• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಗಿ ಆದಿತ್ಯನಾಥ ಕೋಮುವಾದಿ ಎನ್ನುವವರು ಈ ಸುದ್ದಿ ಓದಿ!

TNN Correspondent Posted On December 10, 2017


  • Share On Facebook
  • Tweet It

ಲಖನೌ: ಯೋಗಿ ಆದಿತ್ಯನಾಥ, ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಎನ್ನುತ್ತಲೇ ಕೋಮುವಾದಿಗಳು, ಮುಸ್ಲಿಂ ವಿರೋಧಿಗಳೇ ಎಂದು ಬೊಬ್ಬೆ ಹಾಕುತ್ತಾರೆ ಹಾಗೂ ಹಾಗೆಯೇ ಬಿಂಬಿಸುತ್ತಾರೆ. ಆದರೆ ಮೋದಿ ಹಾಗೂ ಆದಿತ್ಯನಾಥರು ಮುಸ್ಲಿಮರ ಏಳಿಗೆಗೆ ಮಾಡುವ ಕಾರ್ಯಗಳನ್ನು ಮಾತ್ರ ಯಾರೂ ಶ್ಲಾಘಿಸುವುದಿಲ್ಲ, ಮೆಚ್ಚುಗೆಯ ಮಾತನಾಡುವುದಿಲ್ಲ.

ಆದರೂ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದಲ್ಲಿ ಮದರಸಾಗಳನ್ನು ಆಧುನೀಕರಣಗೊಳಿಸಲು ಮುಂದಾಗಿದ್ದು, ಇದರಿಂದ ಲಕ್ಷಾಂತರ ಮುಸ್ಲಿಮರು ಮದರಸಾಗಳಲ್ಲಿ ಗುಣಮಟ್ಟದ ಹಾಗೂ ಆಧುನಿಕ ಶಿಕ್ಷಣ ಪಡೆಯಲಿದ್ದಾರೆ.

ಹೌದು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ರಾಜ್ಯದ 8 ಸಾವಿರಕ್ಕೂ ಅಧಿಕ ಮದರಸಾಗಳನ್ನು ಆಧುನೀಕರಣಗೊಳಿಸಲು ತೀರ್ಮಾನಿಸಿದೆ. ಈ ಕುರಿತು ಉತ್ತರ ಪ್ರದೇಶದ ಮದರಸಾ ಮಂಡಳಿಗೆ ಸೂಚನೆ ನೀಡಲಾಗಿದೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಆನ್ ಲೈನ್ ಪೋರ್ಟಲ್ ನಲ್ಲಿ 16,705 ಮದರಸಾಗಳು ನೋಂದಣಿಯಾಗಿದ್ದು, ಇವುಗಳಲ್ಲಿ 8,184 ಮದರಸಾಗಳ ಆಧುನೀಕರಣಕ್ಕಾಗಿ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಲು ನಿರ್ಧರಿಸಿದೆ.

ಕೇಂದ್ರದ ಅನುದಾನ ಲಭ್ಯವಾದರೆ ಮದರಸಾಗಳಲ್ಲಿ ಆಧುನಿಕ ಶಿಕ್ಷಣ, ತಾಂತ್ರಿಕ ಕೌಶಲ ಸೇರಿ ಹಲವು ಚಟುವಟಿಕೆಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಉತ್ತರಪ್ರದೇಶದಲ್ಲಿ ನೋಂದಣಿಯಾದ 16 ಸಾವಿರ ಮದರಸಾಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಒಟ್ಟಿನಲ್ಲಿ ಮದರಸಾಗಳ ಆಧುನೀಕರಣದಿಂದ ಮುಸ್ಲಿಂ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲಿದ್ದು, ಮುಸ್ಲಿಮರ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದೇ ಹೇಳಲಾಗುತ್ತಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search