• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ಮುಸ್ಲಿಂ ರಾಷ್ಟ್ರದ ನಡೆಯನ್ನು ಮತ್ತೊಂದು ಮುಸ್ಲಿಂ ರಾಷ್ಟ್ರ ಖಂಡಿಸಿದ್ದು ಏಕೆ ಗೊತ್ತಾ?

TNN Correspondent Posted On December 31, 2017
0


0
Shares
  • Share On Facebook
  • Tweet It

ದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿ ಗಲ್ಲುಶಿಕ್ಷೆ ವಿಧಿಸಿ ಉದ್ಧಟತನ ಮೆರೆದಿರುವ ಪಾಕಿಸ್ತಾನದ ನಡೆಯನ್ನು ಮತ್ತೊಂದು ಮುಸ್ಲಿಂ ರಾಷ್ಟ್ರವಾದ ಅಫ್ಘಾನಿಸ್ತಾನವೇ ಖಂಡಿಸಿದೆ.

ಇತ್ತೀಚೆಗಷ್ಟೇ ಪಾಕಿಸ್ತಾನದಲ್ಲಿ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲು ಹೋದ ಅವರ ತಾಯಿ ಹಾಗೂ ಹೆಂಡತಿಯನ್ನು ಅವಮಾನಿಸಿದ ಪಾಕಿಸ್ತಾನದ ನಡೆಯನ್ನು ಅಫ್ಘಾನಿಸ್ತಾನ ಖಂಡಿಸಿದೆ.

ಎಂದಿಗೂ ಮನುಷ್ಯರನ್ನು ಮನುಷ್ಯರಂತೆಯೇ ನಡೆಸಿಕೊಳ್ಳಬೇಕು. ಯಾವುದೋ ದ್ವೇಷ, ಯಾವುದೋ ರಾಜಕೀಯ ಸಿಟ್ಟಿಗೆ ಅಮಾನವೀಯವಾಗಿ ನಡೆದುಕೊಳ್ಳಬಾರದು ಎಂದು ಭಾರತದಲ್ಲಿರುವ ಅಫ್ಘಾನಿಸ್ತಾನ ರಾಯಭಾರಿ ಶೈದಾ ಮೊಹಮ್ಮದ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಹಲವು ಬಾರಿ ಮನವಿ ಮಾಡಿದ ಬಳಿಕ ಜಾಧವ್ ಅವರನ್ನು ಭೇಟಿ ಮಾಡಲು ಒಪ್ಪಿಕೊಂಡಿದ್ದ ಪಾಕಿಸ್ತಾನ ಮೊದಲು ಮಾನವೀಯತೆಯ ಆಧಾರದ ಮೇಲೆ ಒಪ್ಪಿಕೊಂಡಿದ್ದಾಗಿ ತಿಳಿಸಿತ್ತು. ಆದರೆ ಜಾಧವ್ ಅವರ ತಾಯಿ ಹಾಗೂ ಪತ್ನಿ ಪಾಕಿಸ್ತಾನಕ್ಕೆ ತೆರಳುತ್ತಲೇ ಉದ್ಧಟತನ ಮೆರೆದಿತ್ತು.

ಜಾಧವ್ ಅವರನ್ನು ಭೇಟಿ ಮಾಡುವ ವೇಳೆ ಅವರ ತಾಯಿ ಹಾಗೂ ಪತ್ನಿಗೆ ಮಾತೃಭಾಷೆಯಲ್ಲಿ ಮಾತನಾಡಲು ಅವಕಾಶ ನೀಡಿರಲಿಲ್ಲ. ಅಲ್ಲದೆ ಜಾಧವ್ ಅವರ ಪತ್ನಿಯ ಮಂಗಳಸೂತ್ರ ತೆಗೆಸಿ, ಬಿಂದಿ ತೆಗೆಸಿ ಅವಮಾನ ಮಾಡಿತ್ತು. ಇದನ್ನು ಭಾರತ ಉಗ್ರವಾಗಿ ಖಂಡಿಸಿತ್ತು.

 

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search