• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜುನೈದ್ ಖಾನ್ ಹತ್ಯೆ ಖಂಡಿಸಿದವರು, ಮುಸ್ಲಿಮರು ಮಾಡಿದ್ದಾರೆ ಎನ್ನಲಾದ ಈ ಹಲ್ಲೆ ಖಂಡಿಸುವವರು ಯಾರಿದ್ದಾರೆ?

TNN Correspondent Posted On January 18, 2018
0


0
Shares
  • Share On Facebook
  • Tweet It

ಪಟನಾ: ಹತ್ಯೆ ಯಾವುದೇ ವ್ಯಕ್ತಿಯ ಮೇಲಾಗಲಿ, ಅದು ತಪ್ಪು ಹಾಗೂ ಖಂಡನೀಯ. ನಾವೂ ಯಾವುದೇ ಜೀವ ಹೋಗಲಿ, ಹತ್ಯೆಯಾಗಲಿ ಎಂದು ಬಯಸುವುದಿಲ್ಲ ಹಾಗೂ ಯಾರೂ ಹಾಗೆ ಮಾಡಬಾರದು ಎಂಬ ಆಶಾಭಾವನೆ ಹೊಂದಿದ್ದೇವೆ.

ಆದರೆ ಹತ್ಯೆ ವಿಚಾರದಲ್ಲಿ ಕೆಲವರು ತೋರಿಸುವ ಇಬ್ಬಂದಿತನ ಮಾತ್ರ ಖಂಡಿಸುತ್ತೇವೆ. ಹರಿಯಾಣದಲ್ಲಿ ರೈಲಿನಲ್ಲಿ ಪ್ರಯಾಣಿಸುವಾಗ ಜುನೈದ್ ಖಾನ್ ನನ್ನು ಹತ್ಯೆ ಮಾಡಿದಾಗ, ಅಬ್ಬರಿಸಿ ಬೊಬ್ಬಿರಿದರಲ್ಲ ರಾಜಕಾರಣಿಗಳು ಅಂಥ ಇಬ್ಬಂದಿತನ ಬಯಲು ಮಾಡುವುದು ಉದ್ದೇಶ.

ಏಕೆಂದರೆ, ಬಿಹಾರದ ಗಯಾ ಬಳಿ ಸೀಲ್ದಾಹ್ ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರ ಮೇಲೆ ಇಬ್ಬರು ಮುಸ್ಲಿಮರು ಹಲ್ಲೆ ಮಾಡಿದ್ದು, ಸುಶಾಂತ್ ಬೆಹೆರಾ ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಆದರೂ ಯಾವುದೇ ಒಬ್ಬ ರಾಜಕಾರಣಿ ಹಿಂದೂ ವ್ಯಕ್ತಿಯ ಮೇಲಿನ ಈ ಹಲ್ಲೆಯನ್ನು ಖಂಡಿಸಿಲ್ಲ.

ರೈಲಿನ ಬಿ.13ನೇ ಕೋಚ್ ನಲ್ಲಿ ಸುಶಾಂತ್ ಚಲಿಸುತ್ತಿದ್ದು, ಆಗ ಇಬ್ಬರು ವ್ಯಕ್ತಿಗಳು ವಿನಾಕಾರಣ ಜಗಳ ತೆಗೆದಿದ್ದಾರೆ. ಅಲ್ಲದೆ ತಮ್ಮ ಸಂಬಂಧಿಕರನ್ನು ಸಹ ಕರೆಸಿ ಹಲ್ಲೆ ಮಾಡಿದ್ದಾರೆ. ಹಾಗಾಗಿ ಸುಶಾಂತ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಶಾಂತ್ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈಗ ಕೋಲ್ಕತ್ತಾ ಮೂಲದ ಪೊಲೀಸರು ಹಲ್ಲೆ ಮಾಡಿದ ಆರೋಪದಲ್ಲಿ ಎಂ.ಡಿ.ಜೈದ್ ಹಾಗೂ ಇರ್ಕದ್ ಜೈದ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಯಾವುದೇ ವ್ಯಕ್ತಿಯ ಮೇಲೆ ಹಲ್ಲೆಯಾದರೂ, ಆತನ ಜಾತಿ, ಧರ್ಮ ನೋಡಿ ಹೋರಾಟಕ್ಕಿಳಿಯುವ ರಾಜಕಾರಣಿಗಳು, ಬುದ್ಧಿಜೀವಿಗಳು, ಪ್ರಗತಿಪರರ, ಪ್ರಕಾಶ್ ರೈ ಅವರಂಥ ಜೀವಪರರು ಹಿಂದೂವಿನ ಮೇಲೆ ನಡೆದ ಈ ಹಲ್ಲೆಯನ್ನು ಖಂಡಿಸುವುದಿಲ್ಲ. ಇದು ಇಬ್ಬಂದಿತನವಲ್ಲವೇ?

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search