• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡ್ಡ ಬೋಳಿಸದ 10 ಮುಸ್ಲಿಮರನ್ನು ಎನ್ ಸಿಸಿ ಶಿಬಿರದಿಂದ ಹೊರಹಾಕಿದ ಆಡಳಿತ ಮಂಡಳಿ!

TNN Correspondent Posted On December 26, 2017
0


0
Shares
  • Share On Facebook
  • Tweet It

ದೆಹಲಿ: ನ್ಯಾಷನಲ್ ಕೆಡೆಟ್ ಕಾರ್ಪ್ಸ್ (ಎನ್ ಸಿಸಿ) ಶಿಬಿರ ಅಥವಾ ತರಬೇತಿ ಎಂದರೇನೇ ಶಿಸ್ತಿಗೆ ಹೆಸರಾಗಿದೆ. ಆದರೆ ಈ ಶಿಬಿರದಲ್ಲೂ ಗಡ್ಡ ಬೋಳಿಸದೆ ಅಶಿಸ್ತಿನಿಂದ ಭಾಗಿಯಾದ ಆರೋಪದಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಎನ್ ಸಿಸಿ ವಿಭಾಗದ 10 ಮುಸ್ಲಿಂ ವಿದ್ಯಾರ್ಥಿಗಳನನ್ನು ಶಿಬಿರದಿಂದಲೇ ಹೊರಹಾಕಲಾಗಿದೆ.

ರೋಹಿಣಿ ಎಂಬ ಪ್ರದೇಶದಲ್ಲಿ ಶಿಬಿರ ನಡೆಯುತ್ತಿದ್ದು, ಆಡಳಿತ ಮಂಡಳಿ ಶಿಸ್ತಿನ ಕಾರಣದಿಂದ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಸೂಚನೆ ನೀಡಿದೆ. ಆದರೆ ವಿದ್ಯಾರ್ಥಿಗಳು ನಿರಾಕರಿಸಿದ ಕಾರಣ ಶಿಬಿರದಿಂದ ಹೊರಹಾಕಿ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.

ಆದರೆ ನಮ್ಮನ್ನು ಶಿಬಿರದಿಂದ ಹೊರಹಾಕಲು ಸೂಕ್ತ ಕಾರಣ ನೀಡದೆ, “ಅಶಿಸ್ತು” ಎಂದು ಮಾತ್ರ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ಆಗಮಿಸಿ ಪ್ರತಿಭಟನೆ ಸಹ ನಡೆಸಿದ್ದಾರೆ.

ನಾವು ಎನ್ ಸಿಸಿ ಶಿಬಿರದಲ್ಲಿ ಪಾಲ್ಗೊಳ್ಳುವ ಆಸಕ್ತಿ ಹೊಂದಿದ್ದರೂ ಬರೀ ಗಡ್ಡ ಬೋಳಿಸಿಲ್ಲ ಎಂಬ ಕಾರಣಕ್ಕಾಗಿಯೇ ಶಿಬಿರದಿಂದ ಹೊರಹಾಕಲಾಗಿದೆ. ಆದರೆ ನಮ್ಮ ಗಡ್ಡದಿಂದ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ ಎಂದು ಶಿಬಿರಾರ್ಥಿ ದಿಲ್ಶಾದ್ ಅಹ್ಮದ್ ಹೇಳಿದ್ದಾರೆ.

ಶಿಬಿರದ ನೇತೃತ್ವ ವಹಿಸಿಕೊಂಡಿದ್ದ ಲೆಫ್ಟಿನೆಂಟ್ ಕರ್ನಲ್ ಬಿ.ಎಸ್.ಯಾದವ್ ಈ ಕುರಿತು ಸ್ಪಷ್ಟನೆ ನೀಡಿದ್ದು, ನಾನು 26 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ಎನ್ ಸಿಸಿಯಲ್ಲಿ ಎಲ್ಲರೂ ಗಡ್ಡ ಬೋಳಿಸಿಕೊಂಡು ಶಿಸ್ತಿನಿಂದ ಇರಬೇಕು ಎಂಬುದು ನಿಯಮ. ನಾವು ಸಹ ಆ ವಿದ್ಯಾರ್ಥಿಗಳಿಗೆ ಶಿಷ್ಟಾಚಾರ ಪಾಲಿಸುವಂತೆ ತಿಳಿಸಿದ್ದೆವು. ಆದರೆ ಧರ್ಮದ ಕಾರಣವೊಡ್ಡಿ ಅವರು ಶಿಬಿರ ಬಿಟ್ಟು ತೊರೆದಿದ್ದಾರೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 3
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search