಣಮಿಸಿದ್ದು, ಕೇಂದ್ರ ಸರ್ಕಾರ ಹೆಚ್ಚಿನ ಬಜೆಟ್ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಿರಣ್ ಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಸ್ರೋಗೆ 9 ಸಾವಿರ ಕೋಟಿ ರೂಪಾಯಿ ನೀಡಿದೆ. 2018ರ ಜನವರಿಯಲ್ಲಿ ಕಾರ್ಟೋಸ್ಯಾಟ್ -2 ಎಂಬ ರಾಕೆಟ್ ಸುಮಾರು 28 ನ್ಯಾನೋ ಉಪಗ್ರಹ ಹೊತ್ತು ನಭಕ್ಕೆ ಹಾರಲಿದೆ.

ಎಲ್ಲ ರಾಕೆಟ್ ಗಳು ಆಂಧ್ರಪ್ರದೇಶದ ಶ್ರೀ ಹರಿಕೋಟಾ ಉಡಾವಣೆ ಕೇಂದ್ರದಿಂದ ಹಾರಲಿವೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಮತ್ತೊಂದು ಮೈಲಿಗಲ್ಲು ಇಡಲು ಮುಂದಾಗಿದ್ದು, ಉಡಾಯಿಸುವ ಪ್ರತಿ ರಾಕೆಟ್ ಯಶಸ್ವಿಯಾಗಲಿ, ಬಾಹ್ಯಾಕಾಶದಲ್ಲಿ ಭಾರತ ಮತ್ತಷ್ಟು ಏಳಿಗೆ ಸಾಧಿಸಲಿ ಎಂಬುದೇ ನಮ್ಮ ಆಶಯ.

ಆಲ್ ದಿ ಬೆಸ್ಟ್ ಇಸ್ರೋ…

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search