• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಒಂಟಿ ತೋಳ ಮಾದರಿ ದಾಳಿಗೆ ಮುಸ್ಲಿಂ ಉಗ್ರ ಸಂಘಟನೆಗಳ  ಸಂಚು

TNN Correspondent Posted On January 19, 2018
0


0
Shares
  • Share On Facebook
  • Tweet It

ದೆಹಲಿ: ಕಾಶ್ಮೀರ ಕಣಿವೆಯಲ್ಲಿ ಉಗ್ರ ಸಂಘಟನೆಗಳು ಮತ್ತು ಪ್ರತ್ಯೇಕವಾದಿಗಳ ಹೆಡೆ ಮುರಿ ಕಟ್ಟಿರುವ ಕೇಂದ್ರ ಸರ್ಕಾರ ಮತ್ತು ಸೈನ್ಯದ ಗಟ್ಟಿ ನಿಲುವು ಮುಸ್ಲಿಂ ಉಗ್ರ ಸಂಘಟನೆಗಳ ಅಸ್ತಿತ್ವವನ್ನೇ ಅಲುಗಾಡಿಸಿವೆ. ಆದರೂ ತಮ್ಮ ಕುತಂತ್ರ ಮುಂದುವರಿಸಿರುವ ಮುಸ್ಲಿಂ ಮೂಲಭೂತವಾದಿ ಸಂಘಟನೆಗಳು ಕಾಶ್ಮೀರ ಕಣಿವೆಯ ಯುವಕರಿಗೆ ತೀವ್ರಗಾಮಿ ಚಿಂತನೆಗಳನ್ನು ಬಿತ್ತಿ, ಒಂಟಿ ತೋಳದ ಮಾದರಿಯಲ್ಲಿ ದಾಳಿ ನಡೆಸುವ ಹುನ್ನಾರ ನಡೆಸಿವೆ ಎಂಬ ಮಾಹಿತಿ ಕೇಂದ್ರ ಗೃಹ ಇಲಾಖೆಯಿಂದಲೇ ಹೊರಬಿದ್ದಿದೆ.

ಐಎಸ್ ಐಎಸ್ ದುಷ್ಕೃತ್ಯ ತಡೆಗಟ್ಟಲು ಕೇಂದ್ರ ಗೃಹ ಇಲಾಖೆಯ ಸೈಬರ್ ವಿಭಾಗವು ಜಮ್ಮು ಕಾಶ್ಮೀರ ಪ್ರದೇಶದಲ್ಲಿ ಟೆಲಿಗ್ರಾಮ್ ನಲ್ಲಿ ಯುವಕರನ್ನು ಧರ್ಮದ ಹೆಸರಲ್ಲಿ ಪ್ರಚೋಧಿಸುವ ಲೇಖನ, ಚಿತ್ರಗಳ ಪ್ರಸಾರವನ್ನು ತಡೆಹಿಡಿದಿದೆ. ಈ ಮಾರ್ಗದ ಮೂಲಕ ಯುವಕರಲ್ಲಿ ಮೂಲಭೂತವಾದಿ ಚಿಂತನೆಗಳನ್ನು  ಬಿತ್ತಿ, ದುಷ್ಕೃತ್ಯಕ್ಕೆ ಸೆಳೆಯುವ ಸಂಚು ಐಎಸ್ ಐಎಸ್ ಹೂಡಿದೆ.

ಇತ್ತೀಚೆಗೆ ಸೈಬರ್ ವಿಂಗ್ ಐಸಿಸ್ ಪರವಾದ, ಯುವಕರನ್ನು ದುಷ್ಕೃತ್ಯಗಳಿಗೆ ಪ್ರಚೋಧಿಸುವ ಲೇಖನ, ಚಿತ್ರಗಳನ್ನು ಪ್ರಕಟಿಸುತ್ತಿದ್ದ ಟೆಲಿಗ್ರಾಮ್ ಚಾನಲ್ ವೊಂದನ್ನು ಪತ್ತೆ ಹಚ್ಚಿತ್ತು. ಅದರಲ್ಲಿ ಷರಿಯಾ ಕಾನೂನು ಜಾರಿ ಮಾಡುವ ಕುರಿತು ಯುವಕರಿಗೆ ಬೋಧಿಸಲಾಗುತ್ತಿತ್ತು. 23 ಸೆಪ್ಟೆಂಬರ್ 2017ರಂದು ಟೆಲಿಗ್ರಾಮ್ ಪ್ರಕಟಿಸಲಾಗಿದ್ದು, ಅದೇ ವರ್ಷ ಅಕ್ಟೋಬರ್ 3 ರಂದು ಹೊಸದಾಗಿ ಹೆಸರು ಬದಲಾಯಿಸಲಾಗಿದೆ.

ಕೇಂದ್ರ ಗೃಹ ಇಲಾಖೆ ವರದಿ ಪ್ರಕಾರ ‘ಟೆಲಿಗ್ರಾಮ್ ಚಾನೆಲ್ ನಲ್ಲಿ ಒಂಟಿ ತೋಳ ಮಾದರಿಯಲ್ಲಿ ಹೇಗೆ ದಾಳಿ ನಡೆಸಬೇಕು, ದಾಳಿಯಲ್ಲಿರಬೇಕಾದ ವರ್ತನೆಗಳು, ಬಾಂಬ್ ದಾಳಿಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ಅಲ್ಲದೇ ಕಾಶ್ಮೀರದಲ್ಲಿ ಮುಸ್ಲಿಂ ರಾಷ್ಟ್ರಕ್ಕೆ ಬೆಂಬಲಿಸಿ ಎಂಬ ಹ್ಯಾಷ್ ಟ್ಯಾಗ್ ಕೂಡ ರಚಿಸಲಾಗಿದೆ. ಇದೇ ಮಾದರಿಯ ಹ್ಯಾಷ್ ಟ್ಯಾಗ್ ನ್ನು 2014ರಲ್ಲಿ ಇರಾಕ್ ಮತ್ತು ಸಿರಿಯಾದಲ್ಲಿ ಬಳಸಲಾಗಿತ್ತು. ಅದು ಭಾರಿ ಪರಿಣಾಮ ಬೀರಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆ ಹರಡುವ ಪೇಜ್ ಗಳ ಅಡ್ಮಿನ್ ಗಳ ಬಗ್ಗೆ ನಿಗಾಯಿರಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search