• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತಕ್ಕೆ ರಾಜತಾಂತ್ರಿಕ ಜಯ: ಸಯೀದ್ ರ್ಯಾಲಿಯಲ್ಲಿ ಭಾಗವಹಿಸಿದ ಪ್ಯಾಲೆಸ್ತೀನ್ ರಾಯಭಾರಿ ವಾಪಸ್

TNN Correspondent Posted On December 31, 2017
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದ ರ್ಯಾಲಿಯಲ್ಲಿ 26/11 ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ಜತೆ ವೇದಿಕೆ ಹಂಚಿಕೊಂಡಿದ್ದ ಪ್ಯಾಲೆಸ್ತೀನ್ ರಾಯಭಾರಿಯನ್ನು ಪ್ಯಾಲೆಸ್ತೀನ್ ಭಾರತದ ಒತ್ತಡಕ್ಕೆ ಮಣಿದು ವಾಪಸ್ ಕರೆಸಿಕೊಂಡಿದೆ.

ಕಟ್ಟರ್ ಮುಸ್ಲಿಂ ರಾಷ್ಟ್ರವಾಗಿರುವ ಪ್ಯಾಲೆಸ್ತೀನ್ ಹಫೀಜ್ ಸಯೀದ್ ನನ್ನು ದೂರವಿಟ್ಟಿದ್ದು, ಭಾರತಕ್ಕೆ ದೊರೆತ  ರಾಜತಾಂತ್ರಿಕ ಜಯವಾಗಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಪಾಕಿಸ್ತಾನ ಮತ್ತು ಉಗ್ರ ಹಫೀಜ್ ಸಯೀದ್ ಗೆ ಕಠೋರ ಸಂದೇಶ ನೀಡಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ರ್ಯಾಲಿಯಲ್ಲಿ ಉಗ್ರ ಹಫೀಜ್ ಸಯೀದ್ ಜತೆ ಪ್ಯಾಲೆಸ್ತೀನ್ ರಾಯಭಾರಿ ವಲೀದ್ ಅಬು ವಾಲಿ ವೇದಿಕೆ  ಹಂಚಿಕೊಂಡಿದ್ದ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಭಾರತದ ಆಕ್ಷೇಪಕ್ಕೆ ಪ್ರತಿಕ್ರಿಯೆ ನೀಡಿರುವ ಭಾರತದಲ್ಲಿರುವ ಪ್ಯಾಲೆಸ್ತೀನ್ ರಾಯಭಾರಿ ಅದ್ನಾನ್ ಅಬು ಅಲ್ ಹೈಜಾ ‘ಭಾರತದ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಪ್ಯಾಲೆಸ್ತೀನ್ ಸದಾ ಬೆಂಬಲಿಸುತ್ತದೆ. ರಾಯಭಾರಿಯನ್ನು ವಾಪಸ್ಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಇತ್ತೀಚೆಗೆ ಜೇರುಸೆಲಂ ಇಸ್ರೇಲ್ ರಾಜಧಾನಿ ಎಂದು ಘೋಷಿಸಿದ್ದ ಅಮೆರಿಕಾದ ನಿರ್ಧಾರಕ್ಕೆ ಭಾರತ ಅಮೆರಿಕ ವಿರುದ್ಧ ನಿಲುವು ತಾಳಿತ್ತು. ಅಲ್ಲದೇ ಪ್ಯಾಲೆಸ್ತೀನ್ ಗೆ ಬೆಂಬಲ ಸೂಚಿಸಿತ್ತು. ಅಂದು ಭಾರತ ನೀಡಿದ ಬೆಂಬಲದಿಂದ ಇಂದು ಉಗ್ರ ಹಫೀಜ್ ಸಯೀದ್ ಜತೆ ವೇದಿಕೆ ಹಂಚಿಕೊಂಡ ರಾಯಭಾರಿ ಅಬು ವಲಿಯನ್ನು ವಾಪಸ್ಸ್ ಕರೆಸಿಕೊಂಡಿದ್ದು, ರಾಜತಾಂತ್ರಿಕವಾಗಿ ಮತ್ತು ವಿಶ್ವಮಟ್ಟದಲ್ಲಿ ಭಾರತಕ್ಕೆ ದೊರೆತ ಗೌರವ ಎಂದು ವಿಶ್ಲೇಷಣೆ ಮಾಡಲಾಗಿದೆ. ಮುಂದಿನ ವರ್ಷ ಪ್ರಧಾನಿ ನರೇಂದ್ರ ಮೋದಿ ಪ್ಯಾಲೆಸ್ತೀನ್ ಗೆ ಭೇಟಿ ನೀಡುತ್ತಿರುವುದು ಕೂಡ ಪ್ಯಾಲೆಸ್ತೀನ್ ಈ ನಿರ್ಧಾರಕ್ಕೆ ಕೈಗೊಳ್ಳಲು ಕಾರಣ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search