• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾತಿ, ಭೇದ ಮರೆತು ಜನ್ಮಭೂಮಿಗಾಗಿ ಒಗ್ಗೂಡಿ: ಭಾಗವತ್ ಸಲಹೆ

TNN Correspondent Posted On January 6, 2018
0


0
Shares
  • Share On Facebook
  • Tweet It

ಉಜ್ಜಯಿನಿ: ಭಾರತದ ನಿವಾಸಿಗಳು ಜಾತಿ, ಧರ್ಮಗಳನ್ನು ಮರೆತು ಜನ್ಮಭೂಮಿಯ ಅಭ್ಯುದ್ಯಯಕ್ಕಾಗಿ ಹೋರಾಡಲು ಒಂದುಗೂಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದರು.

ಉಜ್ಜಯಿನಿಯಲ್ಲಿ ನಡೆದ ಭಾರತ ಮಾತೆಯ 16 ಅಡಿಯ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ, ಪ್ರತಿಮೆ ಉದ್ಘಾಟಿಸಿ ಮಾತನಾಡಿ, ಭಾರತ ಕೇವಲ ಭೂಮಿಯ ಒಂದು ಭಾಗವಲ್ಲ, ಇದು ಭಾವನೆಗಳನ್ನು, ಸಂಸ್ಕೃತಿಯನ್ನು, ದಿವ್ಯ ಸಂದೇಶವನ್ನು ನೀಡುವುದು ಸೇರಿ ಎಲ್ಲವನ್ನು ಮೀರಿದ್ದು ಎಂದು ಹೇಳಿದ್ದಾರೆ.

ಭಾರತವಾಸಿಗಳ ಮೂಲ ಗುರಿ ಜನ್ಮಭೂಮಿ ರಕ್ಷಿಸುವುದೇ ಆಗಿರಬೇಕು. ಜನರು ಜಾತಿವಾದ ದ್ವೇಷ, ಮತ್ಸರಗಳಿಂದ ಹೊರಬರಬೇಕು. ಆಗ ಜನ್ಮಭೂಮಿಯ ರಕ್ಷಣೆ ಆಗುತ್ತದೆ ಎಂದು ಹೇಳಿದರು.

ಅಣ್ಣಾದೊರೈ ಸ್ಮರಿಸಿದ ಭಾಗವತ್: ತಮಿಳುನಾಡಿನ್ ಖಟರ್ ದ್ರಾವಿಡವಾದಿ, ಡಿಎಂಕೆ ಪಕ್ಷದ ಸಂಸ್ಥಾಪಕ ಅಣ್ಣಾದೊರೈ ಅವರ ರಾಷ್ಟ್ರೀಯತೆಯನ್ನು ಮೋಹನ್ ಭಾಗವತ್ ಸ್ಮರಿಸಿದರು. ಹಿಂದೆ ಅಣ್ಣಾದೊರೈ ತಮಿಳುನಾಡನ್ನು ಪ್ರತ್ಯೇಕ ದೇಶ ಎಂದು ಘೋಷಿಸಿದ್ದರು. ಆದರೆ 1962ರಲ್ಲಿ ನಡೆದ ಚೀನಾ ಭಾರತದ ಯುದ್ಧದ ವೇಳೆ ತಮ್ಮ ನಿಲುವು ಬದಲಾಯಿಸಿ, ಅಖಂಡ ಭಾರತದ ಬೆಂಬಲಕ್ಕೆ ಅಣ್ಣಾದೊರೈ ನಿಂತಿದ್ದರು. ಅದೇ ವಾಸ್ತವದಲ್ಲಿ ರಾಷ್ಟ್ರೀಯತೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವದ ವೇಳೆ ಜಾತಿ ಹೆಸರಲ್ಲಿ ನಡೆದ ಗಲಭೆ ವೇಳೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರ ಈ ಹೇಳಿಕೆ ತೀವ್ರ ಮಹತ್ವ ಪಡೆದುಕೊಂಡಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ವಿಶ್ವಹಿಂದೂ ಪರಿಷತ್ ಸೇರಿ ಹಲವು ಹಿಂದೂಪರ ಸಂಘಟನೆಗಳು ದೇಶದಲ್ಲಿ ಜಾತಿ ವ್ಯವಸ್ಥೆ ತೊಡೆದು ಹಾಕಬೇಕು ಎಂದು ಶ್ರಮಿಸುತ್ತಿರುವುದು ಗಮನಾರ್ಹ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search