• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ರಾಹುಲ್ ಗಾಂಧಿಯವರೇ ಲೋಕಪಾಲ್ ವಿಷಯದಲ್ಲಿ ಅಣ್ಣಾ ಹಜಾರೆಯವರನ್ನು ಬಂಧಿಸಿದ್ದು ನಿಮ್ಮ ಸರ್ಕಾರವೇ ಅಲ್ಲವೇ?

ವಿಶಾಲ್ ಗೌಡ ಕುಶಾಲನಗರ Posted On January 6, 2018
0


0
Shares
  • Share On Facebook
  • Tweet It

ಇದ್ದಿಲು ಮಸಿಗೆ ಹೇಳಿತ್ತಂತೆ ನೀನು ಕಪ್ಪು ಎಂದು, ಹಾಗಾಯಿತು ಈ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರ ಕತೆ.

ಅಣ್ಣಾ ಹಜಾರೆಯವರು ಜನಲೋಕಪಾಲ ಮಸೂದೆ ಜಾರಿ ಕುರಿತು ಹೋರಾಟ ಮಾಡುವುದಾಗಿ ಘೋಷಿಸುತ್ತಲೇ, ನಂದೆಲ್ಲಿ ಇಡಲಿ ಎಂಬಂತೆ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರೇ, ನಾಲ್ಕು ವರ್ಷವಾದರೂ ಜನಲೋಕಪಾಲ ಮಸೂದೆ ಏಕೆ ಜಾರಿಗೊಳಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ತಾವೇನು, ತಮ್ಮ ಸರ್ಕಾರ ಇದ್ದಾಗವೇನು ಜನಲೋಕಪಾಲ ಮಸೂದೆ ಜಾರಿಗೆ ತಾವೇ ಒತ್ತಾಯಿಸಿದವರು ಎಂಬಂತೆ ಮಾತನಾಡಿದ್ದಾರೆ. ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂಥ ಇಬ್ಬಂದಿತನಕ್ಕೆ, ಉಳುಕು ಮುಚ್ಚಿಕೊಳ್ಳುವ ಪ್ರಯತ್ನಕ್ಕೆ, ಮುಖವಾಡಕ್ಕೆ ಪರದೆ ಎಳೆಯುವ ವಿಫಲ ಯತ್ನಕ್ಕೆ ಏನೆನ್ನಬೇಕು ನೀವೇ ಹೇಳಿ?

ಅದು 2011. ಇದೇ ಅಣ್ಣಾ ಹಜಾರೆಯವರು ಜನಲೋಕಪಾಲ ಮಸೂದೆ ಜಾರಿಗಾಗಿ ಒತ್ತಾಯಿಸಿ ಅಣ್ಣಾ ಹಜಾರೆಯವರು ಉಪವಾಸ ಕುಳಿತಿದ್ದರು. ಇಡೀ ದೇಶಕ್ಕೆ ದೇಶವೇ ಅಣ್ಣಾ ಹಜಾರೆಯವರ ಪರ ನಿಂತಿತ್ತು. ಎಲ್ಲೆಡೆ ಬೆಂಬಲ ವ್ಯಕ್ತವಾಗಿತ್ತು. ಈಗ ಸುಬಗರಂತೆ ಮಾತನಾಡುತ್ತಿರುವ ರಾಹುಲ್ ಗಾಂಧಿಯವರ ತಾಯಿ, ಸೋನಿಯಾ ಗಾಂಧಿಯೇ ದೇಶವನ್ನು ಪರೋಕ್ಷವಾಗಿ ಆಳುತ್ತಿದ್ದರು, ಇವರ ಕೈಗೊಂಬೆಯಂತೆಯೇ ಇದ್ದ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು.

ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಅಣ್ಣಾ ಹಜಾರೆಯವರನ್ನು ಬಂಧಿಸಿತ್ತು. ಮಸೂದೆಗಾಗಿ ಹೋರಾಟ ನಡೆಸಿದ ಯೋಗಿ ಬಾಬಾ ರಾಮದೇವ್ ಅವರನ್ನೂ ಇದೇ ಕಾಂಗ್ರೆಸ್ ಸರ್ಕಾರ ಬಂಧನಕ್ಕೆ ಆದೇಶಿಸಿತ್ತು. ಆಗೆಲ್ಲ ಬಾಯಿಯಲ್ಲಿ ಕಡುಬು ತುರುಕಿಕೊಂಡಂತಿದ್ದ ರಾಹುಲ್ ಗಾಂಧಿ, ಮಸೂದೆ ಜಾರಿ ಪರ ನಿಲ್ಲದ ರಾಹುಲ್ ಗಾಂಧಿ ಈಗ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ಖಂಡಿತವಾಗಿಯೂ ಮಸೂದೆ ಜಾರಿಗಾಗಿ ಒತ್ತಾಯಿಸುವ ಎಲ್ಲ ಹಕ್ಕೂ ಅಣ್ಣಾ ಹಜಾರೆಯವರಿಗೆ. ಅವರು ಉಪವಾಸ ಕೂರಲೂ ಹಕ್ಕು ಹೊಂದಿದ್ದಾರೆ. ಆದರೆ ತಮ್ಮ ಸರ್ಕಾರವಿದ್ದಾಗ ಸುಮ್ಮನಿದ್ದ ರಾಹುಲ್ ಗಾಂಧಿ ಈಗ ಪ್ರಧಾನಿ ಮೋದಿ ಅವರನ್ನು ಟೀಕಿಸುವ ಹಿಂದೆ ಯಾವ ನೈತಿಕತೆ ಇದೆ? ಇಬ್ಬಂದಿತನ ಎಂದರೆ ಇದೇ ಅಲ್ಲವೇ?

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
ವಿಶಾಲ್ ಗೌಡ ಕುಶಾಲನಗರ December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
ವಿಶಾಲ್ ಗೌಡ ಕುಶಾಲನಗರ December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search