• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ದೇಶ ದ್ರೋಹಿ ಫಾರೂಕ್ ಅಬ್ದುಲ್ಲಾನನ್ನು ಕರೆಸಿ, ಅದ್ಯಾವ ಬಿಟ್ಟಿ ಪ್ರಚಾರ ಪಡೆಯುವಿರಿ ದೇವೇಗೌಡರೇ?

ತೇಜಸ್ವಿ ಪ್ರತಾಪ Posted On December 10, 2017
0


0
Shares
  • Share On Facebook
  • Tweet It

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಬಾಯಿ ಬಿಟ್ಟರೇ ಬರೀ ದೇಶವಿರೋಧಿ ಹೇಳಿಕೆಗಳೇ ಹೊರಬೀಳುತ್ತವೇ. ದೇಶದ ಅನ್ನ ತಿಂದು, ದೇಶದ ಜನರು ಕಟ್ಟಿದ ತೆರಿಗೆ ಹಣದಲ್ಲಿ ರಕ್ಷಣೆ ಪಡೆಯುವ ಈತ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಬೇಕು, ಕಾಶ್ಮೀರ ಪ್ರತ್ಯೇಕ ರಾಷ್ಟ್ರವಾಗಬೇಕು ಎಂದು ಸದಾ ದೇಶದ ವಿರುದ್ಧ ಹಲ್ಲುಮಸೆಯುತ್ತಾ, ಬೆಂಕಿ ಹಚ್ಚುವ ಕಾರ್ಯ ಮಾಡುತ್ತಾನೆ. ಆದರೆ ಇಂತಹ ರಾಷ್ಟ್ರವಿರೋಧಿಯನ್ನು, ರಾಷ್ಟ್ರದ ರಕ್ಷಣೆಗೆ ಸವಾಲಾಗಿ ಪರಿಣಮಿಸಿರುವ ದುರುಳನನ್ನು ಕರ್ನಾಟಕದ ಮಣ್ಣಿನ ಮಗ ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಕುಟುಂಬದ ಜೆಡಿಎಸ್ ಪಕ್ಷದ ಪ್ರಚಾರಕ್ಕೆ ಕರೆಸುತ್ತಿದ್ದಾರೆ. ಇದೇ ಅಲ್ಲವೇ ದೇಶಕ್ಕೆ, ರಾಜ್ಯಕ್ಕೆ ಎದುರಾಗಿರುವ ಕಂಟಕ.

ದೇವೇಗೌಡರಿಗೆ ರಾಷ್ಟ್ರ ರಾಜಕಾರಣದಲ್ಲಿ ಮೆರೆದ ಹಲವು ಧೈತ್ಯ ಮುಖಂಡರ ಆತ್ಮೀಯತೆ ಇದೆ. ಆದರೆ ತುಮಕೂರಿನಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಅಲ್ಪಸಂಖ್ಯಾತರ ಮತ ಸೆಳೆಯುವ ಉದ್ದೇಶಕ್ಕಾಗಿ ಇದೆಂತಾ ದುರುದ್ದೇಶಕ್ಕೆ ಕೈ ಹಾಕಿದ್ದೀರಿ?. ರಾಜಕಾರಣಕ್ಕಾಗಿ ದೇಶದ ಹಿತವನ್ನೇ ಬಲಿ ನೀಡುವ ವ್ಯಕ್ತಿಯನ್ನು ಕರೆಸಿ ಬಿಟ್ಟಿ ಪ್ರಚಾರ ಪಡೆಯುವ ಧೈನೆಸಿ ಸ್ಥಿತಿ ಯಾಕೇ ದೇವೇಗೌಡರೇ?.

ಕೇವಲ ಮುಸ್ಲಿಮರ ಮತಕ್ಕಾಗಿ ದೇಶದ ವಿರುದ್ಧ ಷಡ್ಯಂತ್ರ ಹೂಡುವ ವ್ಯಕ್ತಿಯನ್ನು ಕರೆಸಿ ಮತ ಬೇಡುವ ದರ್ದು ಏನಿತ್ತು ಗೌಡರೇ?. ನೀವು ಹಿಂದೂ ರಾಷ್ಟ್ರವಾಗಲು ಬಿಡುವುದಿಲ್ಲ ಎಂದು ಹೇಳಿದಾಗಲೇ ಜನರು ನಿಮಗೆ ನೀಡಿದ ಪ್ರತಿಕ್ರಿಯೆ ನೋಡಿಯಾದರೂ ಸುಮ್ಮನಿರಬೇಕಿತ್ತು. ಫಾರೂಕ್ ಅಬ್ದುಲ್ಲಾನಂತಹವನನ್ನು ಕರೆಸಿ ಮತ ಬೇಡುತ್ತೀರಾದರೇ ನಿಮಗೆ ನಿಮ್ಮ ಮೇಲೆ ಭರವಸೆ ಇಲ್ಲ ಎಂದಾಯಿತಲ್ಲವೇ?

ರಾಷ್ಟ್ರಗೀತೆ ಹೇಳಲು ಹಿಂಜರೆಯುವ, ದೇಶದ ಧ್ವಜಕ್ಕೆ ಗೌರವ ನೀಡದೆ ಅಪಮಾನ ಮಾಡುವ, ದೇಶದ ಏಕತೆಯನ್ನೇ ಪ್ರಶ್ನಿಸುವ, ದೇಶದ ಗಡಿ ಕಾಯುವ ಸೈನಿಕರನ್ನು ಹೀಯಾಳಿಸುವ ಅಬ್ದುಲ್ಲಾನಂತರ ದೇಶದ್ರೋಹಿಯನ್ನು ನೀವು ಬೆಂಬಲಿಸಿದಂತಾಯಿತಲ್ಲವೇ ದೇವೇಗೌಡರೇ. ಅವರನ್ನು ಕರೆಸಿ ಸಮಾವೇಶ ಮಾಡುತ್ತೀರಿ ಎಂದ ಮೇಲೆ ನೀವು ಅವರ ನಿಲುವಿಗೆ ಬೆಂಬಲಿಸುತ್ತೀರಿ ಎಂದಾಯಿತಲ್ಲವೇ?

ರಾಷ್ಟ್ರ, ರಾಜ್ಯ ರಾಜಕಾರಣದಲ್ಲಿರುವ ನಿಮಗೆ ಕಾಶ್ಮೀರದಲ್ಲಿ ಬೆಂಕಿ ಹಚ್ಚಿ ಪಾಕಿಸ್ತಾನವನ್ನು ಮಣಿಸುವ ತಾಕತ್ತು ಭಾರತಕ್ಕೆ ಇಲ್ಲ ಎನ್ನುವ, ಪಾಕ್ ಆಕ್ರಮಿತ ಕಾಶ್ಮೀರ ಪಾಕಿಸ್ತಾನಕ್ಕೆ ಸೇರುತ್ತದೆ ಎನ್ನುವನನ್ನು ತಂದು ಪ್ರಚಾರ ಪಡೆಯುವ ನಿಮ್ಮ ಈ ನಿರ್ಧಾರ ಅದೆಷ್ಟು ದೇಶ ಭಕ್ತರ ಮನಸ್ಸಿಗೆ ಘಾಸಿ ಮಾಡಬಹುದು ಎಂಬ ಸಣ್ಣ ಪರಿಜ್ಞಾನವೂ ಇಲ್ಲದೇ ಹೋಯಿತೇ?. ಇಂತಹ ದೇಶವಿರೋಧಿಯನ್ನು ಬೆಂಬಲಿಸುವ ಮೂಲಕ ಅದ್ಯಾವ ಸಾಧನೆಯನ್ನು ನೀವು ಮಾಡಲು ಹೊರಟಿದ್ದೀರಿ ಎಂಬ ಪ್ರಶ್ನೆಗೆ ಯಾವ ಉತ್ತರ ನೀಡುತ್ತೀರಿ?.

ಮತಕ್ಕಾಗಿ, ಅಧಿಕಾರಕ್ಕಾಗಿ ದೇವೇಗೌಡರು ಯಾವುದೇ ಸ್ಥಾನಕ್ಕೆ ಇಳಿಯುತ್ತಾರೆ ಎಂಬ ಮಾತಿಗೆ ನೀವು ಪ್ರೇರಣೆ ನೀಡುವುದು ಬೇಡ. ಮತಯಾಚಿಸಲು, ಮತದಾರರನ್ನು ಸೆಳೆಯಲು ಹಲವು ಮಾರ್ಗಗಳಿಗೆ ಅದೆಲ್ಲವನ್ನು ಬಿಟ್ಟು ದೇಶದ್ರೋಹಿಯನ್ನು ಕರೆಸಿ ಮತ ಬೇಡುವ ಹೀನ ಸ್ಥಿತಿಗೆ ಇಳಿಯಬೇಡಿ.. ದೇಶದ್ರೋಹಿಯನ್ನು ಬೆಂಬಲಿಸಲು ಅಲ್ಪಸಂಖ್ಯಾತರೇನು ಮಳ್ಳರಲ್ಲ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
ತೇಜಸ್ವಿ ಪ್ರತಾಪ July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
ತೇಜಸ್ವಿ ಪ್ರತಾಪ July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search