• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಂದೇ ಮಾತರಂ ಹಾಡಿದರೆ ಬಹಿಷ್ಕಾರ ಹಾಕಿದ ಮುಸ್ಲಿಂ ಮೂಲಭೂತವಾದಿಗಳೇ, ಇದೆಂಥ ಅಸಹಿಷ್ಣುತೆ?

TNN Correspondent Posted On November 30, 2017
0


0
Shares
  • Share On Facebook
  • Tweet It

ಲಖನೌ: ದೇಶದ ಯಾವುದೇ ಮೂಲೆಯಲ್ಲಿ ವಿಚಾರವಾದಿಗಳ ಹತ್ಯೆಯಾಗಲಿ, ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳಲ್ಲೇ ಹಲ್ಲೆಗಳಾಗಲಿ, ಯಾರೋ ಮುಸ್ಲಿಮರನ್ನು ಹತ್ಯೆ ಮಾಡಿದರೂ ಪ್ರಧಾನಿ ನರೇಂದ್ರ ಮೋದಿ ಅವರೇ ಅದನ್ನು ಮಾಡಿದ್ದಾರೆ ಎಂದು ಘೀಳಿಡುವವರಿದ್ದಾರೆ. ಸಣ್ಣ ಟೀಕೆ ವ್ಯಕ್ತವಾದರೂ ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಬೊಬ್ಬೆ ಹಾಕುತ್ತಾರೆ. ಆದರೆ ಉತ್ತರ ಪ್ರದೇಶದ ಆಗ್ರಾದಲ್ಲಿ ಮುಸ್ಲಿಂ ಕುಟುಂಕ್ಕೆ ಆದ ಅನ್ಯಾಯ ಪ್ರಶ್ನಿಸುವ ತಾಕತ್ತು, ಗುಂಡಿಗೆ ಮಾತ್ರ ಯಾರಿಗೂ ಇಲ್ಲ.

ಹೌದು, ಆಗ್ರಾದ ಅಜಂಪುರ ಎಂಬಲ್ಲಿ ವಾಸಿಸುತ್ತಿರುವ ಗುಲ್ಚಮನ್ ಶೇರ್ವಾನಿ ಮುಸ್ಲಿಂ ಎಂಬ ಕುಟುಂಬಕ್ಕೆ  ಇಸ್ಲಾಂನ ಮೂಲಭೂತವಾದಿಗಳೇ ಫತ್ವಾ ಹೊರಡಿಸಿದ್ದಾರೆ. ಶಾಲೆಯಿಂದ ಆತನ ಮಕ್ಕಳನ್ನು ಶಾಳೆಯಿಂದ ಹೊರಹಾಕಿದ್ದಾರೆ.

ಅಷ್ಟಕ್ಕೂ ಮುಸ್ಲಿಂ ಶೇರ್ವಾನಿ ಕುಟುಂಬ ಮಾಡಿರುವ ತಪ್ಪಾದರೂ ಏನು ಗೊತ್ತಾ?

ಗುಲ್ಚಮನ್ ಶೇರ್ವಾನಿ ಕುಟುಂಬಕ್ಕೆ ಎಲ್ಲಿಲ್ಲದ ದೇಶಭಕ್ತಿ. ಹಾಗಾಗಿಯೇ ಇಡೀ ಕುಟುಂಬ ಭಾರತದ ಧ್ವಜ ಹೋಲುವ ಬಟ್ಟೆ ತೊಡುತ್ತಾರೆ. ವಂದೇ ಮಾತರಂ ಹಾಡುತ್ತಾರೆ. ಆದರೆ ಇದೇ ಮೂಲಭೂತವಾದಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು, ಬಹಿಷ್ಕಾರ ಹಾಕಿದ್ದಾರೆ.

ಇದೇ ಕಾರಣಕ್ಕೇ, ಅಜಂಪುರದ ಮುಸ್ಲಿಂ ಶಾಲೆಯೊಂದರಿಂದ ಶೇರ್ವಾನಿಯ ಇಬ್ಬರು ಮಕ್ಕಳನ್ನು ಹೊರಹಾಕಿದ್ದಾರೆ. ಅವರು ವಂದೇ ಮಾತರಂ ಹಾಡುವುದರಿಂದ ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅನಿವಾರ್ಯವಾಗಿ ಮಕ್ಕಳನ್ನು ಹೊರಹಾಕಲಾಗಿದೆ ಎಂದು ಶಾಲೆ ಪ್ರಾಂಶುಪಾಲ ಅಸ್ಲಾಂ ಖಾನ್ ಲಜ್ಜೆಯಿಲ್ಲದೆ ಹೇಳುತ್ತಾರೆ.

ಅಷ್ಟೇ ಅಲ್ಲ, ದೆಹಲಿಯ ಜಾಮಾ ಮಸೀದಿಯ ಮೌಲ್ವಿ ಮೌಲಾನಾ ಅಹ್ಮದ್ ಬುಖಾರಿ, ಶೇರ್ವಾನಿ ವಿರುದ್ಧ ಫತ್ವಾ ಹೊರಡಿಸಿದ್ದಾನೆ. ಶೇರ್ವಾನಿಯನ್ನು “ಕಾಫಿರ್, (ಮುಸ್ಲಿಮೇತರ)” ಎಂದು ಘೋಷಿಸಿದ್ದಾನೆ.

ಇಷ್ಟಾದರೂ ನಾನು ವಂದೇ ಮಾತರಂ ಹಾಡುವುದನ್ನು ನಿಲ್ಲಿಸುವುದಿಲ್ಲ. ದೇಶಭಕ್ತಿ ಸಾರುವ ರಾಷ್ಟ್ರಧ್ವಜದ ಬಟ್ಟೆ ಧರಿಸದೇ ಇರುವುದಿಲ್ಲ ಎಂದು ಶೇರ್ವಾನಿ ದಿಟ್ಟತನ ಮೆರೆದಿದ್ದಾರೆ.

ಆದರೆ ಒಂದು ಮುಸ್ಲಿಂ ಕುಟುಂಬ ವಂದೇ ಮಾತರಂ ಹಾಡಿದ್ದಕ್ಕಾಗಿ ಬಹಿಷ್ಕಾರ ಹಾಕಿದ ಮೂಲಭೂತವಾದಿಗಳ ವಿರುದ್ಧ ಒಬ್ಬನೇ ಒಬ್ಬ ಜಾತ್ಯತೀತವಾದಿ, ಪ್ರಗತಿಪರ, ಬುದ್ಧಿ ಜೀವಿ ಸೊಲ್ಲೆತ್ತುವುದಿಲ್ಲವಲ್ಲ. ನಾಚಿಕೆಯಾಗಬೇಕು. ಛೇ!

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search