• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕದ್ರಿ ಮಂಜುನಾಥೇಶ್ವರನ ಶ್ಲೋಕ ಸದ್ದಾದರೇ, ಮಸೀದಿ, ಚರ್ಚ್ ಗಳು ಮಾಡುವ ಕಿರಿಕಿರಿ ನಿನಾದವೇ?

ರಕ್ಷಿತ್ ಮಂಗಳೂರು Posted On December 23, 2017
0


0
Shares
  • Share On Facebook
  • Tweet It

ಕರಾವಳಿಯ ಐತಿಹಾಸಿಕ ಸುಪ್ರಸಿದ್ಧ ಕದ್ರಿ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮೈಕ್ ನಲ್ಲಿ ಶ್ಲೋಕಗಳನ್ನು ಹಾಕುವುದರಿಂದ ತೊಂದರೆಯಾಗುತ್ತಿದೆ ಎಂದು ನೆಪ ಹೇಳಿ ಧ್ವನಿವರ್ದಕಗಳನ್ನು ನಿಷೇಧಿಸುವ ಹುನ್ನಾರ ಧಾರ್ಮಿಕ ದತ್ತಿ ಇಲಾಖೆ ನಡೆಸಿದೆ. ಧ್ವನಿ ವರ್ಧಕವನ್ನು ನಿಷೇಧಿಸುವಂತೆ ಧಾರ್ಮಿಕ ಮತ್ತು ದತ್ತಿ ಇಲಾಖೆ ಸಹಾಯಕ ಆಯುಕ್ತ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದಿದ್ದು, ಇದೀಗ ಮತ್ತೊಮ್ಮೆ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಸಾಬೀತು ಪಡಿಸಿದೆ.

ಮಂಗಳೂರಿನ ಕ್ರಿಶ್ಚಿಯನ್ ಧರ್ಮದ ಬ್ಲೇನಿ ಡಿಸೋಜಾ ಮಂಗಳೂರು ಮಹಾನಗರ ಪಾಲಿಕೆ ಮತ್ತು ಧಾರ್ಮಿಕ ದತ್ತಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ ಎಂದು ಧ್ವನಿವರ್ಧಕ ನಿಷೇಧಿಸಲು ಮುಂದಾಗಿರುವುದು ಧಾರ್ಮಿಕ ಇಲಾಖೆಯ ನೈತಿಕ ಅಧಪತನಕ್ಕೆ ಸಾಕ್ಷಿ. ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ, ಯಕ್ಷಗಾನ ಮತ್ತು ಇತರ ಉತ್ಸವದಲ್ಲಿ ಇಡೀ ದಿನ ಧ್ವನಿವರ್ಧಕ ಬಳಸಲಾಗುತ್ತಿದೆ. ಇದರಿಂದ ಸುತ್ತಮುತ್ತಲು ವಾಸಿಸುವ ಜನರಿಗೆ ಕಿರಿಕಿರಿಯಾಗುತ್ತಿದೆ ಎಂದು ದೂರು ನೀಡಿದ್ದ. ಅದಕ್ಕೆ ತಕ್ಕಂತೆ, ಹಿಂದೂ ವಿರೋಧಿಗಳಂತೆ ವರ್ತಿಸಿರುವ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಳ್ಳುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಪತ್ರ ಬರೆದಿರುವುದು ಹಿಂದೂಗಳ ಮೇಲಿನ ಆಡಳಿತಾಂಗದ ದ್ವೇಷವೇ ಹೊರತು ಮತ್ತೇನಿಲ್ಲ.

ಆರು ತಿಂಗಳ ಹಿಂದೆ ಬ್ಲೇನಿ ಡಿಸೋಜಾ ಸೇರಿ ಕೆಲ ಎಡಬಿಡಂಗಿಗಳು ಸಲ್ಲಿಸಿದ ಮನವಿಗೆ ಇದೀಗ ಧಾರ್ಮಿಕ ಮತ್ತು ದತ್ತಿ ಇಲಾಖೆ ಸ್ಪಂದಿಸಿ, ಕ್ರಮ ಕೈಗೊಳ್ಳುವಂತೆ ಸೂಚಿಸುತ್ತದೆ ಎಂದರೇ, ಸರ್ಕಾರದ ಅಲ್ಪಸಂಖ್ಯಾತ ತುಷ್ಟಿಕರಣದ ಹೀನ ಹಂತವಲ್ಲದೇ ಮತ್ತೇನಲ್ಲ. ಸದಾ ಹಿಂದೂಗಳ ದೇವಸ್ಥಾನದಲ್ಲಿ ಪರಿಸರ ರಕ್ಷಣೆಯ ಜಪ ಮಾಡುವ ಸರ್ಕಾರಕ್ಕೆ ಉಳಿದ ಸಮುದಾಯಗಳನ್ನು ಒಲಿಸುವ ಹೀನ ಕೃತ್ಯಕ್ಕೆ ಇಳಿದಿರುವುದು ನೈತಿಕ ಅಧಃಪತನವೇ ಸರಿ.

ಧಾರ್ಮಿಕ ದತ್ತಿ ಇಲಾಖೆಯ ಈ ನಿರ್ಧಾರಕ್ಕೆ ಸಹಜವಾಗಿಯೇ ಭಾರಿ ಆಕ್ರೋಶ ವ್ಯಕ್ತವಾಗಿದೆ. ಅನ್ಯ ಧರ್ಮಿಯರ ಮನವಿಗೆ  ಓಗೊಟ್ಟು ಧ್ವನಿವರ್ಧಕ ನಿಷೇಧಿಸಿದರೇ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಅದರಂತೆ ಮಸೀದಿಗಳ ಮೇಲೆ ಅರಚುವ, ಚರ್ಚ್ ಗಳಲ್ಲಿ ಗೀಳಿಡುವ ಧ್ವನಿ ವರ್ಧಕಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ಅದಕ್ಕೆ ಧಾರ್ಮಿಕ ಇಲಾಖೆ ಸ್ಪಂದಿಸಬೇಕು. ಇಲ್ಲವೇ ಮತ್ತೊಂದು ಧಾರ್ಮಿಕ ಇಲಾಖೆಯೇ ಪರೋಕ್ಷವಾಗಿ ಪ್ರತಿಭಟನೆಗಳಿಗೆ ಕುಮ್ಮಕು ನೀಡಿದಂತೆ ಆಗುತ್ತದೆ. ನಂತರ ಕೋಮುಗಲಭೆ, ಹಿಂದೂ ಸಂಘಟನೆಗಳು ಎಂದು ಅರಚಾಟಕ್ಕೆ ಅವಕಾಶ ನೀಡಬಾರದು.

ಧಾರ್ಮಿಕ ಇಲಾಖೆ ಸಹಾಯಕ ಆಯುಕ್ತರು ಕೇವಲ ಹಿಂದೂ ದೇವಸ್ಥಾನದಲ್ಲಿ ಧ್ವನಿವರ್ಧಕಗಳಲ್ಲಿ ಶ್ಲೋಕ, ದೇವರ ಸ್ತುತಿಯ ಗೀತೆಗಳನ್ನು ಹಾಕಲಾಗುತ್ತೆ ಅದನ್ನು ನಿಷೇಧಿಸಲು ಮುಂದಾಗಿರುವುದು ಸರ್ಕಾರದ ಹಿಂದೂ ವಿರೋಧಿ ನೀತಿಗೆ ಸಾಕ್ಷಿಯಾಗಿದೆ. ಅಲ್ಲದೇ ಮುಸ್ಲಿಮರು ಮಸೀದಿಯಲ್ಲಿ ಬಳಸುವ ಧ್ವನಿವರ್ಧಕ ಮತ್ತು ಕ್ರಿಶ್ಚಿಯನ್ನರು ಚರ್ಚ್ ಗಳಲ್ಲಿ ಬಳಸುವ ಗಂಟೆಯ ಶಬ್ದಮಾಲಿನ್ಯವನ್ನು ತಡೆಯುವ ಧೈರ್ಯ ತೋರಬೇಕು. ಅವರಿಗೆ ಅವು ಕಾಣುವುದಿಲ್ಲವೇ?

ವಾರ್ಷಿಕ ಕೋಟ್ಯಂತರ ಆದಾಯವನ್ನು ಬೊಕ್ಕಸಕ್ಕೆ ನೀಡುವ ಹಿಂದೂ ದೇವಸ್ಥಾನಗಳ ಹಣವನ್ನು ನುಂಗಿ ನೀರು ಕುಡಿಯುವ ಸರ್ಕಾರ, ಅದೇ ಹಿಂದೂ ದೇವಸ್ಥಾನಗಳಲ್ಲಿನ ಆಚರಣೆಗೆ ತಡೆಯೊಡ್ಡಲು ಮುಂದಾಗಿರುವುದು ದುರದೃಷ್ಟಕರ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
ರಕ್ಷಿತ್ ಮಂಗಳೂರು January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
ರಕ್ಷಿತ್ ಮಂಗಳೂರು December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search