• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜುನೈದ್ ಖಾನ್ ಹತ್ಯೆ ಖಂಡಿಸಿದವರು, ಮುಸ್ಲಿಮರು ಮಾಡಿದ್ದಾರೆ ಎನ್ನಲಾದ ಈ ಹಲ್ಲೆ ಖಂಡಿಸುವವರು ಯಾರಿದ್ದಾರೆ?

TNN Correspondent Posted On January 18, 2018
0


0
Shares
  • Share On Facebook
  • Tweet It

ಪಟನಾ: ಹತ್ಯೆ ಯಾವುದೇ ವ್ಯಕ್ತಿಯ ಮೇಲಾಗಲಿ, ಅದು ತಪ್ಪು ಹಾಗೂ ಖಂಡನೀಯ. ನಾವೂ ಯಾವುದೇ ಜೀವ ಹೋಗಲಿ, ಹತ್ಯೆಯಾಗಲಿ ಎಂದು ಬಯಸುವುದಿಲ್ಲ ಹಾಗೂ ಯಾರೂ ಹಾಗೆ ಮಾಡಬಾರದು ಎಂಬ ಆಶಾಭಾವನೆ ಹೊಂದಿದ್ದೇವೆ.

ಆದರೆ ಹತ್ಯೆ ವಿಚಾರದಲ್ಲಿ ಕೆಲವರು ತೋರಿಸುವ ಇಬ್ಬಂದಿತನ ಮಾತ್ರ ಖಂಡಿಸುತ್ತೇವೆ. ಹರಿಯಾಣದಲ್ಲಿ ರೈಲಿನಲ್ಲಿ ಪ್ರಯಾಣಿಸುವಾಗ ಜುನೈದ್ ಖಾನ್ ನನ್ನು ಹತ್ಯೆ ಮಾಡಿದಾಗ, ಅಬ್ಬರಿಸಿ ಬೊಬ್ಬಿರಿದರಲ್ಲ ರಾಜಕಾರಣಿಗಳು ಅಂಥ ಇಬ್ಬಂದಿತನ ಬಯಲು ಮಾಡುವುದು ಉದ್ದೇಶ.

ಏಕೆಂದರೆ, ಬಿಹಾರದ ಗಯಾ ಬಳಿ ಸೀಲ್ದಾಹ್ ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರ ಮೇಲೆ ಇಬ್ಬರು ಮುಸ್ಲಿಮರು ಹಲ್ಲೆ ಮಾಡಿದ್ದು, ಸುಶಾಂತ್ ಬೆಹೆರಾ ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಆದರೂ ಯಾವುದೇ ಒಬ್ಬ ರಾಜಕಾರಣಿ ಹಿಂದೂ ವ್ಯಕ್ತಿಯ ಮೇಲಿನ ಈ ಹಲ್ಲೆಯನ್ನು ಖಂಡಿಸಿಲ್ಲ.

ರೈಲಿನ ಬಿ.13ನೇ ಕೋಚ್ ನಲ್ಲಿ ಸುಶಾಂತ್ ಚಲಿಸುತ್ತಿದ್ದು, ಆಗ ಇಬ್ಬರು ವ್ಯಕ್ತಿಗಳು ವಿನಾಕಾರಣ ಜಗಳ ತೆಗೆದಿದ್ದಾರೆ. ಅಲ್ಲದೆ ತಮ್ಮ ಸಂಬಂಧಿಕರನ್ನು ಸಹ ಕರೆಸಿ ಹಲ್ಲೆ ಮಾಡಿದ್ದಾರೆ. ಹಾಗಾಗಿ ಸುಶಾಂತ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಶಾಂತ್ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈಗ ಕೋಲ್ಕತ್ತಾ ಮೂಲದ ಪೊಲೀಸರು ಹಲ್ಲೆ ಮಾಡಿದ ಆರೋಪದಲ್ಲಿ ಎಂ.ಡಿ.ಜೈದ್ ಹಾಗೂ ಇರ್ಕದ್ ಜೈದ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಯಾವುದೇ ವ್ಯಕ್ತಿಯ ಮೇಲೆ ಹಲ್ಲೆಯಾದರೂ, ಆತನ ಜಾತಿ, ಧರ್ಮ ನೋಡಿ ಹೋರಾಟಕ್ಕಿಳಿಯುವ ರಾಜಕಾರಣಿಗಳು, ಬುದ್ಧಿಜೀವಿಗಳು, ಪ್ರಗತಿಪರರ, ಪ್ರಕಾಶ್ ರೈ ಅವರಂಥ ಜೀವಪರರು ಹಿಂದೂವಿನ ಮೇಲೆ ನಡೆದ ಈ ಹಲ್ಲೆಯನ್ನು ಖಂಡಿಸುವುದಿಲ್ಲ. ಇದು ಇಬ್ಬಂದಿತನವಲ್ಲವೇ?

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search