• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಾಧವ್ ಪತ್ನಿ ಶೂ ಪಡೆದ ಪಾಕ್ ಗೆ ಚಪ್ಪಲಿ ಪಾರ್ಸೆಲ್ ಕಳುಹಿಸಿ ಅವಮಾನ

TNN Correspondent Posted On December 30, 2017


  • Share On Facebook
  • Tweet It

ದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನದಲ್ಲಿ ಬಂಧಿಸಲಾಗಿರುವ ಕುಲಭೂಷಣ್ ಜಾಧವ್ ಅವರ ಭೇಟಿ ವೇಳೆ ತಾಯಿ ಮತ್ತು ಪತ್ನಿಯನ್ನು ಅವಮಾನ ಮಾಡಿದ ಪಾಕ್ ಗೆ ಬಿಜೆಪಿ ಮುಖಂಡರೊಬ್ಬರು ಚಪ್ಪಲಿ ಕಳುಹಿಸಿ, ಸೇಡು ತೀರಿಸಿಕೊಂಡಿದ್ದಾರೆ.

ಪಾಕಿಸ್ತಾನಕ್ಕೆ ಭೇಟಿ ನೀಡುವ ವೇಳೆ ಕುಲಭೂಷಣ್ ಜಾಧವ್ ಅವರ ತಾಯಿ ಮತ್ತು ಪತ್ನಿಯ ಮಾಂಗಲ್ಯ, ಕುಂಕುಮ ಅಳಿಸಿ, ಬಟ್ಟೆ ಬದಲಾಯಿಸಿ ಮಾತನಾಡಲು ಅವಕಾಶ ನೀಡಿದ್ದರು. ಅಲ್ಲದೇ ಮಾತನಾಡಿ ಹೊರ ಬಂದ ನಂತರ ಜಾಧವ್ ಪತ್ನಿಯ ಶೂಗಳನ್ನು ಬಿಚ್ಚಿಕೊಂಡು ಅವಮಾನ ಮಾಡಿದ್ದರು. ಸಿಟ್ಟಿಗೆ ಸೇಡು ತೀರಿಸಿಕೊಂಡಿರುವ ದೆಹಲಿಯ ಬಿಜೆಪಿ ಮುಖಂಡ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ಆನ್ ಲೈನ್ ಮೂಲಕ ಚಪ್ಪಲಿ ಖರೀದಿಸಿ, ಪಾಕ್ ಹೈ ಕಮಿಷನರ್ ಕಚೇರಿಗೆ ಪಾರ್ಸೆಲ್ ಕಳುಹಿಸಿದ್ದಾರೆ.

ಪಾಕಿಸ್ತಾನದವರಿಗೆ ನಮ್ಮ ದೇಶದ ಮಹಿಳೆಯರ ಚಪ್ಪಲಿ ಬೇಕಲ್ಲವೇ, ಅದಕ್ಕಾಗಿ ಈ ಚಪ್ಪಲಿಗಳನ್ನು ಕಳುಹಿಸುತ್ತಿದ್ದೇನ. ಅವರು ಮಾಡಿದ ಅವಮಾನಕ್ಕೆ ಪ್ರತಿಕ್ರಿಯೆ ಇದು ಎಂದು ಬಗ್ಗಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ಟ್ವೀಟ್ ಮಾಡಿರುವ ತೇಜಿಂದರ್ ಪಾಲ್  ಸಿಂಗ್ ಬಗ್ಗಾ ‘ತೆಗೆದುಕೊಳ್ಳಿ ನಿಮಗೆ ಭಾರತದ ಚಪ್ಪಲಿ ಬೇಕಲ್ಲವೇ ಎಂದು ಪ್ರಶ್ನಿಸಿದ್ದು, ದೇಶವಾಸಿಗಳು ಆನ್ ಲೈನ್ ಮೂಲಕ ಪಾಕಿಸ್ತಾನಕ್ಕೆ ಚಪ್ಪಲಿಗಳನ್ನು ಕಳುಹಿಸುವ ಮೂಲಕ ತಕ್ಕ ಉತ್ತರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪಾಕಿಸ್ತಾನಕ್ಕೆ ಚಪ್ಪಲಿ ಕಳುಹಿಸುವುದು ಒಂದು ಆಂದೋಲನವಾಗಲಿ. ಪಾಕಿಸ್ತಾನ ಮಾಡಿರುವ ಅವಮಾನಕ್ಕೆ ಇದೇ ಸರಿಯಾದ ಉತ್ತರ ಎಂದು ಹೇಳಿದ್ದು, ರಾಷ್ಟ್ರೀಯವಾದಿಗಳು ಪಾಕಿಸ್ತಾನಕ್ಕೆ ಚಪ್ಪಲಿ ಕಳುಹಿಸಬೇಕು ಎಂಬ ಆನ್ ಲೈನ್ ಅಭಿಯಾನ ಆರಂಭಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search