• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಣಿಶಂಕರ ಅಯ್ಯರ್ ಬಿಜೆಪಿ ಏಜೆಂಟ್ ಅಂತೆ: ಅಲ್ಪೇಶ್ ಹತಾಶೆಯ ನುಡಿ

TNN Correspondent Posted On December 24, 2017
0


0
Shares
  • Share On Facebook
  • Tweet It

ಗಾಂಧಿ ನಗರ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹಿಂದುಳಿದ ವರ್ಗಗಳ ಮುಖಂಡ ಅಲ್ಪೇಶ್ ಠಾಕೂರ್ ‘ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಕಾರಣ. ಮಣಿಶಂಕರ್ ಅಯ್ಯರ್ ಬಿಜೆಪಿ ಏಜೆಂಟ್ ಆಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮಣಿಶಂಕರ್ ಅಯ್ಯರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಳಸಿದ್ದ ‘ನೀಚ ವ್ಯಕ್ತಿ’ ಪದವನ್ನೇ ಬಳಸಿಕೊಂಡು ಬಿಜೆಪಿ ಗೆಲುವು ಸಾಧಿಸಿತು. ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿತು. ಅಲ್ಲದೇ ಮಣಿಶಂಕರ ಅಯ್ಯರ ನಾವು ಗೆಲ್ಲುವ ಎಲ್ಲ ಅವಕಾಶಗಳನ್ನು ಕಸಿದುಕೊಂಡು, ಬಿಜೆಪಿಗೆ ಪ್ರಬಲ ಅಸ್ತ್ರವನ್ನು ನೀಡಿ, ಜಯಭೇರಿ ಭಾರಿಸಲು ಅನುಕೂಲ ಮಾಡಿಕೊಟ್ಟರು ಎಂದು ಖಾಸಗಿ ಚಾನೆಲ್ ಜತೆ ಮಾತನಾಡುವಾಗ ಹೇಳಿದ್ದಾರೆ.

ಹಿಂದುಳಿದ ನಾಯಕ ಅಲ್ಪೇಶ್ ಠಾಕೂರ್, ಪಾಟೀದಾರ್ ಮೀಸಲು ಹೋರಾಟ ಸಮಿತಿಯ ಹಾರ್ದಿಕ್ ಪಟೇಲ್, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಗೆ ಬೆಂಬಲಿಸಿದರೂ ಕಾಂಗ್ರೆಸ್ 77 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಹೆಣಗಾಡಬೇಕಾಯಿತು. ಇದೀಗ ಬಿಜೆಪಿ ಗೆಲುವು ಸಾಧಿಸಿ, ಸರ್ಕಾರ ರಚಿಸುತ್ತಿರುವಾಗ ಸೋಲಿನ ಹೊಣೆಯನ್ನು ಹೊರಲಾಗದೇ, ಅತ್ತ ಗೆಲುವನ್ನು ಸಂಭ್ರಮಿಸಲಾಗದೇ ನಾಲ್ಕು ಜನ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search