• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತ್ ಮಾತಾ ಕೀ ಎಂದಿದ್ದಕ್ಕೇ ವಿದ್ಯಾರ್ಥಿಗಳ ಅಮಾನತು ಮಾಡಿತೇ ಆ ಕ್ರಿಶ್ಚಿಯನ್ ಶಾಲೆ?

TNN Correspondent Posted On January 16, 2018


  • Share On Facebook
  • Tweet It

ಭೋಪಾಲ್: ಪ್ರಾಯಶಃ ಭಾರತದಲ್ಲಿ ಮಾತ್ರ ಹೀಗೆ ಆಗಬಹುದೇನೋ? ಮಧ್ಯಪ್ರದೇಶದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಮೊಳಗಿಸಿದ ಕಾರಣಕ್ಕಾಗಿಯೇ ಶಾಲೆಯ ಆಡಳಿತ ಮಂಡಳಿ 20 ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎಂಬ ಆರೋಪ ಕೇಳಿಬಂದಿವೆ.

ಮಧ್ಯಪ್ರದೇಶದ ರಟ್ಲಾಮ್ ಪ್ರದೇಶದಲ್ಲಿರುವ ಸೇಂಟ್ ಜೋಸೆಫ್ ಶಾಲೆಯ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.

ಜನವರಿ  1ರಂದು ಎಂದಿನಂತೆ ಪ್ರಾರ್ಥನೆ ಮುಗಿದಿದ್ದು, ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಆದರೆ ಇದರಿಂದ ಕುಪಿತಗೊಂಡ ಶಾಲೆಯ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ ಎಂಬ ಆರೋಪ ಕೇಳಿಬಂದಿವೆ.

ಈ ಕುರಿತು ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು ಹಲವು ಹಿಂದೂ ಸಂಘಟನೆಗಳೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅಲ್ಲದೆ ಸೋಮವಾರ ಘಟನೆಗೆ ಸಂಬಂಧಿಸಿದಂತೆ ರ್ಯಾಲಿ ನಡೆಸಿದ್ದು, ರಾಜ್ಯವ್ಯಾಪಿ ಬಂದ್ ಕರೆ ನೀಡಿದ್ದಾರೆ.

“ ಶಾಲೆಯಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಕ್ಕೇ ಸುಮಾರು 20 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಇದು ಖಂಡನೀಯ” ಎಂದು ಬಜರಂಗದಳ ಮುಖಂಡ ರಾಜೇಶ್ ಪರಿಹಾರ್ ಆರೋಪಿಸಿದ್ದಾರೆ. ಆದಾಗ್ಯೂ ಶಾಲೆಯ ಆಡಳಿತ ಮಂಡಳಿ ಆರೋಪವನ್ನು ತಿರಸ್ಕರಿಸಿದೆ.

ಆದರೆ ಇತ್ತೀಚೆಗೆ ಕಾಲೇಜೊಂದರಲ್ಲಿ ಭಾರತ್ ಮಾತಾ ಆರತಿ ಕಾರ್ಯಕ್ರಮಕ್ಕೆ ಪೊಲೀಸರು ನಿಷೇಧ ಹೇರಿದ್ದರು. ಈಗ ಶಾಲೆಯಲ್ಲಿ ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೇ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಹಾಗಾದರೆ ಭಾರತ್ ಮಾತಾ ಕೀ ಜೈ ಎನ್ನುವುದೇ ತಪ್ಪೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search