• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ದೊಡ್ಡಣ್ಣ ಅಮೆರಿಕಾದ ವಿರೋಧದ ಮಧ್ಯೆ, ವಿಶ್ವದ ಮುಸ್ಲಿಂ ರಾಷ್ಟ್ರಗಳ ವಾದಕ್ಕೆ ಭಾರತದ ಬೆಂಬಲ

TNN Correspondent Posted On December 22, 2017
0


0
Shares
  • Share On Facebook
  • Tweet It

ದೆಹಲಿ: ಇಸ್ರೆಲ್ ರಾಜಧಾನಿಯಾಗಿ ಜೇರುಸೆಲಂನ್ನು ಅಮೆರಿಕ ಅಧ್ಯಕ್ಷ ಟ್ರಂಪ್ ಬೆಂಬಲಿಸಿರುವ ಮಧ್ಯೆ ಭಾರತವೂ ವಿಶ್ವ ಸಂಸ್ಥೆಯ ಸಭೆಯಲ್ಲಿ ಜೇರುಸೆಲಂ ಇಸ್ರೆಲ್ ರಾಜಧಾನಿ ಎಂಬ ವಾದಕ್ಕೆ ವಿರೋಧ ವ್ಯಕ್ತಪಡಿಸಿದೆ. ಸುಮಾರು ಏಳು ದಶಕಗಳಿಂದ ಇರುವ ಪ್ಯಾಲೆಸ್ತಿನ್ ಮತ್ತು ಇಸ್ರೆಲ್ ಮಧ್ಯದ ವಿವಾದ ಇದೀಗ ಹೊಸ ರೂಪ ಪಡೆದುಕೊಂಡಿದೆ.

ಜೇರುಸೆಲಂ ನ್ನು ಯಾವುದೇ ಕಾರಣಕ್ಕೂ ಇಸ್ರೆಲ್ ರಾಜಧಾನಿಯಾಗಿ ಘೋಷಿಸಬಾರದು ಎಂದು ವಿಶ್ವದ ಮುಸ್ಲಿಂ ರಾಷ್ಟ್ರಗಳು ಆಗ್ರಹಿಸಿದ್ದವು. ಜೇರುಸೆಲಂನ್ನು ಇಸ್ರೆಲ್ ರಾಜಧಾನಿಯಾಗಿ ಘೋಷಿಸಬೇಕು ಎಂಬ ವಾದಕ್ಕೆ ಭಾರತ ಸೇರಿ 100 ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ.

ವಿಶ್ವಸಂಸ್ಥೆ ಜನರಲ್ ಅಸೆಂಬ್ಲಿ ಅಮೆರಿಕದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಂದ ಜೇರು ಸೆಲಂ ಕುರಿತ ಅಭಿಪ್ರಾಯ ಕೇಳಿ ಮತದಾನ ಏರ್ಪಡಿಸಿತ್ತು. ಇದರಲ್ಲಿ ಭಾರತ ವಿಶ್ವದ ಮುಸ್ಲಿಂ ರಾಷ್ಟ್ರಗಳ ವಾದವನ್ನು ಬೆಂಬಲಿಸಿ, ವಿಶ್ವಸಂಸ್ಥೆಯ ವಾದಕ್ಕೆ ಬೆಂಬಲ ಸೂಚಿಸಿದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಗೆ ಭೇಟಿ ನೀಡಿದ್ದರು. ಈ ವೇಳೆ ಪಕ್ಕದ ಪ್ಯಾಲೆಸ್ತಿನ್ ಗೆ ಭೇಟಿ ನೀಡದಿರುವುದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ಮುಂದಿನ ತಿಂಗಳು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತ್ಯಾನುಹ್ ಭಾರತಕ್ಕೆ ಭೇಟಿ ನೀಡಲಿದ್ದು, ಭಾರತದ ಈ ನಿರ್ಧಾರ ತೀವ್ರ ಮಹತ್ವ ಪಡೆದುಕೊಂಡಿದೆ.

ನಮ್ಮ ನಿರ್ಧಾರಗಳು ಕೆಲ ಮೌಲ್ಯಯುತ ತತ್ವಗಳ ಆಧಾರದ ಮೇಲೆ ಕೈಗೊಳ್ಳಲಾಗುತ್ತದೆ. ನಾವು ಸುದೀರ್ಘ ಮತ್ತು ಬಲಿಷ್ಟ ಸಂಬಂಧವನ್ನು ಹೊಂದಲು ಇಚ್ಛಿಸುತ್ತೇವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಡಿಸೆಂಬರ್ 6ರಂದು ಡೋನಾಲ್ಡ್ ಟ್ರಂಪ್ ಘೋಷಿಸಿರುವ ಮಧ್ಯೆಯೇ ಭಾರತದ ನಿಲುವು ಬದಲಾಗಿದೆ ಎನ್ನಲಾಗಿದೆ. ಆದರೆ ಯಾವುದೋ ಮೂರನೇ ರಾಷ್ಟ್ರದ ನಿರ್ಧಾರಕ್ಕೆ ನಾವು ಬೆಂಬಲ ನೀಡುವುದಿಲ್ಲ. ನಮ್ಮ ನಿಲುವು ಸ್ಪಷ್ಟ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search