• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೆನ್ನು, ಪುಸ್ತಕ ಹಿಡಿಯಬೇಕಿದ್ದ ಯುವಕ ಗನ್ನು ಹಿಡಿದು ಸೈನಿಕರ ಗುಂಡಿಗೆ ಬಲಿಯಾದ

TNN Correspondent Posted On January 1, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾ ಪ್ರದೇಶದಲ್ಲಿ ಸಿಆರ್ ಫಿಎಫ್ ಕ್ಯಾಂಪ್ ಮೇಲೆ ಉಗ್ರರು ನಡೆಸಿರುವ ದಾಳಿಯಲ್ಲಿ ಐದು ಯೋಧರು ಹುತಾತ್ಮರಾಗಿದ್ದು, ಮೂವರು ಭಯೋತ್ಪಾದಕರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದರು. ಆ ಇಬ್ಬರು ಭಯೋತ್ಪಾದಕರಲ್ಲಿ ಒಬ್ಬಾತ 10ನೇ ತರಗತಿ ಓದುತ್ತಿದ್ದ ಎಂಬ ಆಘಾತಕಾರಿ  ಮಾಹಿತಿ ಹೊರಬಿದ್ದಿದ್ದು, ಯುವಕರನ್ನು ಭಯೋತ್ಪಾದಕ ಸಂಘಟನೆಗಳು ಸೆಳೆಯುತ್ತಿವೆ ಎಂಬ ಆತಂಕ ಶುರುವಾಗಿದೆ.

ಕಾಶ್ಮೀರ ಕಣಿವೆಯಲ್ಲಿ ಯುವಕರು ಭಯೋತ್ಪಾದಕರೊಂದಿಗೆ ಕೈಜೋಡಿಸುತ್ತಿರುವುದು ಕ್ಷೀಣಿಸುತ್ತಿದೆ ಎಂಬ ಸಮಾಧಾನದಲ್ಲಿರುವಾಗಲೇ ಈ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಅಲ್ಲದೇ ಜಮ್ಮು, ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣಕ್ಕೆ ಹೋರಾಡುತ್ತಿರುವ ಸೈನ್ಯಕ್ಕೆ ಹೊಸ ಸವಾಲು ಎದುರಾಗಿದ್ದು, ಭಯೋತ್ಪಾದಕರು ಯುವಕರನ್ನು ಅದರಲ್ಲೂ ಏನೂ ಅರಿಯದ ಮುಗ್ದರನ್ನು ಸೆಳೆದು ಪಾಷವಿ ಕೃತ್ಯಕ್ಕೆ ಬಳಸುತ್ತಿರುವುದು ಮತ್ತೊಮ್ಮೆ ಸಾಬೀತಾಗಿದೆ.

ಸೈನಿಕರ ದಾಳಿಯಲ್ಲಿ ಮೃತಪಟ್ಟಿರುವ ಯುವಕನ ತಂದೆ ಕಾಶ್ಮೀರದವರು ಎಂಬುದು ಮತ್ತೊಂದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಮುಸ್ಲಿಂ ಮೂಲಭೂತವಾದಿಗಳು ಕಾಶ್ಮೀರದಲ್ಲಿ ಬಾಲಕರ ತಲೆ ಕೆಡಿಸಿ, ಬಲಿ ನೀಡುತ್ತಿದ್ದಾರೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಷ್-ಇ-ಮಹಮ್ಮದ್ ಪಲ್ವಾಮ್ ಪ್ರದೇಶದಲ್ಲಿ ನಡೆದ ದಾಳಿಯ ಹೊಣೆ ಹೊತ್ತಿದೆ.  ಕೆಲ ದಿನಗಳ ಹಿಂದೆ ಸೈನಿಕರು ಜೈಷ್ ಇ ಮಹಮ್ಮದ ಸಂಘಟನೆಯ ಕಮಾಂಡರ್ ಮಸೂದ್ ಅಜರ್ ನನ್ನು ಹೊಡೆದುರುಳಿಸಿತ್ತು. ಅದಕ್ಕೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತಿದೆ ಎನ್ನಲಾಗಿದೆ.

ಕೇಂದ್ರ ಮತ್ತು ಜಮ್ಮು ಮತ್ತು ಕಾಶ್ಮೀರ ಸರ್ಕಾರ 2017ರಲ್ಲಿ ಕೈಗೊಂಡ ಕಠಿಣ ಕ್ರಮಗಳಿಂದ ಕಣಿವೆ ರಾಜ್ಯದಲ್ಲಿ ತಕ್ಕಮಟ್ಟಿಗೆ ಶಾಂತಿ ನೆಲೆಸಿದೆ. ಅಲ್ಲದೇ ಯುವಕರು ಭಯೋತ್ಪಾದಕ ಸಂಘಟನೆಗಳಿಗೆ ಸೇರುವುದು ಕ್ಷೀಣಿಸಿತ್ತು. ಕೆಲವು ಯುವಕರು ಸೈನ್ಯದ ಮನವಿಗೆ ಸ್ಪಂದಿಸಿ, ಉಗ್ರ ಸಂಘಟನೆಗಳನ್ನು ತೊರೆದು ಮರಳಿ ಸಮಾಜದ ಮುನ್ನಲೆಗೆ ಬಂದಿದ್ದರು. ಆದರೆ ಇದೀಗ 10ನೇ ತರಗತಿಯ ಯುವಕ ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗಿ ಮೃತಪಟ್ಟಿರುವುದು ಉಗ್ರರು ಯುವಕರನ್ನು ಸೆಳೆಯುತ್ತಿದ್ದಾರೆ ಎಂಬುದು ಹೊಸ ಆತಂಕ ಮೂಡಿಸಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search