• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಸಂಘಟನೆಗೆ ಸೇರದ ಮುಸ್ಲಿಂ ಯುವಕ ಏನಾದ ಗೊತ್ತಾ..? ಕೇಳಿ ಆ ಸ್ಫೂರ್ತಿಯ ಕಥೆಯಾ…

TNN Correspondent Posted On December 23, 2017
0


0
Shares
  • Share On Facebook
  • Tweet It

ಶ್ರೀನಗರ: 18 ವರ್ಷಗಳ ಹಿಂದೆ ಭಯೋತ್ಪಾದನಾ ಗುಂಪಿನೊಂದಿಗೆ ಕೈಜೋಡಿಸು ಎಂದು ಯುವಕನನ್ನು ಹಿಂಸಿಸುತ್ತಾರೆ ಉಗ್ರರು, ಆದರೆ ಆ ಯುವಕನ ಕುಟುಂಬದವರು ಉಗ್ರರಿಗೆ ತಕ್ಕ ಉತ್ತರ ನೀಡಿ, ನಮ್ಮ ಮಗ ಉಗ್ರರೊಂದಿಗೆ ಕೈಜೋಡಿಸಲ್ಲ ಎನ್ನುತ್ತಾರೆ. ಅದಕ್ಕೆ ಉಗ್ರರು ನೆಮ್ಮದಿಯಿಂದ ಇದ್ದ ಆ ಕುಟುಂಬದ ಮನೆಯನ್ನೇ ಸುಟ್ಟು ಹಾಕುತ್ತಾರೆ. ಉಗ್ರರು ಸುಟ್ಟ ಮನೆಯಿಂದಲೇ ಅಂದು 2 ವರ್ಷದ ಹಸುಗೂಸು ಇಂದು ಕಾಶ್ಮೀರದ ಸಿವಿಲ್ ಪರೀಕ್ಷೆಯಲ್ಲಿ ಪಾಸಾಗಿ ಕಲ್ಲೆಸೆಯುವ ಯುವಕರಿಗೆ ಮಾದರಿಯಾಗಿದ್ದಾನೆ.

ಕಾಶ್ಮೀರದ ಸುರಾನ್ ಕೋಟ್ ನಲ್ಲಿ ಕುಟುಂಬಸ್ಥರೆಲ್ಲರು ವಾಸಿಸುತ್ತಿರುವ 27 ವರ್ಷದ ಅಂಜುಮ್ ಬಷೀರ್ ಖಾನ್ ಉಗ್ರರ ಕಿರುಕುಳ ಮೆಟ್ಟಿ ನಿಂತು, ಪ್ರತ್ಯೇಕವಾದಿಗಳೊಡನೆ ಕೈಜೋಡಿಸದೇ ಉತ್ತಮ ಅಭ್ಯಾಸ ಮಾಡಿ, ಕಾಶ್ಮೀರ್ ಸಿವಿಲ್ ಪರೀಕ್ಷೆಯಲ್ಲಿ ಪಾಸಾಗಿ ಸರ್ಕಾರಿ ನೌಕರಿ ಪಡೆದು ನೆಮ್ಮದಿ ಜೀವನ ಸಾಗಿಸುತ್ತಿರುವ ಮಾದರಿ ಯುವಕ.

ಜಮ್ಮು ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಪಾಸಾಗಿರುವ ಯುವಕ ಅಂಜುಮ್ ‘ಭಯೋತ್ಪಾದನೆಯ ಕರಾಳ ಛಾಯೆಯಿಂದ ಸಂಕಷ್ಟದಲ್ಲಿರುವ ಸುರಾನ್ ಕೋಟ್ ಜನರ ಸೇವೆ ಮಾಡಲು ಇಚ್ಛಿಸಿದ್ದಾರೆ. ಶಿಕ್ಷಣವೇ ಬದಲಾವಣೆಗೆ ಮೂಲ ಕಾರಣ. ಯುವಕರು ಶಿಕ್ಷಣದತ್ತ ಒಲವು ಹೊಂದಬೇಕು. ಆಗ ಮಾತ್ರ ಏಳಿಗೆ ಸಾಧ್ಯ ಎಂದು ಹೇಳುವ ಮೂಲಕ ಭಯೋತ್ಪಾದನೆಗೆ ಒಳಗಾಗುತ್ತಿರುವ ಯುವಕರಿಗೆ ಸಂದೇಶ ನೀಡಿದ್ದಾರೆ.

ಸುರಾನ್ ಕೋಟ್ ನ ತೆಹ್ಸಿಲ್ ಪ್ರದೇಶ ಜಮ್ಮುಕಾಶ್ಮೀರದಲ್ಲೇ ಅತಿ ಹೆಚ್ಚು ಭಯೋತ್ಪಾದಕರಿಂದ ಪೀಡನೆಗೆ ಒಳಗಾದ್ದದ್ದು. 1999ರಲ್ಲಿ  ಅಂಜುಮ್ ತಂದೆ  ಮಹಮ್ಮದ್ ಬಷೀರ್ ಭಾರಿ ಸಂಕಷ್ಟವನ್ನು ಎದುರಿಸಿದ್ದರು. ನಿತ್ಯ ಮಕ್ಕಳನ್ನು ಭಯೋತ್ಪಾದಕರೊಂದಿಗೆ ಕೈಜೋಡಿಸಿ ಎಂದು ಕಿರುಕುಳ ನೀಡಲಾಗುತ್ತಿತ್ತು. ವಿರೋಧಿಸಿದಕ್ಕೆ ಮನೆಯನ್ನೇ ಭಯೋತ್ಪಾದಕರು ಸುಟ್ಟು ಕರಕಲಾಗಿ ಮಾಡಿದರು. ಅದನ್ನು ಎದುರಿಸಿ ಮಹಮ್ಮದ್ ಬಷೀರ್ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಹೊಸ ಲೋಕವನ್ನು ಪರಿಚಯಿಸಿದರು.

ನನ್ನ ಮಕ್ಕಳು ಶಾಂತಿಯ ಪ್ರತಿರೂಪವಾಗಬೇಕು ಎಂದು ನಾನು ಭಯಸುತ್ತೇನೆ. ಯಾವ ಮಕ್ಕಳು ಭಯೋತ್ಪಾದನೆಯ ಪಾಶಕ್ಕೆ ಸಿಲುಕಿ ಒದ್ದಾಡುತ್ತಿದ್ದಾರೋ ಅವರಿಗೆ ನನ್ನ ಮಕ್ಕಳು ಮಾದರಿಯಾಗಬೇಕು ಎನ್ನುತ್ತಾರೆ ಖಾನ್ ತಂದೆ ಮಹಮ್ಮದ್ ಬಷೀರ್.

ಪರೀಕ್ಷೆ ಬರೆದ 1200 ಜನರಲ್ಲಿ ಕೇವಲ 51 ಜನ ಪಾಸಾಗಿದ್ದು, ಅದರಲ್ಲಿ ಅಂಜುಮ್ ಖಾನ್ ಸಾಧನೆ ಸ್ಫೂರ್ತಿದಾಯಕವಾಗಿದ್ದು, ಕುಟುಂಬಸ್ಥರು ಖುಷಿಯಲ್ಲಿದ್ದಾರೆ. ಅಲ್ಲದೇ ಇತರ ಮಕ್ಕಳು ಖಾನ್ ನಂತೆ ಶಿಕ್ಷಣ ಪಡೆದು ನೆಮ್ಮದಿಯ ಜೀವನ ನಡೆಸಲಿ ಎಂದು ಆಶಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search