• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಗ ಶಿಕ್ಷಕಿಗೆ ಫತ್ವಾ ಹೊರಡಿಸಲಾಯ್ತು, ಕಲ್ಲು ತೂರಿದರು, ಈಗ ಜೀವ ಬೆದರಿಕೆ!

TNN Correspondent Posted On December 6, 2017


  • Share On Facebook
  • Tweet It

ರಾಂಚಿ: ಜಾರ್ಖಂಡ್ ನ ರಾಂಚಿಯಲ್ಲಿ ಯೋಗ ಕಲಿಸುತ್ತಿದ್ದ ಶಿಕ್ಷಕಿಗೆ ದಿನೇದಿನೇ ಅಭದ್ರತೆ ಕಾಡುತ್ತಿದ್ದು, ಫತ್ವಾ ಹೊರಡಿಸಿದ ಬಳಿಕ, ಅವರ ಮನೆ ಮೇಲ್ಲೆ ಕಲ್ಲು ತೂರಿ ಉದ್ಧಟತನ ಮೆರೆದ ಬಳಿಕ, ಈಗ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ.

ಹೌದು, ರಾಫಿಯಾ ನಾಜ್ ಎಂಬ ಮುಸ್ಲಿಂ ಯೋಗ ಶಿಕ್ಷಕಿಗೆ ಕಳೆದ ನವೆಂಬರ್ ನಲ್ಲಿ ಫತ್ವಾ ಹೊರಡಿಸಿದ್ದಲ್ಲದೆ, ಅವರ ಮನೆಗೆ ಕಲ್ಲು ಎಸೆದಿದ್ದರು. ಈಗ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.

ರಾಫಿಯಾ ರಾಂಚಿಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನನ್ನನ್ನು ಆರೆಸ್ಸೆಸ್ ಏಜೆಂಟ್ ಎಂಬ ರೀತಿ ನೋಡುತ್ತಿದ್ದಾರೆ. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಾಗಾಗಿ ಜಿಲ್ಲಾಡಳಿತ ನನಗೆ ಹಾಗೂ ನನ್ನ ಕುಟುಂಬಸ್ಥರಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಸಹ ರಾಫಿಯಾ ಮನವಿ ಮಾಡಿದ್ದಾರೆ.

ರಾಂಚಿಯ ದೊರಾಂಡ ಪ್ರದೇಶದಲ್ಲಿ ವಾಸವಿರುವ ರಾಫಿಯಾ ನಾಜ್ ಯೋಗ ಕಲಿಸಿ ಜೀವನ ಸಾಗಿಸುತ್ತಿದ್ದಾರೆ. ಕಳೆದ ತಿಂಗಳು ಇದನ್ನು ಖಂಡಿಸಿ ಮುಸ್ಲಿಂ ಮೂಲಭೂತವಾದಿ ಧರ್ಮಗುರು ಒಬ್ಬರು ಫತ್ವಾ ಹೊರಡಿಸಿದ್ದರು. ಅವರ ಮನೆ ಮೇಲೆ ಕಲ್ಲೆಸೆಯಲಾಗಿತ್ತು.

ಆದರೂ ನಾನು ಯೋಗ ಕಲಿಸುವುದನ್ನು ನಿಲ್ಲಿಸುವುದಿಲ್ಲ. ಇದರಲ್ಲಿ ಯಾವ ಧಾರ್ಮಿಕ ಅಂಶಗಳೂ ಇಲ್ಲ. ಯೋಗ ಕಲಿಯುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ರಾಫಿಯಾ ತಿಳಿಸಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search