• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರಕುಶಲ ಮೇಳದಲ್ಲಿ ಮುಸ್ಲಿಮರಿಂದ ಪಾಕ್ ಪರ ಘೋಷಣೆ, ಒಬ್ಬನ ಬಂಧನ

TNN Correspondent Posted On January 17, 2018
0


0
Shares
  • Share On Facebook
  • Tweet It

ಜೈಪುರ: ರಾಜಸ್ಥಾನದಲ್ಲಿ ಕೆಲವು ಮುಸ್ಲಿಂ ಮೂಲಭೂತವಾದಿಗಳ ಉಪಟಳ ಹಾಗೂ ಜಮ್ಮು-ಕಾಶ್ಮೀರದಲ್ಲಿ ನಡೆದ ಮಾದರಿಯಲ್ಲಿ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಈ ಸಂಬಂಧ ಒಬ್ಬನನ್ನು ಬಂಧಿಸಿದ್ದಾರೆ.

ಕಳೆದ 15 ದಿನಗಳಿಂದ ರಾಜಸ್ಥಾನದ ಜುಂಝುನು ಜಿಲ್ಲೆಯ ಉದಯ್ ಪುರ್ವಾತಿ ಪಟ್ಟಣದಲ್ಲಿ ಕರಕುಶಲ ವಸ್ತುಗಳ ಮೇಳ ನಡೆಯುತ್ತಿದ್ದು, ಜನವರಿ 7ರಂದು ಮುಸ್ಲಿಂ ವ್ಯಕ್ತಿಯೊಬ್ಬ ಮೇಳದಲ್ಲಿ ಗಲಾಟೆ ನಡೆಸಿದ್ದು, ಜನರ ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ. ಕೂಡಲೇ ಎಚ್ಚೆತ್ತ ಸಾರ್ವಜನಿಕರು ಈತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ಆರೀಫ್ ಎಂದು ಗುರುತಿಸಲಾಗಿದೆ.

ಆದರೆ ತಪ್ಪು ಮುಸ್ಲಿಂ ವ್ಯಕ್ತಿಯದಿದ್ದರೂ, ಪೊಲೀಸರು ಆತನನ್ನು ಬಂಧಿಸಿದ ಕಾರಣ ಆಕ್ರೋಶಗೊಂಡ ಕೆಲ ಮುಸ್ಲಿಮರ ತಂಡ ಪೊಲೀಸ್ ಠಾಣೆಗೆ ನುಗ್ಗಿದ್ದಾರೆ. ಅಲ್ಲದೆ ಆರೋಪಿಯನ್ನು ಬಿಡುಗಡೆ ಮಾಡುವಂತೆ ಗಲಾಟೆ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತಿ ಉದ್ವೇಗ ಪಡೆದುಕೊಂಡ ಕಾರಣ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಜತೆಗೆ ಬಜರಂಗದಳ ಸಂಘಟನೆಯ ಮುಖಂಡ ರೋಹಿತಾಶ್ ಸೈನಿ ಎಂಬುವರ ಮೇಲೂ ಮುಸ್ಲಿಮರ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಬಂಧಿತ ಆರೀಫನಿಂದ ಕಂಟ್ರಿ ಪಿಸ್ತೂಲ್ ಒಂದನ್ನು ವಶಪಡಿಸಿಕೊಂಡಿದ್ದು, ಮುಸ್ಲಿಮರ ತಂಡದಲ್ಲಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಂದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದಾಗ್ಯೂ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಹಾಗೂ ಹಿಂದೂ ಮುಖಂಡರ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಪೊಲೀಸರು ಸುಮಾರು 21 ಮುಸ್ಲಿಮರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಕರಕುಶಲ ವಸ್ತುಗಳ ಮೇಳದಲ್ಲಿ ಮುಸ್ಲಿಂ ವ್ಯಕ್ತಿಯೇಕೆ ದಾಳಿ ಮಾಡಬೇಕು? ಏಕೆ ಸುಖಾಸುಮ್ಮನೆ ಗಲಭೆ ನಡೆಸಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search