• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರಿನಲ್ಲಿ ಗುರುಸ್ಮರಣೆ ಕಾರ್ಯಕ್ರಮಕ್ಕೆ ಅಭೂತಪೂರ್ವ ಜನಸಾಗರ

Ganesh Posted On December 11, 2017


  • Share On Facebook
  • Tweet It

ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರು ತ್ರಿಕಾಲ ಜ್ಞಾನಿಗಳಾಗಿದ್ದರು. ಅವರು ಸಮಾಜದ ಏಳಿಗೆಗಾಗಿ ತಮ್ಮ ಸರ್ವಸ್ವವನ್ನು ಧಾರೆ ಎರೆದರು. ಅವರು ಮಾಡಿದ ತ್ಯಾಗ ಮತ್ತು ಮಾರ್ಗದಶ್ಯನದಿಂದ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದು ಉದ್ಯಮಿ ದಯಾನಂದ ಪೈ ಹೇಳಿದರು.
ಅವರು ಶ್ರೀಮದ್ ಸುಕೃತೀಂದ್ರ ಪ್ರತಿಷ್ಟಾನದ ವತಿಯಿಂದ ಸಂಘನಿಕೇತನದಲ್ಲಿ ನಡೆದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರು ಹರಿದ್ವಾರದಲ್ಲಿ, ಕಲ್ಪಿಯಲ್ಲಿ ವ್ಯಾಸ ರಘುಪತಿ ದೇವರ ದೇವಸ್ಥಾನವನ್ನು ಕಟ್ಟಿಸಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜಿಎಸ್ ಬಿ ಭಾಂದವರಿಗೆ ಉತ್ತರ ಭಾರತದ ಪುಣ್ಯಸ್ಥಳಗಳ ದರ್ಶನ ಭಾಗ್ಯ ಮಾಡಿಸಿದ್ದರು. ಅವರು ತಮ್ಮ ಉತ್ತರಾಧಿಕಾರಿಯಾಗಿ ಮಾಡಿರುವ ಶ್ರೀಮದ್ ಸಂಯಂಮೀಂದ್ರ ತೀರ್ಥರು ಕಾಶೀಮಠದ ಪೀಠಾಧಿಪತಿಯಾಗಿ ನಮಗೆ ಮಾರ್ಗದಶ್ಯನ ಮಾಡುತ್ತಿದ್ದಾರೆ. ಅವರು ತೋರಿಸಿಕೊಟ್ಟ ದಾರಿಯಲ್ಲಿ ನಡೆಯುವುದು ನಮ್ಮ ಕರ್ತವ್ಯ ಎಂದು ದಯಾನಂದ ಪೈ ಹೇಳಿದರು.
ವೇದಮೂರ್ತಿ ನರಸಿಂಹ ಆಚಾರ್ಯ ಮಾತನಾಡಿ ನಾವು ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದಲ್ಲಿ ಹುಟ್ಟಿದ ಭಾಗ್ಯಕ್ಕೆ ಸಂಧ್ಯಾವಂದನೆ, ಜಪ, ತಪಗಳಿಂದ ದೇವರ ಆರಾಧನೆ ಮಾಡಬೇಕು. ಶ್ರೀಮದ್ ಸುಧೀಂದ್ರ ತೀರ್ಥರಿಗೆ ಮಂಗಳೂರಿನ ಬಗ್ಗೆ ತುಂಬಾ ಪ್ರೀತಿ ಇತ್ತು. ಅವರ ಆರೋಗ್ಯ ಹದಗೆಟ್ಟಾಗ ಮಂಗಳೂರಿನಲ್ಲಿ ಕೊಟ್ಟ ಚಿಕಿತ್ಸೆಯಿಂದ ಅವರ ಆರೋಗ್ಯ ಸುಧಾರಿಸಿತ್ತು. ಕಾನೆಗಾಡಿನಿಂದ ಭಟ್ಕಳದ ತನಕ ಇರುವ ಮಂಗಳೂರು ಪ್ರಾಂತ್ಯದಲ್ಲಿ ವಾಸಿಸುವ ಸಮಾಜ ಭಾಂದವರ ಬಗ್ಗೆ ಅವರು ಚಿಂತಿಸುತ್ತಿದ್ದರು ಎಂದರು.
ಬೆಂಗಳೂರು ಕಾಶೀಮಠದ ಕಾರ್ಯದರ್ಶಿ ನಾರಾಯಣ ಶೆಣೈ ಮಾತನಾಡಿ ಕಾಶೀಮಠದ ಪರಿತ್ತಕ್ಯ ಸ್ವಾಮಿ ರಾಘವೇಂದ್ರ ತೀರ್ಥರಿಗೂ ಕಾಶೀಮಠಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಾಲಯವೇ ಹೇಳಿದೆ. ಆದರೂ ಮಠದ ಸ್ವತ್ತನ್ನು ಮಠಕ್ಕೆ ರಾಘವೇಂದ್ರ ಮರಳಿಸದೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾವನ, ಚೆಂಪಿ ಶ್ರೀಕಾಂತ್ ಭಟ್ ಸಹಿತ ಇತರರು ಮಾತನಾಡಿದರು. ಡಿ ವೇದವ್ಯಾಸ ಕಾಮತ್ ಸ್ವಾಗತಿಸಿದರು. ಕೊಂಚಾಡಿ ರತ್ನಾಕರ ಕಾಮತ್ ವಂದಿಸಿದರು. ಗಣೇಶ್ ಪ್ರಸಾದ್ ಮಲ್ಯ ನಿರೂಪಿಸಿದರು.

  • Share On Facebook
  • Tweet It


- Advertisement -
Guru Smarane


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Ganesh May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Ganesh May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search