• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡ್ಡ ಬೋಳಿಸದ 10 ಮುಸ್ಲಿಮರನ್ನು ಎನ್ ಸಿಸಿ ಶಿಬಿರದಿಂದ ಹೊರಹಾಕಿದ ಆಡಳಿತ ಮಂಡಳಿ!

TNN Correspondent Posted On December 26, 2017
0


0
Shares
  • Share On Facebook
  • Tweet It

ದೆಹಲಿ: ನ್ಯಾಷನಲ್ ಕೆಡೆಟ್ ಕಾರ್ಪ್ಸ್ (ಎನ್ ಸಿಸಿ) ಶಿಬಿರ ಅಥವಾ ತರಬೇತಿ ಎಂದರೇನೇ ಶಿಸ್ತಿಗೆ ಹೆಸರಾಗಿದೆ. ಆದರೆ ಈ ಶಿಬಿರದಲ್ಲೂ ಗಡ್ಡ ಬೋಳಿಸದೆ ಅಶಿಸ್ತಿನಿಂದ ಭಾಗಿಯಾದ ಆರೋಪದಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಎನ್ ಸಿಸಿ ವಿಭಾಗದ 10 ಮುಸ್ಲಿಂ ವಿದ್ಯಾರ್ಥಿಗಳನನ್ನು ಶಿಬಿರದಿಂದಲೇ ಹೊರಹಾಕಲಾಗಿದೆ.

ರೋಹಿಣಿ ಎಂಬ ಪ್ರದೇಶದಲ್ಲಿ ಶಿಬಿರ ನಡೆಯುತ್ತಿದ್ದು, ಆಡಳಿತ ಮಂಡಳಿ ಶಿಸ್ತಿನ ಕಾರಣದಿಂದ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಸೂಚನೆ ನೀಡಿದೆ. ಆದರೆ ವಿದ್ಯಾರ್ಥಿಗಳು ನಿರಾಕರಿಸಿದ ಕಾರಣ ಶಿಬಿರದಿಂದ ಹೊರಹಾಕಿ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.

ಆದರೆ ನಮ್ಮನ್ನು ಶಿಬಿರದಿಂದ ಹೊರಹಾಕಲು ಸೂಕ್ತ ಕಾರಣ ನೀಡದೆ, “ಅಶಿಸ್ತು” ಎಂದು ಮಾತ್ರ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ಆಗಮಿಸಿ ಪ್ರತಿಭಟನೆ ಸಹ ನಡೆಸಿದ್ದಾರೆ.

ನಾವು ಎನ್ ಸಿಸಿ ಶಿಬಿರದಲ್ಲಿ ಪಾಲ್ಗೊಳ್ಳುವ ಆಸಕ್ತಿ ಹೊಂದಿದ್ದರೂ ಬರೀ ಗಡ್ಡ ಬೋಳಿಸಿಲ್ಲ ಎಂಬ ಕಾರಣಕ್ಕಾಗಿಯೇ ಶಿಬಿರದಿಂದ ಹೊರಹಾಕಲಾಗಿದೆ. ಆದರೆ ನಮ್ಮ ಗಡ್ಡದಿಂದ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ ಎಂದು ಶಿಬಿರಾರ್ಥಿ ದಿಲ್ಶಾದ್ ಅಹ್ಮದ್ ಹೇಳಿದ್ದಾರೆ.

ಶಿಬಿರದ ನೇತೃತ್ವ ವಹಿಸಿಕೊಂಡಿದ್ದ ಲೆಫ್ಟಿನೆಂಟ್ ಕರ್ನಲ್ ಬಿ.ಎಸ್.ಯಾದವ್ ಈ ಕುರಿತು ಸ್ಪಷ್ಟನೆ ನೀಡಿದ್ದು, ನಾನು 26 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ಎನ್ ಸಿಸಿಯಲ್ಲಿ ಎಲ್ಲರೂ ಗಡ್ಡ ಬೋಳಿಸಿಕೊಂಡು ಶಿಸ್ತಿನಿಂದ ಇರಬೇಕು ಎಂಬುದು ನಿಯಮ. ನಾವು ಸಹ ಆ ವಿದ್ಯಾರ್ಥಿಗಳಿಗೆ ಶಿಷ್ಟಾಚಾರ ಪಾಲಿಸುವಂತೆ ತಿಳಿಸಿದ್ದೆವು. ಆದರೆ ಧರ್ಮದ ಕಾರಣವೊಡ್ಡಿ ಅವರು ಶಿಬಿರ ಬಿಟ್ಟು ತೊರೆದಿದ್ದಾರೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search