• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಸ್ಥಾನದಲ್ಲಿ ಪದ್ಮಾವತ್ ಸಿನಿಮಾ ಬಿಡುಗಡೆಯಾಗಲ್ಲ ಎಂದ ಸಿಎಂ

TNN Correspondent Posted On January 9, 2018
0


0
Shares
  • Share On Facebook
  • Tweet It

ಜೈಪುರ: ಸಂಜಯ್ ಲೀಲಾ ಬನ್ಸಾಲಿಯ ವಿವಾದಿತ ಪದ್ಮಾವತ್ ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ದಿನಾಂಕ ನಿಗದಿಪಡಿಸಿದರು ಸಹ ಬಿಡುಗಡೆಗೆ ಮಾತ್ರ ವಿರೋಧ ವ್ಯಕ್ತವಾಗುತ್ತಲೇ ಇದೆ.

ಯು/ಎ ಸರ್ಟಿಫಿಕೇಟ್ ನೀಡಿ ಜನವರಿ 25ರಂದು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಪಡಿಸಿದರೂ ರಜಪೂತರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ರಾಜಸ್ಥಾನ ಸಿಎಂ ವಸುಂಧರಾ ರಾಜೆ ಅವರು ಸಹ ಸಿನಿಮಾ ಬಿಡುಗಡೆಗೊಳಿಸಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಸಿನಿಮಾ ಬಿಡುಗಡೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ರಾಣಿ ಪದ್ಮಿನಿ ತ್ಯಾಗದ ಸಂಕೇತ, ಅವರು ರಾಜ್ಯದ ಹೆಮ್ಮೆ. ರಾಣಿ ಪದ್ಮಿನಿ ನಮಗೆ ಪರೀ ಪುಸ್ತಕದ ಒಂದು ಅಧ್ಯಾಯವಲ್ಲ, ನಮ್ಮ ಗೌರವದ  ಪ್ರತೀಕ. ಹಾಗಾಗಿ ಪದ್ಮಿನಿಯ ಗೌರವಕ್ಕೆ ಧಕ್ಕೆ ತರಲು ನಾವು ಬಿಡುವುದಿಲ್ಲ. ಆದ್ದರಿಂದ ರಾಜ್ಯದಲ್ಲಿ ಸಿನಿಮಾ ಬಿಡುಗಡೆಗೊಳಿಸಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಸಿನಿಮಾದಲ್ಲಿ ಪದ್ಮಿನಿಯನ್ನು ವಿಕ್ಷಿಪ್ತವಾಗಿ ಹಾಗೂ ವಾಸ್ತವಕ್ಕೆ ವಿರುದ್ಧವಾಗಿ ಚಿತ್ರಿಸಲಾಗಿದೆ ಎಂದು ತಿಳಿದುಬಂದಿದೆ. ಇದರಿಂದ ಸಮುದಾಯದವರ ಭಾವನೆಗೆ ಧಕ್ಕೆಯಾಗುತ್ತದೆ. ಹಾಗಾಗಿ ರಾಜ್ಯದ ಯಾವುದೇ ಸಿನಿಮಾ ಮಂದಿರದಲ್ಲೂ ಚಿತ್ರ ಬಿಡುಗಡೆಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆರಂಭದಿಂದಲೂ ಸಿನಿಮಾಗೆ ವಿರೋಧ ವ್ಯಕ್ತವಾಗಿತ್ತು. ಅದರಲ್ಲೂ ರಜಪೂತರು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದರು. ಮೊದಲು ಡಿಸೆಂಬರ್ 1ರಂದು ಸಿನಿಮಾ ಬಿಡುಗಡೆಗೆ ತೀರ್ಮಾನ ಮಾಡಲಾಗಿತ್ತಾದರೂ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಈಗ ಸೆನ್ಸಾರ್ ಮಂಡಳಿ ದಿನಾಂಕ ನಿಗದಿಪಡಿಸಿದರೂ ವಿರೋಧ ಮಾತ್ರ ನಿಂತಿಲ್ಲ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search