• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಿದ್ದರಾಮಯ್ಯನವರ ಅಭಿವೃದ್ಧಿ ಬತ್ತಳಿಕೆ ಖಾಲಿ, ಮೋದಿ ತೆಗಳಿಕೆಯದ್ದೇ ಖಯಾಲಿ

ಸಂತೋಷ್ ಹೊನ್ನೆನಾಯಕನಹಳ್ಳಿ, ಮೈಸೂರು Posted On January 7, 2018


  • Share On Facebook
  • Tweet It

ನರೇಂದ್ರ ದಾಮೋದರ ದಾಸ್ ಮೋದಿ…

ಈ ಹೆಸರು ಕೇಳಿದೊಡನೇ  ದೇಶವಲ್ಲದೇ ವಿಶ್ವದ ನಾಯಕರೊಮ್ಮೆ ಭಾರತದತ್ತ ತಮ್ಮ ಚಿತ್ತವನ್ನು ಹರಿಸುತ್ತಾರೆ. ಈ ಪುಣ್ಯಾತ್ಮ ಏನು ಮಾತಾಡ್ತಾನೆ, ಏನು ಕೆಲಸ ಮಾಡ್ತಾನೆ, ಆತನ ವೇಗಕ್ಕೆ ನಾವೆಂದು ಹೊಂದಿಕೊಳ್ಳುವುದು ಎಂದು ಯೋಚಿಸುತ್ತಾರೆ. ನೋಟು ಬ್ಯಾನ್ ಮಾಡಿ ಜನರನ್ನು ಬ್ಯಾಂಕ್ ಮುಂದೆ ನಿಲ್ಲಿಸಿದರೂ ಜನರು ಇವರ ದೂರದೃಷ್ಟಿಯ ನೀತಿಗೆ ಬೆಂಬಲಿಸಿ, ಸಾಲು ಸಾಲು ರಾಜ್ಯಗಳಲ್ಲಿ ಗೆಲುವು ಸಾಧಿಸಿ, ಮುಂದುವರಿಸಿ ಮೋದಿ ನಿಮ್ಮ ಕಾರ್ಯ ನಾವು ನಿಮ್ಮ ಜತೆಗಿದ್ದೇವೆ ಎಂಬ ಭರವಸೆ ನೀಡುತ್ತಾರೆ.

ಜಿಎಸ್ ಟಿ, ಸರ್ಜಿಕಲ್ ಸ್ಟ್ರೈಕ್, ಜನಧನ್ ಯೋಜನಾ, ಮುದ್ರಾ ಯೋಜನೆ, ಕೃಷಿ ಸಿಂಚಾಯಿ ಯೋಜನೆ ಮೂಲಕ ಜಾತಿ, ಮತ ಪಂಥವನ್ನು ಮೆಟ್ಟಿ ನಿಂತ ಹಲವು ಯೋಜನೆಗಳನ್ನು ಜಾರಿ ಮಾಡಿ ಅಭಿವೃದ್ಧಿಯತ್ತ ಚಿತ್ತ ಹರಿಸುತ್ತಾರೆ. ವಿಶ್ವರಾಷ್ಟ್ರಗಳನ್ನು ಸುತ್ತಿ ಭಾರತದ ತಾಕತ್ತು ವಿಶ್ವಕ್ಕೆ ತೋರಿಸಿಕೊಟ್ಟಿದ್ದಾರೆ.

ಇನ್ನು ಅವರು ಪ್ರಧಾನಿ ಹುದ್ದೆಗೆ ಏರಿರುವುದು ಕೂಡ ಗುಜರಾತ್ ಎಂಬ ರಾಜ್ಯವನ್ನು ವಿಶ್ವಕ್ಕೆ ಮಾದರಿಯಾಗಿ ನಿರ್ಮಿಸಿದ ಮೂಲಕ ಎಂಬುದು ಗಮನಾರ್ಹ

ಆದರೆ ಕಳೆದ ನಾಲ್ಕುವರೆ ವರ್ಷಗಳಿಂದ ಕರ್ನಾಟಕದಲ್ಲಿ ಅಧಿಕಾರ ನಡೆಸುತ್ತಿರುವ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯವನ್ನು ಅಭಿವೃದ್ಧಿಯ ವಿಷಯದಲ್ಲಿ ಇದುವರೆಗೆ ಒಂದು ಭಾರಿಯೂ ವಿದೇಶ, ದೇಶ, ರಾಜ್ಯ ಬಿಡಿ ಹಳ್ಳಿಗಳ ಜನರ ಬಾಯಲ್ಲಿ ಒಂದು ಮಾತು ಬರುತ್ತಿಲ್ಲ. ಯಾಕೆಂದರೆ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಹೆಸರನ್ನು ಹಿಂದೂಗಳ ಮಾರಣ ಹೋಮ ನಡೆಸುವುದು, ಮುಸ್ಲಿಮರ ತುಷ್ಟೀಕರಣದ ರಾಜಕಾರಣ ಮಾಡುವುದು, ಮಲ್ಲಿಕಾರ್ಜುನ್ ಬಂಡೆ, ಡಿಕೆ ರವಿ, ಗಣಪತಿ, ಶಿಖಾರಂತ ನಿಷ್ಠಾವಂತ ಅಧಿಕಾರಿಗಳನ್ನು ಮಟ್ಟಹಾಕುವುದರಲ್ಲೇ ಸದಾ ಬ್ಯುಸಿಯಾಗಿರುತ್ತಾರೆ. ಇನ್ನು ಇವರಿಗೆ ಬೇರೆ ಮಾತೆಲ್ಲಿಂದ ಬರಬೇಕು.

ಸಿದ್ದರಾಮಯ್ಯ ಅವರು ಅಭಿವೃದ್ಧಿಯೆಂದರೆ ತಮ್ಮ ಸುತ್ತಮುತ್ತಲು ಇರುವವರ ಏಳಿಗೆ, ತಮ್ಮ ಸಚಿವರ ಅಭ್ಯುದ್ಯಯ ಮಾತ್ರವೇ ಎಂಬ ಸ್ಪಷ್ಟತೆ ನಾಲ್ಕು ವರೆ ವರ್ಷದಲ್ಲಿ ಸಿದ್ದರಾಮಯ್ಯ ಸಾಬೀತುಪಡಿಸಿದ್ದಾರೆ.

ಸಿದ್ದರಾಮಯ್ಯಗೆ ತಾವು ಮಾಡಿದ ಅಭಿವೃದ್ಧಿ ಮೇಲೆ ಭರವಸೆ ಇಲ್ಲವೇ..?

ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ನವಕರ್ನಾಟಕ ನಿರ್ಮಾಣ ಎಂಬ ಹೆಸರಲ್ಲಿ ಸರ್ಕಾರಿ ಯಂತ್ರವನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷದ ವಕ್ತಾರನಂತೆ ವರ್ತಿಸುತ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ. ಇದುವರೆಗೆ ನಡೆಸಿರುವ ನವಕರ್ನಾಟಕ ನಿರ್ಮಾಣದ ಪ್ರತಿ ಸಮಾವೇಶದಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೆಗಳುವುದು, ಟೀಕಿಸುವುದನ್ನು ಕಾಯಕ ಮಾಡಿಕೊಂಡಿದ್ದಾರೆ. ಆದರೆ ಅವರ ಬಳಿ ರಾಜ್ಯದಲ್ಲಿ ನಾಲ್ಕುವರೆ ವರ್ಷದಲ್ಲಿ ಮಾಡಿರುವ ಒಂದೇ ಒಂದು ಗಮನಾರ್ಹ ಯೋಜನೆ ಇಲ್ಲ ಎಂಬುದು ಅವರ ಮಾತುಗಳಲ್ಲೇ ಸಾಬೀತು ಪಡಿಸುತ್ತಿದ್ದಾರೆ.

ಜನರನ್ನು ಮಾತಿನಲ್ಲೇ ಮರಳು ಮಾಡಲು ಸದಾ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಗೇಲಿ ಮಾಡುವುದು, ಕಾರ್ಯಕರ್ತರಿಂದ ಶಿಳ್ಳೆ, ಚಪ್ಪಾಳೆ ಹೊಡೆಸಿಕೊಳ್ಳುವುದನ್ನೇ ಖಯಾಳಿ ಮಾಡಿಕೊಂಡಿದ್ದಾರೆ.

ಆಡಳಿತದ ಕೊನೆ ಅಂಚಿನಲ್ಲಿರುವ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ, ತಮ್ಮ ಸರ್ಕಾರದ ಶೂನ್ಯ ಅಭಿವೃದ್ಧಿಯನ್ನು ಜನರಿಂದ ಮರೆಮಾಚಲು ಕಸರತ್ತು ನಡೆಸುತ್ತಿದ್ದಾರೆ ಎಂಬುದು ಅವರ ಭಾಷಣಗಳಲ್ಲಿರುವ ಪದಬಳಕೆ, ವಿಚಾರದಲ್ಲೇ ಪದೇ ಪದೆ ಸಾಬೀತಾಗುತ್ತಿದೆ… ವೇದಿಕೆ ಮೇಲೆ ನೌಟಂಕಿ ಮಾಡುವ ಸಿದ್ದರಾಮಯ್ಯನವರನ್ನು, ಹಿಂದೂಗಳ ಮಾರಣ ಹೋಮ ನಡೆದರೂ ಕನಿಕರ ತೋರದ ಸಿದ್ದರಾಮಯ್ಯನವರಿಗೆ, ಅಭಿವೃದ್ಧಿಯ ಗಂಧ ಗಾಳಿ ತೋರಿಸದೇ ಐದು ವರ್ಷ ಕೈ ಕಮಾಂಡ್ ಆದೇಶ ಪಾಲಿಸಿ, ರಾಜ್ಯದ ಜನರ ಕಣ್ಣಿಗೆ ಮಣೆರೆಚಿದ ಸಿದ್ದರಾಮಯ್ಯನವರಿಗೆ ಪಾಠ ಕಲಿಸಬೇಕೋ, ಬೇಡವೋ..?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
ಸಂತೋಷ್ ಹೊನ್ನೆನಾಯಕನಹಳ್ಳಿ, ಮೈಸೂರು May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
ಸಂತೋಷ್ ಹೊನ್ನೆನಾಯಕನಹಳ್ಳಿ, ಮೈಸೂರು May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search