• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂತೂ ಬುದ್ಧಿ ಕಲಿತ ಪಾಕಿಸ್ತಾನ, ಸಯೀದ್ ಸಂಘಟನೆಗೆ ದೇಣಿಗೆ ಪಡೆಯದಂತೆ ನಿಷೇಧ!

TNN Correspondent Posted On January 2, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಇದುವರೆಗೂ ಉಗ್ರ ಹಫೀಜ್ ಸಯೀದ್ ಬೆಂಬಲಕ್ಕೆ ನಿಂತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಎಂದರೆ ಉಗ್ರರ ಪರ ಎಂಬ ಮಾತು ಕೇಳಿಬರುವಂತೆ ಮಾಡಿಕೊಂಡಿದ್ದ ಪಾಕಿಸ್ತಾನ ಕೊನೆಗೂ ಬುದ್ಧಿ ಕಲಿತಿದೆ.

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನ ಜಮಾತ್ ಉದ್ ದವಾ ಉಗ್ರ ಸಂಘಟನೆ ಹಾಗೂ ಪಲಾಹ್ ಇ ಇನ್ಸಾನಿಯತ್ ಉಗ್ರ ಸಂಘಟನೆ ಸೇರಿ ಹಲವು ಉಗ್ರ ಸಂಘಟನೆಗಳು ದೇಣಿಗೆ ಪಡೆಯುವಂತಿಲ್ಲ ಎಂದು ಪಾಕಿಸ್ತಾನ ವಿತ್ತೀಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ.

ವಿಶ್ವಸಂಸ್ಥೆ ನಿಷೇಧಿಸಿರುವ ಲಷ್ಕರೆ ತಯ್ಯಬಾ ಸೇರಿ ಯಾವುದೇ ನಿಷೇಧಿತ ಸಂಘಟನೆಗಳು ದೇಣಿಗೆ ಪಡೆಯುವಂತಿಲ್ಲ ಎಂದು ಪಾಕಿಸ್ತಾನದ ಭದ್ರತೆ ಹಾಗೂ ವಿನಿಮಯ ಆಯೋಗ ಆದೇಶಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜಮಾತ್ ಉದ್ ದವಾ, ಲಷ್ಕರೆ ತಯ್ಯಬಾ, ಪಲಾಹ್ ಇ ಇನ್ಸಾನಿಯತ್, ಪಾಸ್ಬಾನ್ ಇ ಅಲ್ಹೆ ಹದಿತ್, ಪಾಸ್ಬಾನ್ ಇ ಕಾಶ್ಮೀರ್ ಸಂಘಟನೆಗಳು ದೇಣಿಗೆ ನಿಷೇಧಿತ ಸಂಘಟನೆಗಳಲ್ಲಿ ಪ್ರಮುಖವಾಗಿವೆ ಎಂದು ಡಾನ್ ವರದಿ ಮಾಡಿದೆ.

ಇತ್ತೀಚೆಗಷ್ಟೇ ಹಫೀಜ್ ಸಯೀದ್ ನನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ್ದ ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ ಹಾಕಿಸಿಕೊಂಡ ಬಳಿಕ ಮತ್ತೆ ಗೃಹಬಂಧನದಲ್ಲಿಟ್ಟಿತ್ತು. ಈಗ ಉಗ್ರ ಸಂಘಟನೆಗಳು ದೇಣಿಗೆ ಪಡೆಯುವುದನ್ನು ನಿಷೇಧಿಸಿರುವುದು ಉತ್ತಮ ನಡೆಯಾದರೂ ಅದನ್ನು ಎಷ್ಟರಮಟ್ಟಿಗೆ ಉಳಿಸಿಕೊಳ್ಳುತ್ತದೆ ಹಾಗೂ ಎಷ್ಟರಮಟ್ಟಿಗೆ ಉಗ್ರರನ್ನು ಪೋಷಣೆ ಮಾಡದೆ ಶಿಕ್ಷಿಸುತ್ತದೆ ಎಂಬುದರ ಮೇಲೆ ಭಯೋತ್ಪಾದನೆ ಕುರಿತು ಪಾಕಿಸ್ತಾನದ ನಿಲುವನ್ನು ಅರ್ಥಮಾಡಿಕೊಳ್ಳಬಹುದಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search