• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ್ ಕೇಜ್ರಿವಾಲ್ ಅವರಿಗೆ ಅಣ್ಣಾ ಹಜಾರೆ ಪರೋಕ್ಷ ಟಾಂಗ್ ನೀಡಿದ್ದು ಹೇಗೆ ಗೊತ್ತಾ?

TNN Correspondent Posted On January 16, 2018
0


0
Shares
  • Share On Facebook
  • Tweet It

ದೆಹಲಿ: ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಆಡಳಿತದಿಂದ ಬೇಸತ್ತಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪರೋಕ್ಷವಾಗಿ ಕೇಜ್ರಿವಾಲ್ ಅವರಿಗೆ ಟಾಂಗ್ ನೀಡಿದ್ದಾರೆ.

ಮುಂದೆ ನಾನು ನಡೆಸುವ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳುವ ಯಾರೂ ರಾಜಕಾರಣ ಸೇರುವುದಿಲ್ಲ ಎನ್ನುವ ಮೂಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಟಾಂಗ್ ನೀಡಿದ್ದಾರೆ.

2011ರಲ್ಲಿ ನಾನು ಆರಂಭಿಸಿದ ಹೋರಾಟದಲ್ಲಿ ಪಾಲ್ಗೊಳ್ಳುವವರ ಕುರಿತು ಎಚ್ಚರದಿಂದ ಇರಲಿಲ್ಲ. ಆದರೆ ಮುಂದೆ ನಡೆಸುವ ಹೋರಾಟದಲ್ಲಿ ಪಾಲ್ಗೊಳ್ಳುವ ಯಾವುದೇ ವ್ಯಕ್ತಿಯೂ ರಾಜಕೀಯ ಸೇರಲ್ಲ, ರಾಜಕೀಯ ಮಾಡಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದು ಅಣ್ಣಾ ಹಜಾರೆ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.

2011ರಲ್ಲಿ ಜನಲೋಕಪಾಲ ಬಿಲ್ ಜಾರಿಗಾಗಿ ಬೃಹತ್ ಹೋರಾಟ, ಉಪವಾಸ ಸತ್ಯಾಗ್ರಹ ನಡೆಸಿದ್ದ ಅಣ್ಣಾ ಹಜಾರೆ ಅವರು ಇಡೀ ದೇಶದ ಗಮನ ಸೆಳೆದಿದ್ದರು. ಅಲ್ಲದೆ ಕೇಂದ್ರ ಸರ್ಕಾರದ ವಿರುದ್ಧದ ಅವರ ಹೋರಾಟಕ್ಕೆ ಅಪಾರ ಜನ ಬೆಂಬಲ ಸೂಚಿಸಿದ್ದರು.

ವಕೀಲರಾಗಿದ್ದ ಅರವಿಂದ್ ಕೇಜ್ರಿವಾಲ್ ಅಣ್ಣಾ ಹಜಾರೆಯವರ ಹೋರಾಟಕ್ಕೆ ಬೆಂಬಲ ನೀಡುವ ಮೂಲಕ ಮುಖ್ಯವಾಹಿನಿಗೆ ಬಂದಿದ್ದರು. ಅಲ್ಲದೆ ಅಣ್ಣಾ ಹಜಾರೆಯವರ ವಿರೋಧ, ಆಕ್ಷೇಪದ ನಡುವೆಯೂ ಆಮ್ ಆದ್ಮಿ ಪಾರ್ಟಿ ಕಟ್ಟಿ ದೆಹಲಿಯ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಆದರೆ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರ, ವಿವಾದಾತ್ಮಕ ಹೇಳಿಕೆ, ದೆಹಲಿಯಲ್ಲಿ ಅತ್ಯಾಚಾರ ಸೇರಿ ಹಲವು ಪ್ರಕರಣ ತಡೆಯುವಲ್ಲಿ ವಿಫಲ ಸೇರಿ ಹಲವು ಕಾರಣಗಳಿಂದ ಅಣ್ಣಾ ಹಜಾರೆಯವರು ಅರವಿಂದ್ ಕೇಜ್ರಿವಾಲ್ ಬಗ್ಗೆ ಅಸಮಾಧಾನವಿದೆ ಎನ್ನಲಾಗುತ್ತಿದೆ.

ಅಲ್ಲದೆ ತಮ್ಮ ಹೋರಾಟದಿಂದ ಮುಂದೆಯೂ ಮತ್ತೊಬ್ಬ ರಾಜಕಾರಣಿ ಉದಯಿಸುವುದು ಹಜಾರೆಯವರಿಗೆ ಇಷ್ಟವಿಲ್ಲದ ಕಾರಣ ಈ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search