• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೋಟ್ ಬ್ಯಾನ್ ಬಳಿಕ ಇ-ವಹಿವಾಟಿಗೆ ಉತ್ತೇಜನ, ಟೋಲ್ ಇ-ಪೇಮೆಂಟ್ ನಲ್ಲಿ ಏರಿಕೆ

TNN Correspondent Posted On December 6, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡ ನೋಟು ನಿಷೇಧ ನಿರ್ಧಾರದಿಂದ ದೇಶದಲ್ಲಿ ಇ-ವಹಿವಾಟು ಜಾಸ್ತಿಯಾಗಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಲಭ್ಯವಾಗಿದೆ.

ಹೌದು, ನೋಟ್ ಬ್ಯಾನ್ ಬಳಿಕ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇ-ಟೋಲ್ ಪೇಮೆಂಟ್ (ಅಂತರ್ಜಾಲ ಸೇವೆ ಬಳಸಿ ಟೋಲ್ ಶುಲ್ಕ ಪಾವತಿ) ಮಾಡುವ ಪ್ರಮಾಣದಲ್ಲಿ 100 ಪಟ್ಟು ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಐಆರ್ ಬಿ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ನ ಅಧ್ಯಕ್ಷ ವಿರೇಂದ್ರ ಮೈಸ್ಕರ್ ಮಾಹಿತಿ ನೀಡಿದ್ದು, ಪ್ರಸಕ್ತ ವಿತ್ತೀಯ ವರ್ಷದ ಎರಡನೇ ತ್ರೈಮಾಸಿಕ ವರದಿಯಲ್ಲಿ 322 ಕೋಟಿ ರೂಪಾಯಿ ಟೋಲ್ ಸಂಗ್ರಹಿಸಿದ್ದು, ಅದರಲ್ಲಿ ಕೇವಲ 1.6 ಕೋಟಿ ರೂಪಾಯಿ ಮಾತ್ರ ಇ-ಪೇಮೆಂಟ್ ಮೂಲಕ ಪಾವತಿಸಲಾಗಿತ್ತು. ಆದರೆ ಈಗ ಮೂರನೇ ತ್ರೈಮಾಸಿಕ ವರದಿ ಬಿಡುಗಡೆಯಾಗಿದ್ದು ಇದು 100 ಪಟ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಮೂರನೇ ತ್ರೈಮಾಸಿಕ ಹಣಕಾಸು ವರದಿ ಅನ್ವಯ 97 ಕೋಟಿ ರೂಪಾಯಿ ಹಣ ಬರೀ ಇ-ಪೇಮೆಂಟ್ ಮೂಲಕವೇ ಸಂಗ್ರಹವಾಗಿದ್ದು, ನೋಟ್ ಬ್ಯಾನ್ ಬಳಿಕ ದಿನೇದಿನೆ ಟೋಲ್ ಇ-ಪೇಮೆಂಟ್ ಪ್ರಮಾಣ ಜಾಸ್ತಿಯಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಹೀಗೆ ಟೋಲ್ ಶುಲ್ಕವನ್ನು ಇ-ಪೇಮೆಂಟ್ ಮೂಲಕ ಮಾಡುವುದರಿಂದ ಚಿಲ್ಲರೆ ಸಮಸ್ಯೆ, ಸಮಯದ ಉಳಿತಾಯ ಸಹ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಒಂದೇ ಒಂದು ನಿರ್ಧಾರದಿಂದ ಪ್ರಸ್ತುತ ಕಪ್ಪು ಹಣ ದಂಧೆಕೋರರಿಗೆ ಕಡಿವಾಣ, ತೆರಿಗೆದಾರರ ಹೆಚ್ಚಳ, ಕ್ಯಾಶ್ ಲೆಸ್ ವ್ಯವಹಾರಕ್ಕೆ ಉತ್ತೇಜನ ಸಿಗುತ್ತಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search