• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಕಪ್ಪು ಹಣದ ವಿರುದ್ಧದ ಹೋರಾಟ, 1.2 ಲಕ್ಷ ನಕಲಿ ಕಂಪನಿಗಳ ನೋಂದಣಿ ರದ್ದು

TNN Correspondent Posted On January 17, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರ ನೋಟು ನಿಷೇಧ ಮಾಡಿದ ಬಳಿಕ ಘೀಳಿಟ್ಟವರಿಗೆ ಲೆಕ್ಕವಿಲ್ಲ. ನೋಟ್ ಬ್ಯಾನ್ ಯಶಸ್ವಿಯಾದರೂ ಅದರಿಂದ ದೇಶಕ್ಕೆ ಯಾವ ಲಾಭವಾಯಿತು ಎಂದು ಪ್ಯಾದೆಗಳ ಹಾಗೆ ಕೇಳುವವರಿಗೇನೂ ಕಡಿಮೆಯಿಲ್ಲ. ಆದರೂ, ಯಾರು ಏನೇ ಅಂದರೂ ಸಹ ನೋಟು ನಿಷೇಧದಿಂದ ಮಾತ್ರ ಕಪ್ಪು ಹಣ ತಹಬಂದಿಗೆ ಬಂದಿದೆ ಎಂಬುದು ಮಾತ್ರ ಸುಳ್ಳಲ್ಲ.

ಈ ದಿಸೆಯಲ್ಲಿಯೇ ಕೇಂದ್ರ ಸರ್ಕಾರ ಮುನ್ನುಗ್ಗುತ್ತಿದ್ದು, 1.2 ಲಕ್ಷ ನಕಲಿ ಕಂಪನಿಗಳ ನೋಂದಣಿಯನ್ನು ರದ್ದುಗೊಳಿಸಿದ್ದು, ಕಪ್ಪು ಕುಳಗಳಿಗೆ ಭಾರಿ ಒಡಪೆಟ್ಟು ನೀಡಿದೆ.

ನೋಟು ನಿಷೇಧದ ಬಳಿಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ, ವಹಿವಾಟು ನಡೆಸಿದ ಆರೋಪದಲ್ಲಿ ವಿವಿಧ ಇಲಾಖೆಗಳಿಂದ ಇಷ್ಟು ಕಂಪನಿಗಳ ನೋಂದಣಿಯನ್ನು ರದ್ದುಪಡಿಸಲಾಗಿದೆ.

ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ನಕಲಿ ಕಂಪನಿಗಳ ಹೆಸರು ರದ್ದುಗೊಳಿಸಲಾಗಿದೆ ಎಂದು ಕಾರ್ಪೊರೇಟ್ ವ್ಯವಹಾರಗಳ ಇಲಾಖೆ ಸಹಾಯಕ ಸಚಿವ ಪಿ.ಪಿ. ಚೌಧರಿ ಮಾಹಿತಿ ನೀಡಿದ್ದಾರೆ.

ನೋಟು ನಿಷೇಧದ ಬಳಿಕ ಇದುವರೆಗೆ 2.26 ಲಕ್ಷ ನಕಲಿ ಕಂಪನಿಗಳ ನೋಂದಣಿ ರದ್ದುಪಡಿಸಲಾಗಿತ್ತು. ಈ ಪಟ್ಟಿಗೆ ಮತ್ತೆ 1.2 ಲಕ್ಷ ಕಂಪನಿಗಳು ಸೇರಿವೆ. ಅಲ್ಲದೆ ವಿವಿಧ ಕಂಪನಿಗಳ 3.09 ಲಕ್ಷ ನಿರ್ದೇಶಕರನ್ನು ಸಹ ಸರ್ಕಾರ ಕಿತ್ತೊಗೆದಿದೆ. ಒಟ್ಟಿನಲ್ಲಿ ನೋಟು ನಿಷೇಧದ ಬಳಿಕ ಕಪ್ಪುಕುಳಗಳಿಗೆ ಮಾತ್ರ ಸರ್ಕಾರ ತಕ್ಕಪಾಠ ಕಲಿಸುತ್ತಿದೆ.

 

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search