• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರಕುಶಲ ಮೇಳದಲ್ಲಿ ಮುಸ್ಲಿಮರಿಂದ ಪಾಕ್ ಪರ ಘೋಷಣೆ, ಒಬ್ಬನ ಬಂಧನ

TNN Correspondent Posted On January 17, 2018
0


0
Shares
  • Share On Facebook
  • Tweet It

ಜೈಪುರ: ರಾಜಸ್ಥಾನದಲ್ಲಿ ಕೆಲವು ಮುಸ್ಲಿಂ ಮೂಲಭೂತವಾದಿಗಳ ಉಪಟಳ ಹಾಗೂ ಜಮ್ಮು-ಕಾಶ್ಮೀರದಲ್ಲಿ ನಡೆದ ಮಾದರಿಯಲ್ಲಿ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಈ ಸಂಬಂಧ ಒಬ್ಬನನ್ನು ಬಂಧಿಸಿದ್ದಾರೆ.

ಕಳೆದ 15 ದಿನಗಳಿಂದ ರಾಜಸ್ಥಾನದ ಜುಂಝುನು ಜಿಲ್ಲೆಯ ಉದಯ್ ಪುರ್ವಾತಿ ಪಟ್ಟಣದಲ್ಲಿ ಕರಕುಶಲ ವಸ್ತುಗಳ ಮೇಳ ನಡೆಯುತ್ತಿದ್ದು, ಜನವರಿ 7ರಂದು ಮುಸ್ಲಿಂ ವ್ಯಕ್ತಿಯೊಬ್ಬ ಮೇಳದಲ್ಲಿ ಗಲಾಟೆ ನಡೆಸಿದ್ದು, ಜನರ ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ. ಕೂಡಲೇ ಎಚ್ಚೆತ್ತ ಸಾರ್ವಜನಿಕರು ಈತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ಆರೀಫ್ ಎಂದು ಗುರುತಿಸಲಾಗಿದೆ.

ಆದರೆ ತಪ್ಪು ಮುಸ್ಲಿಂ ವ್ಯಕ್ತಿಯದಿದ್ದರೂ, ಪೊಲೀಸರು ಆತನನ್ನು ಬಂಧಿಸಿದ ಕಾರಣ ಆಕ್ರೋಶಗೊಂಡ ಕೆಲ ಮುಸ್ಲಿಮರ ತಂಡ ಪೊಲೀಸ್ ಠಾಣೆಗೆ ನುಗ್ಗಿದ್ದಾರೆ. ಅಲ್ಲದೆ ಆರೋಪಿಯನ್ನು ಬಿಡುಗಡೆ ಮಾಡುವಂತೆ ಗಲಾಟೆ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತಿ ಉದ್ವೇಗ ಪಡೆದುಕೊಂಡ ಕಾರಣ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಜತೆಗೆ ಬಜರಂಗದಳ ಸಂಘಟನೆಯ ಮುಖಂಡ ರೋಹಿತಾಶ್ ಸೈನಿ ಎಂಬುವರ ಮೇಲೂ ಮುಸ್ಲಿಮರ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಬಂಧಿತ ಆರೀಫನಿಂದ ಕಂಟ್ರಿ ಪಿಸ್ತೂಲ್ ಒಂದನ್ನು ವಶಪಡಿಸಿಕೊಂಡಿದ್ದು, ಮುಸ್ಲಿಮರ ತಂಡದಲ್ಲಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಂದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದಾಗ್ಯೂ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಹಾಗೂ ಹಿಂದೂ ಮುಖಂಡರ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಪೊಲೀಸರು ಸುಮಾರು 21 ಮುಸ್ಲಿಮರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಕರಕುಶಲ ವಸ್ತುಗಳ ಮೇಳದಲ್ಲಿ ಮುಸ್ಲಿಂ ವ್ಯಕ್ತಿಯೇಕೆ ದಾಳಿ ಮಾಡಬೇಕು? ಏಕೆ ಸುಖಾಸುಮ್ಮನೆ ಗಲಭೆ ನಡೆಸಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search