• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಸ್ಟಿಸ್ ಲೋಯಾ ಸಾವಿಗೆ ಅಮಿತ್ ಶಾ ಕಾರಣ ಎನ್ನುವವರೇ ಕೇಳಿ ಲೋಯಾ ಪುತ್ರನ ಈ ಮಾತು..

TNN Correspondent Posted On January 15, 2018
0


0
Shares
  • Share On Facebook
  • Tweet It

ಮುಂಬೈ: ಸೋಹ್ರಾಬುದ್ಧೀನ್ ಶೇಖ್ ಎನಕೌಂಟರ್ ಪ್ರಕರಣವನ್ನು ಆಲಿಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಬ್ರಿಜ್ ಮೋಹನ್ ಲೋಯಾ ಅವರ ಸಾವಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾರಣ ಎಂದು ಆರೋಪಿಸುವವರಿಗೆ ಲೋಯಾ ಪುತ್ರ ತಕ್ಕ ಉತ್ತರ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿರುವ ಲೋಯಾ ಪುತ್ರ ಅನುಜ್ ಲೋಯಾ, ‘ನನ್ನ ತಂದೆಯದ್ದೂ ಸಹಜ ಸಾವು. ನಮ್ಮ ಕುಟುಂಬಕ್ಕೆ ಸಾವಿನ ಬಗ್ಗೆ ಯಾವುದೇ ಅನುಮಾನಗಳಿಲ್ಲ. ಕೆಲ ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳಿಂದ ಕುಟುಂಬದ ನೆಮ್ಮದಿಗೆ ಭಂಗ ಉಂಟಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಕುಟುಂಬ ಸಾವಿನ ಬಗ್ಗೆ ಯಾರ ಮೇಲೂ ಅನುಮಾನವಿಲ್ಲ. ಆದರೆ ತಂದೆ ಸಾವಿನಲ್ಲಿ ರಾಜಕೀಯ ಮಾಡುತ್ತಿರುವುದು ನೋವಿನ ಸಂಗತಿ. ನಾವು ತಂದೆ ಕಳೆದುಕೊಂಡ ದುಖಃದಿಂದ ಹೊರಬರಲು ಪ್ರಯತ್ನಿಸುತ್ತಿದ್ದೇವೆ. ದಯವಿಟ್ಟು ನಮ್ಮನ್ನು ನಮ್ಮಷ್ಟಕ್ಕೆ ಬಿಟ್ಟು ಬಿಡಿ ಎಂದು ಅಂಗಲಾಚಿದರು.

ನನ್ನ ತಂದೆಯದ್ದೂ ಸಹಜ ಸಾವು. ನಮ್ಮ ಇಡೀ ಕುಟುಂಬಕ್ಕೆ ಅದು ಸಹಜ ಸಾವು ಎಂಬುದು ತಿಳಿದಿದೆ. ನನಗೆ ಸಾವಿನಲ್ಲಿ ಯಾವುದೇ ಅನುಮಾನಗಳು ಉಳಿದಿಲ್ಲ. ನನ್ನ ತಂದೆ ಸಾವನ್ನು ವಾದಕ್ಕೆ ಬಳಸಲು ನಾನು ಇಷ್ಟಪಡುವುದಿಲ್ಲ ಮತ್ತು ಯಾರ ಮೇಲೂ ಆರೋಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು

ಲೋಯಾ ಸ್ನೇಹಿತ, ನಿವೃತ್ತ ಜಿಲ್ಲಾ ಜಡ್ದ್ ಕೆ.ಬಿ. ಕಟಕ್ ಮಾತನಾಡಿ, ಮಾಧ್ಯಮದವರು, ರಾಜಕಾರಣಿಗಳು, ನಾನಾ ಸಂಘಟನೆಗಳು, ನ್ಯಾಯವಾದಿಗಳು, ರಾಜಕಾರಣಿಗಳು ಪದೇ ಪದೆ ಲೋಯಾ ಸಾವಿನ ಬಗ್ಗೆ ಕೇಳುತ್ತಿರುವುದರಿಂದ ಕುಟುಂಬಕ್ಕೆ ತೀವ್ರ ತೊಂದರೆಯಾಗುತ್ತಿದೆ. ಸಾವಿನ ಬಗ್ಗೆ ಕುಟುಂಬದವರಿಗೆ ಮತ್ತು ಆತ್ಮೀಯರಿಗೆ ಯಾವುದೇ ಅನುಮಾನಗಳಿಲ್ಲ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search