• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಒಮೆನ್ ದೇಶದಿಂದಲೇ ಹೈದರಾಬಾದ್ ಮಹಿಳೆಗೆ ತಲಾಖ್, ನ್ಯಾಯಕ್ಕೆ ಅಂಗಲಾಚುತ್ತಿರುವ ಮಹಿಳೆ

TNN Correspondent Posted On December 27, 2017


  • Share On Facebook
  • Tweet It

ಹೈದರಾಬಾದ್ : ಮುಸ್ಲಿಂ ಮಹಿಳೆಯೊಬ್ಬಳು ಒಮೆನ್ ದೇಶದವನೊಂದಿಗೆ ಮದುವೆಯಾಗಿ ಇದೀಗ ಪೇಚಿಗೆ ಸಿಲುಕಿದ್ದಾಳೆ. ಒಮೆನ್ ದೇಶದವನೊಂದಿಗೆ ಮದುವೆಯಾಗಿದ್ದ ಮಹಿಳೆಗೆ ಇದೀಗ ಫೋನ್ ನಲ್ಲೆ ತಲಾಖ್ ನೀಡಿ, ಸಂಬಂಧ ಕಡಿದುಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು, ಕೂಡಲೇ ಸರ್ಕಾರ ನೆರವಿಗೆ ಬರಬೇಕು ಎಂದು ಮಹಿಳೆ ಮನವಿ ಮಾಡಿದ್ದಾಳೆ.

ಹಳೆ ಹೈದರಾಬಾದ್ ನಲ್ಲಿ ವಾಸಿಸುತ್ತಿರುವ ಗೌಸಿಯಾ ಬೇಗಂ ತಲಾಖ್ ಅನ್ಯಾಯಕ್ಕೆ ಒಳಗಾದ ನತದೃಷ್ಟ ಮಹಿಳೆ.  ಒಮೆನ್ ದೇಶದ ಜಹ್ರಾನ್ ಅಲ್ ರಜಿ ಎಂಬಾತನೊಂದಿಗೆ 2008ರಲ್ಲಿ ಮದುವೆಯಾಗಿದ್ದೆ. ಒಮೆನ್ ದೇಶದ ನಿಯಮದಂತೆ ಎಲ್ಲ ದಾಖಲೆಗಳನ್ನು ಸಂಗ್ರಹಿಸಿ, ಮದುವೆಯಾಗಲಾಗಿತ್ತು. ಆತ ನನ್ನನ್ನು ಒಮೆನ್ ದೇಶಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದ. ಆದರೆ ಇದೀಗ ಮರೆತ್ತಿದ್ದಾನೆ.

ಹೈದರಾಬಾದ್ ನಲ್ಲಿ ಮದುವೆಯಾಗಿ ನನ್ನ ಜತೆ ಕೆಲ ದಿನ ಇದ್ದು ಒಮೆನ್ ದೇಶಕ್ಕೆ ಹೋಗಿದ್ದ. ನಂತರ ಪ್ರತಿ ತಿಂಗಳು ನನಗೆ 16 ರಿಂದ 17 ಸಾವಿರ ರೂಪಾಯಿ ಕಳುಹಿಸುತ್ತಿದ್ದ. ಆದರೆ 17 ಆಗಸ್ಟ್ 2017ರಂದು ಫೋನ್ ಮಾಡಿ, ತಲಾಖ್ ತಲಾಖ್ ತಲಾಖ್ ಎಂದು ಫೋನ್ ಕಟ್ ಮಾಡಿದ್ದಾನೆ. ನಂತರ ನಾನು ಹಲವು ಬಾರಿ ಪ್ರಯತ್ನಿಸಿದರೂ ಸಂಪರ್ಕಿಸಲು ಸಾಧ್ಯವಾಗಿಲ್ಲ. ಆತ ನನ್ನ ಕರೆಯನ್ನು ಸ್ವೀಕರಿಸುತ್ತಿಲ್ಲ. ನನಗೆ ಮೋಸ ಮಾಡಿದ್ದಾನೆ ಎಂದು ಮಹಿಳೆ ಕಣ್ಣೀರಿಟ್ಟಿದ್ದಾಳೆ.

ಪತಿಯಿಲ್ಲದೇ ಅನಾಥಳಾಗಿರುವ ಗೌಸಿಯಾ ತೆಲಂಗಾಣ ಸರ್ಕಾರದ ಮೂಲಕ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೆ ನೆರವು ನೀಡಲು ಮನವಿ ಮಾಡಿಕೊಂಡಿದ್ದಾಳೆ. ಕೇಂದ್ರ ಸಚಿವ ಸಂಪುಟ ಡಿಸೆಂಬರ್ 15ರಂದು ತಲಾಖ್ ನಿಷೇಧ ಕಾಯಿದೆಗೆ ಅಸ್ತು ಎಂದಿರುವ ವೇಳೆಯಲ್ಲೇ ಇಂತಹ ಘಟನೆ ಮರುಕಳಿಸಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search