• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಜತೆ ಉತ್ತಮ ಸಂಬಂಧ ಹೊಂದುವುದು ಒಳ್ಳೆಯ ವಿಚಾರ ಎಂದ ಟ್ರಂಪ್

TNN Correspondent Posted On January 12, 2018
0


0
Shares
  • Share On Facebook
  • Tweet It

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗುವ ಮೊದಲು ಹಾಗೂ ಅಧ್ಯಕ್ಷರಾದ ಬಳಿಕವೂ ಭಾರತದ ಮೇಲೆ ವಿಶೇಷ ಒಲವು ಹೊಂದಿದ್ದಾರೆ. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ರಂಪ್ ನೀಡುವ ಸ್ವಾಗತ, ಪ್ರಾಮುಖ್ಯ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಅಮೆರಿಕ ಬೆಂಬಲ, ಪಾಕಿಸ್ತಾನದ ಭಯೋತ್ಪಾದನೆ ಪೋಷಣೆ ವಿರುದ್ಧ ಹೇಳಿಕೆ, ಪರಸ್ಪರ ಸಹಕಾರ ಸೇರಿ ಹಲವು ವಿಷಯಗಳಲ್ಲಿ ಭಾರತಕ್ಕೆ ಟ್ರಂಪ್ ಬೆಂಬಲಿಸುತ್ತಲೇ ಬಂದಿದ್ದಾರೆ.

ಇದೀಗ ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಡೊನಾಲ್ಡ್ ಟ್ರಂಪ್ ಭಾರತದ ಪರವಾಗಿಯೇ ಮಾತನಾಡಿದ್ದಾರೆ. ಭಾರತ ಸೇರಿ ಹಲವು ರಾಷ್ಟ್ರಗಳೊಂದಿಗೆ ಅಮೆರಿಕ ಉತ್ತಮ ಸಂಬಂಧ ಹೊಂದುವುದು ಒಳ್ಳೆಯ ವಿಚಾರವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ.

ಭಾರತ, ರಷ್ಯಾ ಹಾಗೂ ಚೀನಾ ರಾಷ್ಟ್ರಗಳು ಒಗ್ಗೂಡಿ ಕೆಲಸ ಮಾಡುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಇದರಿಂದ ಅಮೆರಿಕದ ಅಭಿವೃದ್ಧಿಗೂ ಪೂರಕ ಎಂದು ನಾರ್ವೇ ಪ್ರಧಾನಿ ಎರ್ನಾ ಸೋಲ್ಬರ್ಗ್ ಜತೆ ಮಾತುಕತೆ ನಡೆಸಿದ ಬಳಿಕ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಟ್ರಂಪ್ ತಿಳಿಸಿದ್ದಾರೆ.

ಭಾರತ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದ್ದು, ಅದರೊಟ್ಟಿಗೆ ಕೆಲಸ ಮಾಡುವುದು ಸಂತಸದ ಸಂಗತಿಯೇ ಆಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕ ಚುನಾವಣೆ ವೇಳೆಯಲ್ಲೂ ನನಗೆ ಮೋದಿ ಅವರ ಜತೆ ಕೆಲಸ ಮಾಡುವ ಬಯಕೆಯಿದೆ ಎಂದು ಟ್ರಂಪ್ ಹೇಳಿಕೆ ನೀಡಿದ್ದರು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search