• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಷ್ಟಕ್ಕೂ ಮಹಿಳಾ ಬಾಕ್ಸರ್ ಗಳಿಗೆ ಹರಿಯಾಣ ಸರ್ಕಾರ ಗೋವು ಬಹುಮಾನ ನೀಡಲು ಕಾರಣವೇನು?

TNN Correspondent Posted On December 1, 2017


  • Share On Facebook
  • Tweet It

ಛತ್ತೀಸ್ ಗಡ: ಯಾವುದೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಜಯಶಾಲಿಯಾದರೆ, ಪದಕ ಗೆದ್ದರೆ ಸರ್ಕಾರ ಲಕ್ಷ ಲಕ್ಷ ನಗದು ಬಹುಮಾನ, ಜಮೀನು, ಸರ್ಕಾರಿ ನೌಕರಿ ನೀಡುವುದು ಸಾಮಾನ್ಯ.

ಆದರೆ, ಹರಿಯಾಣ ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿದ್ದು, ವಿಶ್ವ ಮಹಿಳಾ ಯುವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ ಆರು ಮಹಿಳಾ ಕ್ರೀಡಾಪಟುಗಳಿಗೆ ಹಸು ನೀಡಲು ಮುಂದಾಗಿದೆ.

ರಾಜ್ಯ ಪಶು ಸಂಗೋಪನೆ ಸಚಿವ ಓಂ ಪ್ರಕಾಶ್ ಡಂಕರ್ ಈ ಕುರಿತು ಘೋಷಿಸಿದ್ದು, ಆಟಗಾರರ ಆರೋಗ್ಯದ ದೃಷ್ಟಿಯಿಂದ ಹಸುವನ್ನು ಉಡುಗೊರೆಯಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಹರಿಯಾಣದಲ್ಲಿ ನೀವು ಶಕ್ತಿವಂತರಾಗಬೇಕಾದರೆ ಎಮ್ಮೆಯ ಹಾಲು ಕುಡಿಯಿರಿ, ಹಾಗೊಂದು ವೇಳೆ ನೀವು ಸೌಂದರ್ಯ ಹಾಗೂ ಬುದ್ಧವಂತರಾಗಲು ಬಯಸಿದರೆ ಹಸುವಿನ ಹಾಲು ಕುಡಿಯಿರಿ ಎಂಬ ಮಾತಿದೆ. ಅಲ್ಲದೆ ಹಸುವಿನ ಹಾಲಿನಲ್ಲಿ ಕೊಬ್ಬು ಕರಗಿಸುವ ಶಕ್ತಿ ಇರುವುದರಿಂದ, ಇದು ಅವರ ಶಕ್ತಿ ಹೆಚ್ಚಿಸುತ್ತದೆ. ಹೆಚ್ಚು ಪದಕ ಗೆಲ್ಲಲು ಸಹಕಾರಿಯಾಗುತ್ತದೆ. ಹಾಗಾಗಿಯೇ ಹಸು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಮಹಿಳಾ ಬಾಕ್ಸರ್ ಗಳಿಗೆ ಸ್ಥಳೀಯ ತಳಿಯ ತಲಾ ಒಂದು ಹಸು ನೀಡಲಾಗುತ್ತದೆ. ಈ ಹಸುಗಳು ಪ್ರತಿದಿನ ಹತ್ತು ಲೀಟರ್ ಹಾಲು ನೀಡುತ್ತವೆ ಎಂದು ವಿವರಿಸಿದ್ದಾರೆ.

ವಿಶ್ವ ಮಹಿಳಾ ಯುವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ರಾಜ್ಯದ ನೀತು, ಜ್ಯೋತಿ ಗುಲಿಯಾ, ಸಾಕ್ಷಿ ಧಂಡ, ಶಶಿ ಚೋಪ್ರಾ ಬಂಗಾರದ ಪದಕ ಗೆದ್ದರೆ, ಅನುಪಮಾ ಹಾಗೂ ನೇಹಾ ಯಾದವ್ ಬೆಳ್ಳಿ ಪದಕ ಪಡೆದಿದ್ದರು.

ರಾಜ್ಯ ಸರ್ಕಾರದ ನಿರ್ಧಾರವನ್ನು ಆಟಗಾರರು ಸ್ವಾಗತಿಸಿದ್ದು, ನನಗೆ ಇದುವರೆಗೂ ಪದಕ ಗೆದ್ದಾಗ ಹಣ, ಪುಸ್ತಕ ಸೇರಿ ಹಲವು ಉಡುಗೊರೆ ನೀಡಲಾಗಿತ್ತು. ಆದರೆ ಇದೇ ಮೊದಲ ಬಾರಿಗೆ ಹಸು ಉಡುಗೊರೆ ನೀಡಿದ್ದು ಸಂತಸ ತಂದಿದೆ. ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಾಗ ಸಾಕ್ಷಿ ಮಲಿಕ್ ಅವರಿಗೆ ಬೆಳ್ಳಿಯ ಹಸು ನೀಡಿದ್ದ ಕುರಿತು ಪತ್ರಿಕೆಗಳಲ್ಲಿ ಓದಿದ್ದೆ. ಆದರೆ ನಿಜವಾದ ಹಸುವನ್ನೇ ನೀಡಿದ್ದು ಖುಷಿಯಾಗಿದೆ ಎಂದು ಬಂಗಾರದ ಪದಕ ವಿಜೇತೆ ನೀತು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search