• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತ್ ಚುನಾವಣೆ ಗೆಲ್ಲಿಸಲು ಪಣ, 6 ದಿನದಲ್ಲಿ 31 ಸಭೆ, ರ್ಯಾಲಿ ನಡೆಸಲಿರುವ ಪ್ರಧಾನಿ!

TNN Correspondent Posted On December 3, 2017
0


0
Shares
  • Share On Facebook
  • Tweet It

ಗಾಂಧಿನಗರ: ಇತ್ತೀಚೆಗಷ್ಟೇ ಉತ್ತರ ಪ್ರದೇಶ ಸ್ಥಳೀಯ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ ಬಳಿಕ ಪ್ರಧಾನಿ ಮೋದಿ ಅವರ ವಿಶ್ವಾಸ ದುಪ್ಪಟ್ಟಾಗಿದ್ದು, ಗುಜರಾತ್ ಚುನಾವಣೆಯಲ್ಲೂ ಮೋಡಿ ಮಾಡಲು ಭಾನುವಾರದಿಂದ ಮೋದಿ ಸಾಲು, ಸಾಲು ರ್ಯಾಲಿ, ಸಭೆ ನಡೆಸಲಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ ಮೋದಿ ಅವರು ಭಾನುವಾರ ಗುಜರಾತಿನಲ್ಲಿ ಹಲವು ರ್ಯಾಲಿ, ಸಭೆ ನಡೆಸಲಿದ್ದು, ಬಿರುಸಿನ ಪ್ರಚಾರ ಕೈಗೊಳ್ಳಲಿದ್ದಾರೆ. ಮುಂದಿನ ಆರು ದಿನಗಳಲ್ಲಿ ಪ್ರಧಾನಿ 31 ರ್ಯಾಲಿ ಹಾಗೂ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬಿರುಸಿನ ಪ್ರಚಾರದ ಭಾಗವಾಗಿ ಭಾನುವಾರ ಮೋದಿ ಅವರು ಬರೂಚ್ ಹಾಗೂ ಸುರೇಂದ್ರ ನಗರದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಲಿದ್ದು, ಅಪಾರ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಸೋಮವಾರ ಬರೋಬ್ಬರಿ 7 ರ್ಯಾಲಿ ಹಾಗೂ ಸಭೆಗಳಲ್ಲಿ ಮಾತನಾಡಲಿದ್ದಾರೆ.

ಜತೆಗೆ ಭಾನುವಾರವೇ, ಸೌರಾಷ್ಟ್ರ, ರಾಜ್ ಕೋಟ್ ಗೆ ಭೇಟಿ ನೀಡಲಿದ್ದು, ಇದಕ್ಕೂ ಮೊದಲು ಅಹಮದಾಬಾದ್ ನಲ್ಲಿ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ. ಸೋಮವಾರ ಧರಂಪುರ, ಭಾವ್ ನಗರ, ಜುನಾಗಡ್, ಜಮನಗರದಲ್ಲಿ “ವಿಕಾಸ್ ರ್ಯಾಲಿ”ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಸಹ ಸೌರಾಷ್ಟ್ರದ ಹಲವು ಭಾಗಗಳಲ್ಲಿ ರ್ಯಾಲಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ ಗುಜರಾತ್ ಪ್ರಧಾನಿ ಮೋದಿ ಅವರ ತವರು ರಾಜ್ಯವಾಗಿದ್ದು, ಡಿ.14 ಹಾಗೂ 19ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಪಕ್ಷವನ್ನು ಗೆಲ್ಲಿಸಲು ಮೋದಿ ಪಣ ತೊಟ್ಟಿದ್ದಾರೆ. ಕಳೆದ 22 ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದು, ಚುನಾವಣೆ ಪೂರ್ವ ಸಮೀಕ್ಷೆಗಳಲ್ಲಿ ಈ ಬಾರಿಯೂ ಬಿಜೆಪಿಯೇ ಗೆಲ್ಲಲಿದೆ ಎಂದು ಹೇಳಲಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search