• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿವಳಿ ತಲಾಖ್ ನಿಷೇಧ ವಿಧೇಯಕ ವಾಪಸ್ ಪಡೆಯಬೇಕು ಎಂದು ಹೇಳಿದ ಆ ಸಂಘಟನೆ ಯಾವುದು ಗೊತ್ತಾ?

TNN Correspondent Posted On December 25, 2017
0


0
Shares
  • Share On Facebook
  • Tweet It

ದೆಹಲಿ: ದೇಶಾದ್ಯಂತ ಮುಸ್ಲಿಂ ಮಹಿಳೆಯರಿಗೆ ಮಾರಕವಾಗಿರುವ ತ್ರಿವಳಿ ತಲಾಖ್ ನಿಷೇಧಿಸಬೇಕು ಎಂದು ಅಖಿಲ ಭಾರತ ಮುಸ್ಲಿಂ ಮಹಿಳಾ ಆಂದೋಲನ ಸಮಿತಿ ಸದಸ್ಯೆಯರು ಅಭಿಯಾನ ನಡೆಸಿದ ಫಲವಾಗಿ, ಸುಪ್ರೀಂ ಕೋರ್ಟೇ ತ್ರಿವಳಿ ತಲಾಖ್ ನಿಷೇಧಿಸಿದ್ದರೂ, ತಲಾಖ್ ಪರ ಮಾತನಾಡುವವರ ಸಂಖ್ಯೆ ಮಾತ್ರ ಕಡಿಮೆಯಿಲ್ಲ.

ಇದೇ ಸಾಲಿನಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ ಬಿ) ನಿಂತಿದ್ದು, ತ್ರಿವಳಿ ತಲಾಖ್ ವಿರುದ್ಧ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ತ್ರಿವಳಿ ತಲಾಖ್ ವಿಧೇಯಕ ವಾಪಸ್ ಪಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ಸಂಘಟನೆ ತೀರ್ಮಾನಿಸಿದೆ.

ಅದಕ್ಕಾಗಿ ದೆಹಲಿಯಲ್ಲಿ ಸಂಘಟನೆ ಸದಸ್ಯರು ಹಾಗೂ ಮುಖಂಡರೊಂದಿಗೆ ತುರ್ತು ಸಭೆ ನಡೆಸಿದ್ದು, ತ್ರಿವಳಿ ತಲಾಖ್ ನಿಷೇಧ ವಿಧೇಯಕ ಮಹಿಳೆಯರ ವಿರೋಧಿಯಾಗಿದೆ. ಇದರಿಂದ ವಿವಿಧ ಕುಟುಂಬಗಳು ನಾಶವಾಗಲಿವೆ. ಹಾಗಾಗಿ ವಿಧೇಯಕ ವಾಪಸ್ ಪಡೆಯುವಂತೆ ಮೋದಿ ಅವರಿಗೆ ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ದಿಢೀರ್ ಅಂತ ತ್ರಿವಳಿ ತಲಾಖ್ ನೀಡುವುದನ್ನು ಸಂಘಟನೆಯೂ ವಿರೋಧಿಸುತ್ತದೆ. ಆದರೆ ನಿಷೇಧ ವಿಧೇಯಕ ಮಂಡನೆ ವೇಳೆ ಸರ್ಕಾರ ಸಂಬಂಧಪಟ್ಟವರನ್ನು ಸಂಪರ್ಕಿಸಿಲ್ಲ. ತಲಾಖ್ ನೀಡಿದರೆ ಪರಿಹಾರ ಹಾಗೂ ಜೈಲು ಎರಡನ್ನೂ ವಿಧಿಸಲಾಗಿರುವುದು ಸಮಂಜಸ ಅಲ್ಲ. ಹಾಗಾಗಿ ವಾಪಸ್ ಪಡೆಯಬೇಕು ಎಂದು ಸಂಘಟನೆ ಮುಖಂಡರು ಹೇಳಿದ್ದಾರೆ.

ಆದರೆ ಲಕ್ಷಾಂತರ ಮುಸ್ಲಿಂ ಮಹಿಳೆಯರ ಒಕ್ಕೊರಲ ಧ್ವನಿಗೆ ಓಗೊಟ್ಟ ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ರದ್ದುಗೊಳಿಸಿ ಆದೇಶಿಸಿದೆ. ಇದೇ ದಿಸೆಯಲ್ಲಿ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧ ಕರಡು ರಚಿಸಿ ದೇಶದ ಎಲ್ಲ ರಾಜ್ಯಗಳಿಗೆ ರವಾನಿಸಿ, ಸಲಹೆ ಪಡೆಯಲು ಮುಂದಾಗಿದೆ. ಆದರೂ ಇಂಥ ಸಂಘಟನೆಗಳು ಮಾತ್ರ ತ್ರಿವಳಿ ತಲಾಖ್ ನಿಂದ ಕುಟುಂಬ ನಾಶವಾಗುತ್ತಿವೆ ಎಂದು ಬೊಬ್ಬೆ ಹಾಕುತ್ತಿವೆ.

0
Shares
  • Share On Facebook
  • Tweet It




Trending Now
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
  • Popular Posts

    • 1
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 2
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 3
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 4
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 5
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!

  • Privacy Policy
  • Contact
© Tulunadu Infomedia.

Press enter/return to begin your search