• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

14 ವರ್ಷದ ಬಾಲಕಿ ಅಪಹರಣ, ಇಸ್ಲಾಮಿಗೆ ಮತಾಂತರ, 4 ವರ್ಷದ ಬಳಿಕ ತಪ್ಪಿಸಿಕೊಂಡ ಆಕೆಯ ಗೋಳು ಹೇಳತೀರದು…

TNN Correspondent Posted On January 18, 2018


  • Share On Facebook
  • Tweet It

ಭೋಪಾಲ್: ದೇಶದಲ್ಲಿ ದಿನೇದಿನೆ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಜನರನ್ನು ದಂಗುಬಡಿಸುತ್ತಿರುವ ಬೆನ್ನಲ್ಲೇ ಮತ್ತೊಂದು ಲವ್ ಜಿಹಾದ್ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ಶಾಜಾಪುರದಲ್ಲಿ ಘಟನೆ ನಡೆದಿದ್ದು, 2013ರಲ್ಲಿ ಆಸಿಫ್ ಎಂಬ ವ್ಯಕ್ತಿ ರಾಜಾ ಎಂದು ಹೆಸರು ಬದಲಾಯಿಸಿಕೊಂಡು ಶಾಜಾಪುರಕ್ಕೆ ಬಂದು ಟೀ ಅಂಗಡಿ ಇಟ್ಟಿದ್ದ. ಟೀ ಮಾರಿಕೊಂಡಿರದೆ ಬಾಲಕಿಯೊಬ್ಬಳಿಗೆ ದಿನಾಲೂ ಪೀಡಿಸಿ, ಮಾತುಕತೆ ನಡೆಸುತ್ತಿದ್ದ. ಅಲ್ಲದೆ ಆಕೆಗೆ ಹೊಸ ಬಟ್ಟೆ ಕೊಡಿಸಿ ಮರಳು ಮಾಡಿದ್ದ ಎಂದು ತಿಳಿದುಬಂದಿದೆ.

ಅದಾದ ನಂತರ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರಗೈದಿದ್ದ. ಅಲ್ಲದೆ ಬಲವಂತವಾಗಿ ಇಸ್ಲಾಮಿಗೆ ಮತಾಂತರಗೊಳಿಸಿದ್ದ, ಅದೂ ಅಲ್ಲದೆ ಬಾಲಕಿ ಕೈ ಮೇಲಿದ್ದ ಓಂ ಅಕ್ಷರವನ್ನು ಆ್ಯಸಿಡ್ ಹಾಕಿ ಸುಟ್ಟಿದ್ದ ಎಂಬ ಕರಾಳ ಸತ್ಯ ಹೊರಬಿದ್ದಿದೆ.

ಅದಾಗಲೇ ಆಸಿಫ್ ಗೆ ಮದುವೆಯಾಗಿದ್ದು ಮಕ್ಕಳು ಸಹ ಇವೆ ಎಂದು ಮೂಲಗಳು ತಿಳಿಸಿವೆ. ಇಷ್ಟಾದರೂ ಬಾಲಕಿಯನ್ನು ಅಪಹರಿಸಿ ಆಯೇಷಾ ಎಂದು ಹೆಸರು ಬದಲಾಯಿಸಿದ್ದ. 2 ವರ್ಷದ ಹಿಂದೆ ಬಾಲಕಿಗೆ ಮಗು ಸಹ ಆಗಿದೆ ಎಂದು ತಿಳಿದುಬಂದಿದೆ.

ಕೊನೆಗೂ ಎಚ್ಚೆತ್ತುಕೊಂಡ ಬಾಲಕಿ ಬಟ್ಟೆ ಹೊಲೆಸಿಕೊಂಡು ಬರುತ್ತೇನೆ ಎಂದು ಹೊರಬಂದು ತಪ್ಪಿಸಿಕೊಂಡಿದ್ದಾಳೆ. ಬಾಲಕಿ ಈಗ ಪೋಷಕರ ಬಳಿಯಿದ್ದು, ಆಸಿಫ್ ನೀಡಿದ ನೀಡಿದ ಕಿರುಕುಳದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಹಿಂದೂ ಸಂಘಟನೆಗಳ ಮುಖಂಡರು ಜಿಲ್ಲಾ ವರಿಷ್ಠಾಧಿಕಾರಿ ಶೈಲೇಂದ್ರ ಸಿಂಗ್ ಅವರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಯನ್ವಯ ಹಾಗೂ ಅಪಹರಣ ಕುರಿತು ಪ್ರಕರಣ ದಾಖಲಿಸಲಾಗಿದೆ. ದೇವಾಸ್ ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search