• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಸ್ಟಿಸ್ ಲೋಯಾ ಸಾವಿಗೆ ಹೃದಯಾಘಾತ ಕಾರಣ: ನಾಗಪುರ ಪೊಲೀಸ್

TNN Correspondent Posted On January 18, 2018
0


0
Shares
  • Share On Facebook
  • Tweet It

ನಾಗಪುರ: ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಕುರಿತು ವಿಚಾರಣೆ ನಡೆಸುತ್ತಿದ್ದ ಜಸ್ಟಿಸ್ ಲೋಯಾ ಸಾವಿನಲ್ಲಿ ವಿನಾಕಾರಣ ಅನುಮಾನಗಳನ್ನು ಹುಟ್ಟು ಹಾಕಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಹಣಿಯಲು ಯತ್ನಿಸುತ್ತಿರುವ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಿಗೆ ಇತ್ತೀಚೆಗೆ ಲೋಯಾ ಪುತ್ರ ತಕ್ಕ ಉತ್ತರ ನೀಡಿದ್ದರು. ಇದೀಗ ಲೋಯಾ ಸಾವಿನ ಕುರಿತು ತನಿಖೆ ನಡೆಸಿರುವ ಪೊಲೀಸರು ಕೂಡ ಸ್ಪಷ್ಟನೆ ನೀಡಿದ್ದಾರೆ.

ಜಸ್ಟಿಸ್ ಲೋಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರ ಸಾವಿನ ಹಿಂದೆ ಯಾವುದೆ ಸಂಚು ನಡೆದಿಲ್ಲ. ವೈದ್ಯಕೀಯ ವರದಿಯಲ್ಲಿ ಲೋಯಾ ಸಾವಿಗೆ ಹೃದಯಾಘಾತ ಕಾರಣ ಎಂಬುದು ತಿಳಿದು ಬಂದಿದೆ ಎಂದು ತನಿಖೆ ನಡೆಸಿರುವ ನಾಗಪುರ ಜಂಟಿ ಪೊಲೀಸ್ ಆಯುಕ್ತ ಶಿವಾಜಿ ಬೋಡ್ಕೆ ಸ್ಪಷ್ಟಪಡಿಸಿದ್ದಾರೆ.

ಲೋಯಾ ಸಾವಿನ ಕುರಿತು ಎದ್ದಿರುವ ಹಲವು ಪ್ರಶ್ನೆಗಳಿಗೆ, ಆರೋಪಗಳ ಕುರಿತು ಸ್ಪಷ್ಟನೆ ನೀಡಲು ಸುದ್ದಿಗೋಷ್ಠಿ ನಡೆಸಿದ ನಾಗಪುರ ಜಂಟಿ ಪೊಲೀಸ್ ಆಯುಕ್ತ ಶಿವಾಜಿ ಬೋಡ್ಕೆ, ವೈದ್ಯಕೀಯ ವರದಿ ಮತ್ತು ಫೋರೆನಿಕ್ಸ್ ವರದಿ ಪ್ರಕಾರ ಲೋಯಾ ಸಾವಿಗೆ ಹೃದಯಾಘಾತ ಕಾರಣ ಎಂಬುದು ಸಾಬೀತಾಗಿದೆ. ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದ್ದಾರೆ.

ವೈದ್ಯಕೀಯ ವರದಿಯಲ್ಲಿ ಲೋಯಾ ದೇಹದಲ್ಲಿ ಯಾವುದೇ ರೀತಿಯ ಗಾಯಗಳಾಗಲಿ, ಗುರುತುಗಳಾಗಲಿ, ಮತ್ತು ದೇಹದಲ್ಲಿ ವಿಷ ಪದಾರ್ಥಗಳಾಗಲಿ ಕಂಡು ಬಂದಿಲ್ಲ. ಕೊಲೆ ಆಗಿದೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ತಿಳಿಸಿದ್ದಾರೆ.

ನಾಗಪುರದಲ್ಲಿ 2014 ಡಿಸೆಂಬರ್ 1 ರಂದು ಜಸ್ಟಿಸ್ ಲೋಯಾ ಸಹೋದ್ಯೋಗಿಯ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಹೃದಯಾಘಾತಕ್ಕೆ ಒಳಗಾಗಿ, ಮೃತಪಟ್ಟಿದ್ದರು. ಇನ್ನು ಇತ್ತೀಚೆಗೆ ಲೋಯಾ ಪುತ್ರ ಅನುಜ್ ಲೋಯಾ ಕೂಡ ಸ್ಪಷ್ಟನೆ ನೀಡಿ, ನಮ್ಮ ತಂದೆಯದ್ದೂ ಸಹಜ ಸಾವು. ನಮ್ಮ ಕುಟುಂಬಕ್ಕೆ ತೊಂದರೆ ಕೊಡಬೇಡಿ ಎಂದು  ಬೇಡಿಕೊಂಡಿದ್ದರು. ಆದರೆ ಇಷ್ಟೇಲ್ಲಾ ಸಾಕ್ಷಿ ಸಮೇತ ಹೇಳಿಕೆ ಬಂದರೂ ವಿರೋಧ ಪಕ್ಷಗಳು ಲೋಯಾ ಸಾವಿನ ಕುರಿತು ಅನುಮಾನವ ವ್ಯಕ್ತಪಡಿಸುವುದನ್ನು ಮುಂದುವರಿಸಿವೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search